ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ತೆಲುಗಿನ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದ ವೇಳೆ ಈ ಕಹಿ ಘಟನೆ ನಡೆದಿದೆ. ಈ ಸಿನಿಮಾದ ನಟಿ ನಿಧಿ ಅಗರ್​ವಾಲ್ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದ್​ದಾರೆ. ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲು ಮಾಡಿಕೊಂಡು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು
Nidhi Agarwal

Updated on: Dec 18, 2025 | 7:25 PM

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ‘ಸಹನಾ ಸಹನಾ..’ ಹಾಡು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಪ್ರಭಾಸ್ ಮತ್ತು ನಿಧಿ ಅಗರ್​ವಾಲ್ ಅವರು ಕಾಣಿಸಿಕೊಂಡಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಖುಷಿಯಿಂದ ನಿಧಿ ಅಗರ್​ವಾಲ್ ಅವರಿಗೆ ಕಹಿ ಅನುಭವ ಆಗಿದೆ. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ.

ನಿಧಿ ಅಗರ್​ವಾಲ್ ಅವರನ್ನು ಜನರು ಮುತ್ತಿಗೆ ಹಾಕಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಜನರಿಂದ ಕಿರಿಕಿರಿ ಅನುಭವಿಸಿದ ನಿಧಿ ಅವರನ್ನು ಬಾಡಿಗಾರ್ಡ್​​ಗಳು ರಕ್ಷಿಸಿದ್ದಾರೆ. ಅವರನ್ನು ಕರೆದುಕೊಂಡು ಬಂದು ಕಾರಿನಲ್ಲಿ ಕೂರಿಸುವ ವೇಳೆಗೆ ಬಾಡಿಗಾರ್ಡ್​​ಗಳು ಸುಸ್ತಾಗಿದ್ದಾರೆ. ಕಾರಿನೊಳಗೆ ಬಂದು ಕುಳಿತ ನಿಧಿ ಅಗರ್​ವಾಲ್ ಅವರು ವಿಪರೀತ ಕೋಪ ಮಾಡಿಕೊಂಡಿರುವುದು ಕಾಣಿಸಿದೆ.

ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸೂಕ್ತ ಅನುಮತಿ ಪಡೆಯದೆಯೇ ಕಾರ್ಯಕ್ರಮ ನಡೆಸಿದ ಆಯೋಜಕರ ಮೇಲೆ ಕೇಸ್ ದಾಖಲಾಗಿದೆ. ಬುಧವಾರ (ಡಿಸೆಂಬರ್ 17) ಸಂಜೆ 5 ಗಂಟೆಗೆ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ ಕೆಲವು ಗಂಟೆಗಳ ಕಾಲ ತಡವಾಯಿತು. ಅಷ್ಟು ಹೊತ್ತಿಗಾಗಲೇ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಇದನ್ನೂ ಓದಿ: ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ

ನಿಧಿ ಅಗರ್​ವಾಲ್ ಅವರಿಗೆ ಈ ಘಟನೆಯಿಂದ ತುಂಬ ಬೇಸರ ಆಗಿದೆ. ಅವರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬಗ್ಗೆ ನಿಧಿ ಅಗರ್​ವಾಲ್ ಅವರು ಇನ್ನೂ ಹೇಳಿಕೆ ನೀಡಿಲ್ಲ. ಜನರು ನಡೆದುಕೊಂಡ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us