AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ

Oo Antava Oo Oo Antava: ‘ಪುಷ್ಪ’ ಚಿತ್ರದ ಹಾಡನ್ನು ಬ್ಯಾನ್​ ಮಾಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನ್ಯಾಯಾಲಯ ಯಾವ ತೀರ್ಪು ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ
ಸಮಂತಾ
TV9 Web
| Edited By: |

Updated on: Dec 14, 2021 | 2:48 PM

Share

ನಟಿ ಸಮಂತಾ (Samantha) ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ನಾಗ ಚೈತನ್ಯ ಜತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದ ಬಳಿಕ ಅವರ ಚಾರ್ಮ್​ ಹೆಚ್ಚಿದೆ. ಅವರು ಇತ್ತೀಚೆಗೆ ಹೆಜ್ಜೆ ಹಾಕಿರುವ ‘ಪುಷ್ಪ’ (Pushpa Movie) ಸಿನಿಮಾದ ಐಟಂ ಸಾಂಗ್​ ಸೂಪರ್​ ಹಿಟ್​ ಆಗಿದೆ. ‘ಹು ಅಂತೀಯಾ ಮಾವ.. ಊಹೂ ಅಂತಿಯಾ ಮಾವ..’ (Oo Antava Oo Oo Antava) ಹಾಡು ಎಲ್ಲೆಲ್ಲೂ ಧೂಳೆಬ್ಬಿಸುತ್ತಿದೆ. ಕನ್ನಡ, ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳು ಅವತರಣಿಕೆಗಳಲ್ಲಿ ಈ ಸಾಂಗ್​ ಬಿಡುಗಡೆ ಆಗಿ ಜನ ಮೆಚ್ಚುಗೆ ಗಳಿಸಿದೆ. ಆದರೆ ಒಂದಷ್ಟು ವಿವಾದವನ್ನೂ ಈ ಗೀತೆ ಹುಟ್ಟುಹಾಕಿದೆ. ಈ ಹಾಡಿನ ವಿರುದ್ಧ ಗಂಡಸರು ಗರಂ ಆಗಿದ್ದಾರೆ. ಅಲ್ಲದೇ ಕೇಸ್​ ಕೂಡ ದಾಖಲಿಸಿದ್ದಾರೆ. ಹಾಗಾದರೆ ಈ ಹಾಡಿನಲ್ಲಿ ಅಂಥದ್ದೇನಿದೆ? ಅವಹೇಳನಕಾರಿ ಸಾಹಿತ್ಯ!

‘ಊ ಅಂಟಾವಾ ಮಾವ ಊಊ ಅಂಟಾವಾ ಮಾವ’ ಹಾಡಿನಲ್ಲಿ ಗಂಡಸರ ಕುರಿತು ಸಾಹಿತ್ಯ ಬರೆಯಲಾಗಿದೆ. ಹುಡುಗಿಯರನ್ನು ನೋಡಿದಾಗ ಗಂಡಸರು ಯಾವ ರೀತಿ ವರ್ತಿಸುತ್ತಾರೆ ಎಂಬುದನ್ನು ಇದರಲ್ಲಿ ವಿವರಿಸಲಾಗಿದೆ. ಗಂಡಸರೆಲ್ಲರೂ ಕಾಮುಕ ಬುದ್ಧಿಯವರು ಎಂಬರ್ಥ ಬರುವ ರೀತಿಯಲ್ಲಿ ಈ ಹಾಡಿನ ಸಾಹಿತ್ಯ ಇದೆ ಎಂದು ಕೆಲವರು ಆರೋಪಿಸಿದ್ದಾರೆ. ಹಾಗಾಗಿ, ಆಂಧ್ರ ಪ್ರದೇಶದಲ್ಲಿ ಪುರುಷರ ಸಂಘಟನೆಯೊಂದು ‘ಪುಷ್ಪ’ ಚಿತ್ರತಂಡದ ವಿರುದ್ಧ ಕೇಸ್​ ದಾಖಲಿಸಿದೆ.

ಈ ಹಾಡನ್ನು ಬ್ಯಾನ್​ ಮಾಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನ್ಯಾಯಾಲಯ ಯಾವ ತೀರ್ಪು ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಹಾಡಿನ ತೆಲುಗು ವರ್ಷನ್​ ಈಗಾಗಲೇ ಯೂಟ್ಯೂಬ್​ನಲ್ಲಿ 2.6 ಕೋಟಿಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ತೆಲುಗಿನಲ್ಲಿ ಚಂದ್ರಬೋಸ್​ ಸಾಹಿತ್ಯ ಬರೆದಿದ್ದು, ಇಂದ್ರವತಿ ಚೌಹಾಣ್​ ಧ್ವನಿ ನೀಡಿದ್ದಾರೆ. ಕನ್ನಡದಲ್ಲಿ ವರದರಾಜ್​ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕಿ ಮಂಗ್ಲಿ ಕಂಠದಲ್ಲಿ ಕನ್ನಡದ ಗೀತೆ ಮೂಡಿಬಂದಿದೆ. ದೇವಿಶ್ರೀ ಪ್ರಸಾದ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಡಿ.17ರಂದು ‘ಪುಷ್ಪ’ ಸಿನಿಮಾ ಬಿಡುಗಡೆ ಆಗಲಿದೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ರಕ್ತಚಂದನ ಕಳ್ಳಸಾಗಣೆ ಕಥೆಯನ್ನು ಒಳಗೊಂಡಿರುವ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದಾರೆ. ಡಾಲಿ ಧನಂಜಯ, ಫಹಾದ್​ ಫಾಸಿಲ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

Samantha: ಏಕಾಏಕಿ ಆಸ್ಪತ್ರೆಗೆ ತೆರಳಿದ ಸಮಂತಾ; ಅಭಿಮಾನಿಗಳಲ್ಲಿ ಆತಂಕದ ಛಾಯೆ

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್