AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​

Devi Sri Prasad: ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಶಾಸಕ ರಾಜಾ ಸಿಂಗ್​ ದೂರು ನೀಡಿದ್ದಾರೆ.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​
ದೇವಿಶ್ರೀ ಪ್ರಸಾದ್
TV9 Web
| Edited By: |

Updated on: Dec 20, 2021 | 9:03 AM

Share

ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa Movie) ಸಿನಿಮಾ ಗೆಲ್ಲಲು ಹಾಡುಗಳು ಕೂಡ ಪ್ರಮುಖ ಕಾರಣ. ಸಂಗೀತ ನಿರ್ದೇಶನ ದೇವಿಶ್ರೀ ಪ್ರಸಾದ್​ (Devi Sri Prasad) ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎಲ್ಲ ಹಾಡುಗಳು ಜನಮನ ಗೆದ್ದಿವೆ. ಅದರಲ್ಲೂ ಸಮಂತಾ (Samantha) ನಟಿಸಿರುವ ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ..’ ಹಾಡು ಹೆಚ್ಚು ಫೇಮಸ್​ ಆಗಿದೆ. ಇದರಿಂದ ದೇವಿಶ್ರೀ ಪ್ರಸಾದ್​ ಅವರ ಡಿಮ್ಯಾಂಡ್​ ಹೆಚ್ಚಿದೆ. ಅದರ ಜತೆಗೆ ಅವರು ವಿವಾದವನ್ನೂ ಮಾಡಿಕೊಂಡಿದ್ದಾರೆ. ಭಕ್ತಿಗೀತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಾಗಿದೆ. ಹಿಂದುಗಳಲ್ಲಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿದೆ.

‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ದೇವಿಶ್ರೀ ಪ್ರಸಾದ್​ ಭಾಗವಹಿಸಿದ್ದರು. ಆ ವೇಳೆ ಅವರು ತಮ್ಮ ಸಿನಿಮಾಗಳ ಐಟಂ ಹಾಡುಗಳ ಕುರಿತು ಮಾತನಾಡಿದರು. ‘ಜನರ ಪಾಲಿಗೆ ಅವು ಐಟಂ ಸಾಂಗ್​ ಆಗಿರಬಹುದು. ಆದರೆ ನನಗೆ ಅವು ಭಕ್ತಿಗೀತೆಗಳಿದ್ದಂತೆ. ಅದೇ ರಾಗದಲ್ಲಿ ದೇವರ ಹಾಡುಗಳನ್ನು ಹೇಳಬಹುದು’ ಎಂದು ಅವರು ಹೇಳಿಕೆ ನೀಡಿದ್ದಾರೆ. ಆ ವೇದಿಕೆಯಲ್ಲಿ ‘ಉ ಅಂಟಾವಾ ಮಾವ ಉಊ ಅಂಟಾವಾ ಮಾವ..’ ಹಾಡಿನ ಸಾಹಿತ್ಯಕ್ಕೆ ಬದಲಾಗಿ ಅವರು ದೇವರ ಕುರಿತಾದ ಸಾಲುಗಳನ್ನು ಹಾಡಿದ್ದಾರೆ. ಅದನ್ನು ಕೇಳಿ ಅಲ್ಲಿದ್ದ ಅನೇಕರು ನಕ್ಕು ಎಂಜಾಯ್​ ಮಾಡಿದ್ದಾರೆ. ಆದರೆ ಕೆಲವರು ದೇವಿಶ್ರೀ ಪ್ರದಾದ್​ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ತೆಲಂಗಾಣದ ಗೋಷಮಹಲ್​ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್​ ಅವರು ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಿಸಿದ್ದಾರೆ. ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ದೂರು ನೀಡಿದ್ದಾರೆ. ‘ಉ ಅಂಟಾವಾ ಮಾವ ಉಊ ಅಂಟವಾ ಮಾವ..’ ಹಾಡು ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಕೆಲವರ ವಿರೋಧಕ್ಕೆ ಕಾರಣ ಆಗಿತ್ತು. ಈ ಗೀತೆಯಲ್ಲಿ ಗಂಡಸರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ವಿವಾದ ಏನೇ ಇದ್ದರೂ ಈ ಹಾಡಿಗೆ ಭರ್ಜರಿ ಜನಸ್ಪಂದನೆ ವ್ಯಕ್ತವಾಗಿದೆ. ಅದಕ್ಕೆ ನಟಿ ಸಮಂತಾ ಅವರು ಫುಲ್​ ಖುಷ್​ ಆಗಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದರು. ಈ ಹಾಡಿಗೆ ಜನರು ಚಿತ್ರಮಂದಿರದಲ್ಲಿ ಕುಣಿಯುತ್ತಿರುವ ಅನೇಕ ವಿಡಿಯೋಗಳನ್ನು ಹಂಚಿಕೊಂಡು ‘ಇದೆಂಥ ಹುಚ್ಚಾಟ’ ಎಂದು ಕ್ಯಾಪ್ಷನ್​ ನೀಡಿದ್ದರು.

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಮೊದಲ ದಿನ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳು ಗಳಿಸಿದ್ದೆಷ್ಟು?

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ