AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ದೇವತೆ ಸಿಗರೇಟ್​ ಸೇದುತ್ತಿರುವ ಪೋಸ್ಟರ್​: ನಿರ್ದೇಶಕಿಯ ವಿರುದ್ಧ ದಾಖಲಾಯ್ತು ದೂರು

ಲೀನಾ ಅವರು ಡಾಕ್ಯುಮೆಂಟರಿ ಒಂದನ್ನು ಮಾಡುತ್ತಿದ್ದಾರೆ. ಅದರ ಪೋಸ್ಟರ್​ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಕಾಳಿ ದೇವತೆ ಸಿಗರೇಟ್ ಸೇದುತ್ತಿರುವ ರೀತಿಯಲ್ಲಿ ತೋರಿಸಲಾಗಿದೆ.

ಕಾಳಿ ದೇವತೆ ಸಿಗರೇಟ್​ ಸೇದುತ್ತಿರುವ ಪೋಸ್ಟರ್​: ನಿರ್ದೇಶಕಿಯ ವಿರುದ್ಧ ದಾಖಲಾಯ್ತು ದೂರು
ಲೀನಾ
TV9 Web
| Edited By: |

Updated on: Jul 04, 2022 | 2:44 PM

Share

ಚಿತ್ರರಂಗಕ್ಕೂ (Cinema Industry) ವಿವಾದಕ್ಕೂ ಸಾಕಷ್ಟು ನಂಟಿದೆ. ಸಿನಿಮಾದಲ್ಲಿ ಬರುವ ಕೆಲ ಪೋಸ್ಟರ್​, ಸಿನಿಮಾದ ಕೆಲ ದೃಶ್ಯಗಳು ವಿವಾದ ಹೊತ್ತಿಸಿದ ಹಲವು ಉದಾಹರಣೆಗಳಿವೆ. ಈ ವಿಚಾರಕ್ಕೆ ಸಂಬಂಧಿಸಿ ದೊಡ್ಡ ದೊಡ್ಡ ಪ್ರತಿಭಟನೆಗಳೂ ಆಗಿವೆ. ಈಗ ನಿರ್ದೇಶಕಿ ಲೀನಾ ಮಣಿಮೇಕಲೈ (Leena Manimekalai) ಅವರು ಇದೇ ಮಾದರಿಯ ವಿವಾದ ಹೊತ್ತಿಸಿದ್ದಾರೆ. ಅವರು ಹಿಂದೂ ದೇವರಿಗೆ ಅವಮಾನ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅವರ ವಿರುದ್ಧ ದೂರು ಕೂಡ ದಾಖಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕುತ್ತಿದೆ.

ಲೀನಾ ಅವರು ಡಾಕ್ಯುಮೆಂಟರಿ ಒಂದನ್ನು ಮಾಡುತ್ತಿದ್ದಾರೆ. ಅದರ ಪೋಸ್ಟರ್​ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಕಾಳಿ ದೇವತೆ ಸಿಗರೇಟ್ ಸೇದುತ್ತಿರುವ ರೀತಿಯಲ್ಲಿ ತೋರಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಾಕಷ್ಟು ಟೀಕೆಗಳು ಕೇಳಿ ಬಂದಿವೆ. ಅನೇಕರು ನಿರ್ದೇಶಕಿ ವಿರುದ್ಧ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ
Image
Miss India: ಮಿಸ್​ ಇಂಡಿಯಾ ಗೆದ್ದ ಸಿನಿ ಶೆಟ್ಟಿಗೆ ಸಿಗುತ್ತೆ ದೊಡ್ಡ​​ ಚಾನ್ಸ್​; ಹೀಗೆ ಬಾಲಿವುಡ್ ಟಿಕೆಟ್​ ಪಡೆದವರ ಲಿಸ್ಟ್​ ಇಲ್ಲಿದೆ..
Image
Gargi Movie: ಫ್ಯಾನ್ಸ್​ ಮೆಚ್ಚುವ ರೀತಿಯಲ್ಲಿ ಮತ್ತೆ ಬರುತ್ತಿದ್ದಾರೆ ಸಾಯಿ ಪಲ್ಲವಿ; ಇಲ್ಲವೆ ‘ಗಾರ್ಗಿ’ ಚಿತ್ರದ ಫೋಟೋಗಳು
Image
Kiara Advani: ‘ಮತ್ತೆ ನಮ್ಮ ಮನೆಗೆ ಕಾಲಿಡಬೇಡ’: ನಟಿ ಕಿಯಾರಾ ಅಡ್ವಾಣಿ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?
Image
MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?

ಮಹಿಳೆಯೊಬ್ಬಳು ಕಾಳಿ ದೇವತೆ ಮಾದರಿಯಲ್ಲಿ ಡ್ರೆಸ್ ಹಾಕಿದ್ದಾರೆ. ಈ ಪೋಸ್ಟರ್​ನಲ್ಲಿ ಆ ಮಹಿಳೆ ಸಿಗರೇಟ್ ಸೇದುತ್ತಿದ್ದಾಳೆ. ಇದರ ವಿರುದ್ಧ ಹಿಂದೂಗಳು ಧ್ವನಿ ಎತ್ತಿದ್ದಾರೆ. ಲೀನಾ ಅವರನ್ನು ಬಂಧಿಸಲು ಸೋಶಿಯಲ್ ಮೀಡಿಯಾದಲ್ಲಿ ಆಂದೋಲನ ಆರಂಭ ಆಗಿದೆ.

ಈ ಪೋಸ್ಟರ್​ಗೆ ಸಂಬಂಧಿಸಿ ಲೀನಾ ಅವರು ಪ್ರತಿಕ್ರಿಯೆ ನೀಡಿದ್ದು, ದ್ವೇಷದ ಮಧ್ಯೆ ಪ್ರೀತಿಯನ್ನೇ ಆಯ್ಕೆ ಮಾಡಲು ಅಭಿಮಾನಿಗಳ ಬಳಿ ಕೋರಿದ್ದಾರೆ. ‘ಟೊರೊಂಟೊ ಮೆಟ್ರೋಪಾಲಿಟನ್ ವಿಶ್ವವಿದ್ಯಾನಿಲಯವು ಶಿಬಿರ ಒಂದನ್ನು ಆಯೋಜಿಸಿತ್ತು. ಆ ಶಿಬಿರದಲ್ಲಿ ನಾನು ಭಾಗವಹಿಸಿ ನಿರ್ದೇಶಿಸಿದ ಸಾಕ್ಷ್ಯಚಿತ್ರ ಕಾಳಿ. ನಾನು ಇದನ್ನು ನಿರ್ದೇಶನ ಮಾಡಿದ್ದೇನೆ, ನಟಿಸಿದ್ದೇನೆ ಮತ್ತು ನಿರ್ಮಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

‘ಲೀನಾ ಅವರು ಕಾಳಿ ದೇವತೆಯಂತೆ ಡ್ರೆಸ್ ಹಾಕಿ ಸಿಗರೇಟ್ ಸೇದುತ್ತಿರುವುದು ಈ ವಿಡಿಯೋದಲ್ಲಿದೆ. ಚೀಪ್ ಪಬ್ಲಿಸಿಟಿಗೆ ಹಿಂದು ದೇವರನ್ನು ಅವಮಾನ ಮಾಡುವುದು ನಿಜಕ್ಕೂ ನಾಚಿಕೆಗೇಡು. ಅಂತಹ ಸಿನಿಮಾ ನಿರ್ಮಾತೃರನ್ನು ಬ್ಯಾನ ಮಾಡಬೇಕು’ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅಪಘಾತ: ‘ಕೆಜಿಎಫ್ 2’ ನಟನ ಬೆಂಜ್ ಕಾರು ಸಂಪೂರ್ಣ ಜಖಂ; ಕೂದಲೆಳೆ ಅಂತರದಲ್ಲಿ ನಟ ಪಾರು

‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ