AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರ ಮೇಲೆ ಹಲ್ಲೆ ಆರೋಪ: ನಟ ವಿಜಯ್ ಹಾಗೂ ತಂಡದ ವಿರುದ್ಧ ದೂರು

Thalapathy Vijay: ದಳಪತಿ ವಿಜಯ್ ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಮಧುರೈನಲ್ಲಿ ಬಲು ಅದ್ಧೂರಿಯಾಗಿ ಪಕ್ಷದ ಬಹಿರಂಗ ಸಮಾವೇಶ ಆಯೋಜನೆ ಮಾಡಿದ್ದರು. ತಮಿಳುನಾಡಿನ ಮೂಲೆ-ಮೂಲೆಗಳಿಂದ ಲಕ್ಷಾಂತರ ಮಂದಿ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಸಮಾವೇಶದ ಬಳಿಕ ವಿಜಯ್ ಹಾಗೂ ಅವರ ಬೌನ್ಸರ್​​ಗಳ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ.

ಯುವಕರ ಮೇಲೆ ಹಲ್ಲೆ ಆರೋಪ: ನಟ ವಿಜಯ್ ಹಾಗೂ ತಂಡದ ವಿರುದ್ಧ ದೂರು
Thalapathy Vijay
ಮಂಜುನಾಥ ಸಿ.
|

Updated on:Aug 27, 2025 | 10:14 AM

Share

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾನಲ್ಲಿ ನಟಿಸುತ್ತಿದ್ದು, ವಿಜಯ್ ರಾಜಕೀಯಕ್ಕೆ ಪ್ರವೇಶ ಮಾಡಿರುವ ಕಾರಣದಿಂದಾಗಿ ಅವರು ಸಿನಿಮಾದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ವಿಜಯ್ ತಮಿಳಗ ವೆಟ್ರಿ ಕಳಗಂ ಹೆಸರಿನ ಪಕ್ಷ ಸ್ಥಾಪನೆ ಮಾಡಿದ್ದು ತಮಿಳುನಾಡಿನ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇತ್ತೀಚೆಗಷ್ಟೆ ಪಕ್ಷದ ಎರಡನೇ ಬಹಿರಂಗ ಸಮಾವೇಶವನ್ನು ಮಧುರೈನಲ್ಲಿ ವಿಜಯ್ ಆಯೋಜನೆ ಮಾಡಿದ್ದರು. ಸಮಾವೇಶವೇನೋ ಅದ್ಧೂರಿಯಾಗಿ, ಯಶಸ್ವಿಯಾಗಿ ನಡೆಯಿತು. ಅದರೆ ಇದೀಗ ಯುವಕನೊಬ್ಬ ವಿಜಯ್ ಹಾಗೂ ಅವರ ಬೌನ್ಸರ್​​ಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಗಸ್ಟ್ 21 ರಂದು ಮಧುರೈನಲ್ಲಿ ವಿಜಯ್ ಬಹಿರಂಗ ರಾಜಕೀಯ ಸಮಾವೇಶ ಆಯೋಜನೆ ಮಾಡಿದ್ದರು. ತಮಿಳುನಾಡಿನ ಹಲವು ಮೂಲೆಗಳಿಂದ ಲಕ್ಷಾಂತರ ಮಂದಿ ಜನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಯುವಕರು, ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗಿ ಆಗಿದ್ದರು. ವೇದಿಕೆ ಮೇಲೆ ರ್ಯಾಂಪ್ ಒಂದನ್ನು ನಿರ್ಮಾಣ ಮಾಡಲಾಗಿತ್ತು. ಈ ರ್ಯಾಂಪ್ ಮೇಲೆ ನಡೆಯುವ ಮೂಲಕ ವಿಜಯ್ ಕಾರ್ಯಕ್ರಮದ ಆರಂಭ ಮಾಡಿದರು.

ವಿಜಯ್, ರ್ಯಾಂಪ್ ವಾಕ್ ಆರಂಭಿಸುತ್ತಿದ್ದಂತೆ ಹಲವಾರು ಮಂದಿ ರ್ಯಾಂಪ್ ಮೇಲೆ ಹತ್ತಿ ವಿಜಯ್ ಬಳಿ ಆಗಮಿಸಲು ಯತ್ನಿಸಿದರು. ಆದರೆ ಬೌನ್ಸರ್​​ಗಳು ಅವರನ್ನು ತಡೆದರು. ಕೆಲವರನ್ನು ಅನಾಮತ್ತು ಎತ್ತಿ ರ್ಯಾಂಪ್​​ನಿಂದ ಕೆಳಕ್ಕೆ ಒಗೆದರು. ಈ ಘಟನೆಯ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ:ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ?

ಸಮಾವೇಶದ ಬಳಿಕ ಶರತ್​​ಕುಮಾರ್ ಹೆಸರಿನ ಯುವಕನೊಬ್ಬ ಇದೀಗ ವಿಜಯ್ ಹಾಗೂ ಅವರ ಬೌನ್ಸರ್​​ಗಳ ವಿರುದ್ಧ ಪೆರಂಬಲೂರು ಎಸ್​​ಪಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯ್ ಹಾಗೂ ಅವರ ಬೌನ್ಸರ್​ಗಳು ತಮ್ಮ ಮೇಲೆ ಹಲ್ಲೆ ಮಾಡಿದ್ದು ಇದರಿಂದಾಗಿ ತಮಗೆ ಗಾಯಗಳಾಗಿವೆ ಎಂದು ಆರೋಪ ಮಾಡಿದ್ದಾರೆ. ತಮ್ಮ ತಾಯಿಯೊಟ್ಟಿಗೆ ಕಚೇರಿಗೆ ಹೋಗಿ ದೂರು ದಾಖಲಿಸಿರುವ ಶರತ್​​ಕುಮಾರ್, ವಿಜಯ್ ಹಾಗೂ ಅವರ ಬೌನ್ಸರ್​​ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಯುವಕ ನೀಡಿರುವ ಎಸ್​​ಪಿ ಕಚೇರಿಯಿಂದ ಮಧುರೈನ ಕುನ್ನಮ್ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದು ಎಫ್​ಐಆರ್ ದಾಖಲಾಗಿದೆ. ಮೂರು ಸೆಕ್ಷನ್​​ಗಳ ಅಡಿಯಲ್ಲಿ ವಿಜಯ್ ಮತ್ತು ಅವರ ಹತ್ತು ಮಂದಿ ಬೌನ್ಸರ್​ಗಳ ವಿರುದ್ಧ ದೂರು ದಾಖಲಾಗಿದೆ. ವಿಜಯ್ ಅವರ ಬಹಿರಂಗ ಸಮಾವೇಶಕ್ಕೆ ಭಾರಿ ಸಂಖ್ಯೆಯ ಜನ ಆಗಮಿಸಿದ್ದರು. ಈ ವೇಳೆ ಭಾರಿ ನೂಕುನುಗ್ಗಲು ಉಂಟಾಯ್ತು. ವಿಶೇಷವಾಗಿ ಜನ ವೇದಿಕೆ ಏರಲು ಯತ್ನಿಸಿದಾಗ ಬೌನ್ಸರ್​ಗಳು ಅವರನ್ನು ತಡೆಯುವ ಯತ್ನದಲ್ಲಿ ಕೆಲವರ ಮೇಲೆ ಹಲ್ಲೆ ಸಹ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಸಂಬಂಧ ವಿಡಿಯೋಗಳು ಸಹ ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 am, Wed, 27 August 25

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!