AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​

Devi Sri Prasad: ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಶಾಸಕ ರಾಜಾ ಸಿಂಗ್​ ದೂರು ನೀಡಿದ್ದಾರೆ.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​
ದೇವಿಶ್ರೀ ಪ್ರಸಾದ್
TV9 Web
| Updated By: ಮದನ್​ ಕುಮಾರ್​|

Updated on: Dec 20, 2021 | 9:03 AM

Share

ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa Movie) ಸಿನಿಮಾ ಗೆಲ್ಲಲು ಹಾಡುಗಳು ಕೂಡ ಪ್ರಮುಖ ಕಾರಣ. ಸಂಗೀತ ನಿರ್ದೇಶನ ದೇವಿಶ್ರೀ ಪ್ರಸಾದ್​ (Devi Sri Prasad) ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎಲ್ಲ ಹಾಡುಗಳು ಜನಮನ ಗೆದ್ದಿವೆ. ಅದರಲ್ಲೂ ಸಮಂತಾ (Samantha) ನಟಿಸಿರುವ ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ..’ ಹಾಡು ಹೆಚ್ಚು ಫೇಮಸ್​ ಆಗಿದೆ. ಇದರಿಂದ ದೇವಿಶ್ರೀ ಪ್ರಸಾದ್​ ಅವರ ಡಿಮ್ಯಾಂಡ್​ ಹೆಚ್ಚಿದೆ. ಅದರ ಜತೆಗೆ ಅವರು ವಿವಾದವನ್ನೂ ಮಾಡಿಕೊಂಡಿದ್ದಾರೆ. ಭಕ್ತಿಗೀತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಾಗಿದೆ. ಹಿಂದುಗಳಲ್ಲಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿದೆ.

‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ದೇವಿಶ್ರೀ ಪ್ರಸಾದ್​ ಭಾಗವಹಿಸಿದ್ದರು. ಆ ವೇಳೆ ಅವರು ತಮ್ಮ ಸಿನಿಮಾಗಳ ಐಟಂ ಹಾಡುಗಳ ಕುರಿತು ಮಾತನಾಡಿದರು. ‘ಜನರ ಪಾಲಿಗೆ ಅವು ಐಟಂ ಸಾಂಗ್​ ಆಗಿರಬಹುದು. ಆದರೆ ನನಗೆ ಅವು ಭಕ್ತಿಗೀತೆಗಳಿದ್ದಂತೆ. ಅದೇ ರಾಗದಲ್ಲಿ ದೇವರ ಹಾಡುಗಳನ್ನು ಹೇಳಬಹುದು’ ಎಂದು ಅವರು ಹೇಳಿಕೆ ನೀಡಿದ್ದಾರೆ. ಆ ವೇದಿಕೆಯಲ್ಲಿ ‘ಉ ಅಂಟಾವಾ ಮಾವ ಉಊ ಅಂಟಾವಾ ಮಾವ..’ ಹಾಡಿನ ಸಾಹಿತ್ಯಕ್ಕೆ ಬದಲಾಗಿ ಅವರು ದೇವರ ಕುರಿತಾದ ಸಾಲುಗಳನ್ನು ಹಾಡಿದ್ದಾರೆ. ಅದನ್ನು ಕೇಳಿ ಅಲ್ಲಿದ್ದ ಅನೇಕರು ನಕ್ಕು ಎಂಜಾಯ್​ ಮಾಡಿದ್ದಾರೆ. ಆದರೆ ಕೆಲವರು ದೇವಿಶ್ರೀ ಪ್ರದಾದ್​ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ತೆಲಂಗಾಣದ ಗೋಷಮಹಲ್​ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್​ ಅವರು ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಿಸಿದ್ದಾರೆ. ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ದೂರು ನೀಡಿದ್ದಾರೆ. ‘ಉ ಅಂಟಾವಾ ಮಾವ ಉಊ ಅಂಟವಾ ಮಾವ..’ ಹಾಡು ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಕೆಲವರ ವಿರೋಧಕ್ಕೆ ಕಾರಣ ಆಗಿತ್ತು. ಈ ಗೀತೆಯಲ್ಲಿ ಗಂಡಸರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ವಿವಾದ ಏನೇ ಇದ್ದರೂ ಈ ಹಾಡಿಗೆ ಭರ್ಜರಿ ಜನಸ್ಪಂದನೆ ವ್ಯಕ್ತವಾಗಿದೆ. ಅದಕ್ಕೆ ನಟಿ ಸಮಂತಾ ಅವರು ಫುಲ್​ ಖುಷ್​ ಆಗಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದರು. ಈ ಹಾಡಿಗೆ ಜನರು ಚಿತ್ರಮಂದಿರದಲ್ಲಿ ಕುಣಿಯುತ್ತಿರುವ ಅನೇಕ ವಿಡಿಯೋಗಳನ್ನು ಹಂಚಿಕೊಂಡು ‘ಇದೆಂಥ ಹುಚ್ಚಾಟ’ ಎಂದು ಕ್ಯಾಪ್ಷನ್​ ನೀಡಿದ್ದರು.

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಮೊದಲ ದಿನ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳು ಗಳಿಸಿದ್ದೆಷ್ಟು?

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ