Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಅಲ್ಲು ಅರ್ಜುನ್​ ಬರ್ತ್​ ಡೇ ವಿಚಾರದಲ್ಲಿ ಬಿತ್ತು ಕೇಸ್​! ಮಧ್ಯರಾತ್ರಿ ಮೈಮರೆತಿದ್ದೇ ತಪ್ಪಾಯ್ತು

ಅಲ್ಲು ಅರ್ಜುನ್​ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ವಿಶ್​ ಮಾಡಿದ್ದರು. ಅಲ್ಲು ಅರ್ಜುನ್​ ಜನ್ಮದಿನಕ್ಕೆ ಅಭಿಮಾನಿಗಳಂತೂ ಶುಭಾಶಯಗಳ ಮಳೆಯನ್ನೇ ಸುರಿಸಿದ್ದರು.

Allu Arjun: ಅಲ್ಲು ಅರ್ಜುನ್​ ಬರ್ತ್​ ಡೇ ವಿಚಾರದಲ್ಲಿ ಬಿತ್ತು ಕೇಸ್​! ಮಧ್ಯರಾತ್ರಿ ಮೈಮರೆತಿದ್ದೇ ತಪ್ಪಾಯ್ತು
ಅಭಿಮಾನಿಗಳ ಜತೆ ಅಲ್ಲು ಅರ್ಜುನ್​
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Apr 09, 2021 | 5:54 PM

ಅಲ್ಲು ಅರ್ಜುನ್​ ಜನ್ಮದಿನವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಅಭಿಮಾನಿಗಳು ಅಲ್ಲು ಅರ್ಜುನ್​ ಮನೆ ಎದುರು ಬಂದು ವಿಶ್​ ಮಾಡಿದ್ದರು. ಅಷ್ಟೇ ಅಲ್ಲ ಅವರಿಗೆ ವಿಶೇಷ ಗಿಫ್ಟ್​ ಕೂಡ ಸಿಕ್ಕಿತ್ತು. ಆದರೆ, ಈ ವಿಚಾರದಲ್ಲಿ ಅಭಿಮಾನಿಗಳಿಗೆ ಸಂಕಷ್ಟ ಎದುರಾಗಿದೆ. ಬರ್ತ್​ ಡೇ ಸೆಲಬ್ರೇಷನ್​ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಅಲ್ಲು ಅರ್ಜುನ್​ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ವಿಶ್​ ಮಾಡಿದ್ದರು. ಅಲ್ಲು ಅರ್ಜುನ್​ ಜನ್ಮದಿನಕ್ಕೆ ಅಭಿಮಾನಿಗಳಂತೂ ಶುಭಾಶಯಗಳ ಮಳೆಯನ್ನೇ ಸುರಿಸಿದ್ದರು. ಅಲ್ಲು ಅರ್ಜುನ್​ ಜನ್ಮದಿನದ ಹಿನ್ನೆಲೆಯಲ್ಲಿ ಅವರ​ ಮನೆ ಎದುರು ಫ್ಯಾನ್ಸ್​ ಜಮಾಯಿಸಿದ್ದರು. ಗೇಟ್​ ಬಳಿ ಬಂದು ಅಲ್ಲು ಅರ್ಜುನ್​ ಅಭಿಮಾನಿಗಳನ್ನು ಭೇಟಿಮಾಡಿದ್ದರು. ಫ್ಯಾನ್ಸ್​ ಅಲ್ಲುಗೆ ಗಿಡವನ್ನು ಗಿಫ್ಟ್​ ಆಗಿ ನೀಡಿದ್ದರು.

ಇದಕ್ಕೂ ಮೊದಲು ಅಭಿಮಾನಿ ಬಳಗ ರಾತ್ರಿ ವೇಳೆ ಅಲ್ಲು ಅರ್ಜುನ್​ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿ ಸಂಘದ ಅಧ್ಯಕ್ಷ ಪ್ರಶಾಂತ್​ ಹಾಗೂ ಇತರರ ವಿರುದ್ಧ ಕೇಸ್​ ದಾಖಲಾಗಿದೆ. ಇದಕ್ಕೂ ಕಾರಣವಿದೆ. ಇವರು ಮಧ್ಯರಾತ್ರಿ ವೇಳೆ ಅನುಮತಿ ಇಲ್ಲದೆ ಪಟಾಕಿ ಹೊಡೆದು ಸಂಭ್ರಮಿಸಿದ್ದರು. ಅಲ್ಲದೆ, ನೂರಾರು ಜನರು ಒಟ್ಟಾಗಿ ಸೇರಿದ್ದರು.

ಇದನ್ನು ಗಮಿಸಿರುವ ಜುಬ್ಲಿ ಹಿಲ್ಸ್​ ಪೊಲೀಸ್​ ಠಾಣೆಯ ಅಧಿಕಾರಿಗಳು ಪ್ರಶಾಂತ್​ ಹಾಗೂ ಇತರರ ವಿರುದ್ಧ ಕೇಸ್​ ದಾಖಲಿಸಿದ್ದಾರೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪವನ್ನು ಇವರ ಮೇಲೆ ಹೇರಲಾಗಿದೆ. ಪೊಲೀಸರು ಇವರನ್ನು ಬಂಧಿಸಿದ್ದಾರೆಯೇ ಅಥವಾ ಇಲ್ಲವೋ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.

ದೇಶದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಹೀಗಾಗಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಹೀಗಿರುವಾಗ ಅಭಿಮಾನಿಗಳು ಈ ರೀತಿ ನಡೆದುಕೊಳ್ಳುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Happy Birthday Allu Arjun: ಅಲ್ಲು ಅರ್ಜುನ್​ ಜನ್ಮ ದಿನಕ್ಕೆ ಅಭಿಮಾನಿಗಳಿಂದ ಸಿಕ್ತು ಮರೆಯಲಾರದ ಗಿಫ್ಟ್​

Published On - 5:16 pm, Fri, 9 April 21

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ