AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ತೆಲುಗಿನ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದ ವೇಳೆ ಈ ಕಹಿ ಘಟನೆ ನಡೆದಿದೆ. ಈ ಸಿನಿಮಾದ ನಟಿ ನಿಧಿ ಅಗರ್​ವಾಲ್ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದ್​ದಾರೆ. ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲು ಮಾಡಿಕೊಂಡು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು
Nidhi Agarwal
ಮದನ್​ ಕುಮಾರ್​
|

Updated on: Dec 18, 2025 | 7:25 PM

Share

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ‘ಸಹನಾ ಸಹನಾ..’ ಹಾಡು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಪ್ರಭಾಸ್ ಮತ್ತು ನಿಧಿ ಅಗರ್​ವಾಲ್ ಅವರು ಕಾಣಿಸಿಕೊಂಡಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಖುಷಿಯಿಂದ ನಿಧಿ ಅಗರ್​ವಾಲ್ ಅವರಿಗೆ ಕಹಿ ಅನುಭವ ಆಗಿದೆ. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ.

ನಿಧಿ ಅಗರ್​ವಾಲ್ ಅವರನ್ನು ಜನರು ಮುತ್ತಿಗೆ ಹಾಕಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಜನರಿಂದ ಕಿರಿಕಿರಿ ಅನುಭವಿಸಿದ ನಿಧಿ ಅವರನ್ನು ಬಾಡಿಗಾರ್ಡ್​​ಗಳು ರಕ್ಷಿಸಿದ್ದಾರೆ. ಅವರನ್ನು ಕರೆದುಕೊಂಡು ಬಂದು ಕಾರಿನಲ್ಲಿ ಕೂರಿಸುವ ವೇಳೆಗೆ ಬಾಡಿಗಾರ್ಡ್​​ಗಳು ಸುಸ್ತಾಗಿದ್ದಾರೆ. ಕಾರಿನೊಳಗೆ ಬಂದು ಕುಳಿತ ನಿಧಿ ಅಗರ್​ವಾಲ್ ಅವರು ವಿಪರೀತ ಕೋಪ ಮಾಡಿಕೊಂಡಿರುವುದು ಕಾಣಿಸಿದೆ.

ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸೂಕ್ತ ಅನುಮತಿ ಪಡೆಯದೆಯೇ ಕಾರ್ಯಕ್ರಮ ನಡೆಸಿದ ಆಯೋಜಕರ ಮೇಲೆ ಕೇಸ್ ದಾಖಲಾಗಿದೆ. ಬುಧವಾರ (ಡಿಸೆಂಬರ್ 17) ಸಂಜೆ 5 ಗಂಟೆಗೆ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ ಕೆಲವು ಗಂಟೆಗಳ ಕಾಲ ತಡವಾಯಿತು. ಅಷ್ಟು ಹೊತ್ತಿಗಾಗಲೇ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಇದನ್ನೂ ಓದಿ: ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ

ನಿಧಿ ಅಗರ್​ವಾಲ್ ಅವರಿಗೆ ಈ ಘಟನೆಯಿಂದ ತುಂಬ ಬೇಸರ ಆಗಿದೆ. ಅವರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬಗ್ಗೆ ನಿಧಿ ಅಗರ್​ವಾಲ್ ಅವರು ಇನ್ನೂ ಹೇಳಿಕೆ ನೀಡಿಲ್ಲ. ಜನರು ನಡೆದುಕೊಂಡ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!