AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್

ಫೆಬ್ರವರಿ 23ರಿಂದ ​ ಸಿಸಿಎಲ್​ ಪಂದ್ಯಗಳು ನಡೆದವು. ಕರ್ನಾಟಕ ಬುಲ್ಡೋಜರ್ಸ್ ತಂಡ ಉತ್ತಮವಾಗಿ ಪ್ರದರ್ಶನ ನೀಡಿತು. ಕ್ವಾಟರ್​ ಫೈನಲ್​ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆದ್ದಿದ್ದ ಕರ್ನಾಟಕದ ತಂಡ ಫಿನಾಲೆಯಲ್ಲಿ ಅದೇ ತಂಡದ ವಿರುದ್ಧ ಸೋಲು ಕಂಡಿದೆ. ಬೆಂಗಾಲ್ ಟೈಗರ್ಸ್ ಚಾಂಪಿಯನ್ ಆಗಿದೆ.

CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್
ಜಿಶ್ಶು-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Mar 18, 2024 | 7:04 AM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ (CCL) ಫೈನಲ್ ಪಂದ್ಯ ಮಾರ್ಚ್ 18ರಂದು ನಡೆದಿದೆ. ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ್ ಟೈಗರ್ಸ್ ನಡುವಿನ ಪಂದ್ಯದಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲಾಗಿದೆ. ಈ ಮೂಲಕ ಕಪ್ ಮಿಸ್ ಆಗಿದೆ. ಈ ನೋವಿನಲ್ಲೂ ಕಿಚ್ಚ ಸುದೀಪ್ ಅವರು ಮೊದಲ ಬಾರಿ ಕಪ್ ಗೆದ್ದ ಆರ್​ಸಿಬಿ ಮಹಿಳಾ ತಂಡಕ್ಕೆ ಶುಭಾಶಯ ಹೇಳಿದ್ದಾರೆ. ಬೆಂಗಾಲ್ ಟೈಗರ್ಸ್ ತಂಡದ ಕ್ಯಾಪ್ಟನ್ ಜಿಶ್ಶು ಸೇನ್​ಗುಪ್ತಾಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ.

ಫೆಬ್ರವರಿ 23ರಿಂದ ಪ್ರತಿ ವೀಕೆಂಡ್​​ ಸಿಸಿಎಲ್​ ಪಂದ್ಯಗಳು ನಡೆದವು. ಕರ್ನಾಟಕ ಬುಲ್ಡೋಜರ್ಸ್ ತಂಡ ಉತ್ತಮವಾಗಿ ಪ್ರದರ್ಶನ ನೀಡಿತು. ಕ್ವಾಟರ್​ ಫೈನಲ್​ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆದ್ದಿದ್ದ ಕರ್ನಾಟಕದ ತಂಡ ಫಿನಾಲೆಯಲ್ಲಿ ಅದೇ ತಂಡದ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಬೆಂಗಾಲ್ ಟೈಗರ್ಸ್ ಸಿಸಿಎಲ್​ ಕಪ್​ನ ಮನೆಗೆ ಕೊಂಡೊಯ್ದಿದೆ.

ಸಿಸಿಎಲ್​ನಲ್ಲಿ ಹೊಸ ಫಾರ್ಮ್ಯಾಟ್ ಬಳಕೆ ಮಾಡಲಾಗಿದೆ. 10 ಓವರ್​ಗಳ ನಾಲ್ಕು ಇನ್ನಿಂಗ್ಸ್ ಇರುತ್ತದೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದವರು 10 ಓವರ್ ಆಡಬೇಕು. ನಂತರ ಎದುರಾಳಿ ತಂಡದವರು 10 ಓವರ್ ಆಡಬೇಕು. ಆ ಬಳಿಕ ಎರಡನೇ ಇನ್ನಿಂಗ್ಸ್ ಕೂಡ ಹೀಗೆಯೇ ಇರುತ್ತದೆ. ಮೊದಲು ಬ್ಯಾಟ್ ಮಾಡಿದ ಬೆಂಗಾಲ್​ ಟೈಗರ್ಸ್ 118 ರನ್​ಗಳನ್ನು ಪೇರಿಸಿತ್ತು. ಏಳು ವಿಕೆಟ್ ನಷ್ಟಕ್ಕೆ ಕರ್ನಾಟಕ ಬುಲ್ಡೋಜರ್ಸ್ 86 ರನ್​ಗಳನ್ನು ಕಲೆ ಹಾಕಿತು.

ಇದನ್ನೂ ಓದಿ: CCL 2023: ಕರ್ನಾಟಕ ಬುಲ್ಡೋಝರ್ಸ್ ಮುಂದೆ ಮಂಡಿಯೂರಿದ ಬೆಂಗಾಲ್ ಟೈಗರ್ಸ್

32 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಬೆಂಗಾಲ್​ ಟೈಗರ್ಸ್ 4 ವಿಕೆಟ್ ನಷ್ಟಕ್ಕೆ 105 ರನ್​ ಕಲೆ ಹಾಕಿತು. ಈ ಮೂಲಕ 138 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಕರ್ನಾಟಕ ತಂಡ 10 ಒವರ್​ನಲ್ಲಿ 125 ರನ್​ ಕಲೆ ಹಾಕಿತು. ಈ ಮೂಲಕ ಬೆಂಗಾಲ್ ಟೈಗರ್ಸ್ ತಂಡ 12 ರನ್​ಗಳ ಗೆಲುವು ಕಂಡಿತು. ಒಳ್ಳೆಯ ಫೈಟ್​ ಕೊಟ್ಟು ಸೋತೆವು ಎನ್ನುವ ಖುಷಿ ಸುದೀಪ್ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು