AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​

Devi Sri Prasad: ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಶಾಸಕ ರಾಜಾ ಸಿಂಗ್​ ದೂರು ನೀಡಿದ್ದಾರೆ.

ಭಕ್ತಿಗೀತೆಗೆ ಅವಮಾನ ಮಾಡಿದ ದೇವಿಶ್ರೀ ಪ್ರಸಾದ್​; ‘ಪುಷ್ಪ’ ಸಂಗೀತ ನಿರ್ದೇಶಕನ ಮೇಲೆ ಬಿತ್ತು ಕೇಸ್​
ದೇವಿಶ್ರೀ ಪ್ರಸಾದ್
TV9 Web
| Edited By: |

Updated on: Dec 20, 2021 | 9:03 AM

Share

ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa Movie) ಸಿನಿಮಾ ಗೆಲ್ಲಲು ಹಾಡುಗಳು ಕೂಡ ಪ್ರಮುಖ ಕಾರಣ. ಸಂಗೀತ ನಿರ್ದೇಶನ ದೇವಿಶ್ರೀ ಪ್ರಸಾದ್​ (Devi Sri Prasad) ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎಲ್ಲ ಹಾಡುಗಳು ಜನಮನ ಗೆದ್ದಿವೆ. ಅದರಲ್ಲೂ ಸಮಂತಾ (Samantha) ನಟಿಸಿರುವ ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ..’ ಹಾಡು ಹೆಚ್ಚು ಫೇಮಸ್​ ಆಗಿದೆ. ಇದರಿಂದ ದೇವಿಶ್ರೀ ಪ್ರಸಾದ್​ ಅವರ ಡಿಮ್ಯಾಂಡ್​ ಹೆಚ್ಚಿದೆ. ಅದರ ಜತೆಗೆ ಅವರು ವಿವಾದವನ್ನೂ ಮಾಡಿಕೊಂಡಿದ್ದಾರೆ. ಭಕ್ತಿಗೀತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಾಗಿದೆ. ಹಿಂದುಗಳಲ್ಲಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿದೆ.

‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ದೇವಿಶ್ರೀ ಪ್ರಸಾದ್​ ಭಾಗವಹಿಸಿದ್ದರು. ಆ ವೇಳೆ ಅವರು ತಮ್ಮ ಸಿನಿಮಾಗಳ ಐಟಂ ಹಾಡುಗಳ ಕುರಿತು ಮಾತನಾಡಿದರು. ‘ಜನರ ಪಾಲಿಗೆ ಅವು ಐಟಂ ಸಾಂಗ್​ ಆಗಿರಬಹುದು. ಆದರೆ ನನಗೆ ಅವು ಭಕ್ತಿಗೀತೆಗಳಿದ್ದಂತೆ. ಅದೇ ರಾಗದಲ್ಲಿ ದೇವರ ಹಾಡುಗಳನ್ನು ಹೇಳಬಹುದು’ ಎಂದು ಅವರು ಹೇಳಿಕೆ ನೀಡಿದ್ದಾರೆ. ಆ ವೇದಿಕೆಯಲ್ಲಿ ‘ಉ ಅಂಟಾವಾ ಮಾವ ಉಊ ಅಂಟಾವಾ ಮಾವ..’ ಹಾಡಿನ ಸಾಹಿತ್ಯಕ್ಕೆ ಬದಲಾಗಿ ಅವರು ದೇವರ ಕುರಿತಾದ ಸಾಲುಗಳನ್ನು ಹಾಡಿದ್ದಾರೆ. ಅದನ್ನು ಕೇಳಿ ಅಲ್ಲಿದ್ದ ಅನೇಕರು ನಕ್ಕು ಎಂಜಾಯ್​ ಮಾಡಿದ್ದಾರೆ. ಆದರೆ ಕೆಲವರು ದೇವಿಶ್ರೀ ಪ್ರದಾದ್​ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ತೆಲಂಗಾಣದ ಗೋಷಮಹಲ್​ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್​ ಅವರು ದೇವಿಶ್ರೀ ಪ್ರಸಾದ್​ ವಿರುದ್ಧ ದೂರು ದಾಖಲಿಸಿದ್ದಾರೆ. ‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿಶ್ರೀ ಪ್ರಸಾದ್​ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ದೂರು ನೀಡಿದ್ದಾರೆ. ‘ಉ ಅಂಟಾವಾ ಮಾವ ಉಊ ಅಂಟವಾ ಮಾವ..’ ಹಾಡು ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಕೆಲವರ ವಿರೋಧಕ್ಕೆ ಕಾರಣ ಆಗಿತ್ತು. ಈ ಗೀತೆಯಲ್ಲಿ ಗಂಡಸರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ವಿವಾದ ಏನೇ ಇದ್ದರೂ ಈ ಹಾಡಿಗೆ ಭರ್ಜರಿ ಜನಸ್ಪಂದನೆ ವ್ಯಕ್ತವಾಗಿದೆ. ಅದಕ್ಕೆ ನಟಿ ಸಮಂತಾ ಅವರು ಫುಲ್​ ಖುಷ್​ ಆಗಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದರು. ಈ ಹಾಡಿಗೆ ಜನರು ಚಿತ್ರಮಂದಿರದಲ್ಲಿ ಕುಣಿಯುತ್ತಿರುವ ಅನೇಕ ವಿಡಿಯೋಗಳನ್ನು ಹಂಚಿಕೊಂಡು ‘ಇದೆಂಥ ಹುಚ್ಚಾಟ’ ಎಂದು ಕ್ಯಾಪ್ಷನ್​ ನೀಡಿದ್ದರು.

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಮೊದಲ ದಿನ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳು ಗಳಿಸಿದ್ದೆಷ್ಟು?

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ