AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್

ಫೆಬ್ರವರಿ 23ರಿಂದ ​ ಸಿಸಿಎಲ್​ ಪಂದ್ಯಗಳು ನಡೆದವು. ಕರ್ನಾಟಕ ಬುಲ್ಡೋಜರ್ಸ್ ತಂಡ ಉತ್ತಮವಾಗಿ ಪ್ರದರ್ಶನ ನೀಡಿತು. ಕ್ವಾಟರ್​ ಫೈನಲ್​ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆದ್ದಿದ್ದ ಕರ್ನಾಟಕದ ತಂಡ ಫಿನಾಲೆಯಲ್ಲಿ ಅದೇ ತಂಡದ ವಿರುದ್ಧ ಸೋಲು ಕಂಡಿದೆ. ಬೆಂಗಾಲ್ ಟೈಗರ್ಸ್ ಚಾಂಪಿಯನ್ ಆಗಿದೆ.

CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್
ಜಿಶ್ಶು-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Mar 18, 2024 | 7:04 AM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ (CCL) ಫೈನಲ್ ಪಂದ್ಯ ಮಾರ್ಚ್ 18ರಂದು ನಡೆದಿದೆ. ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ್ ಟೈಗರ್ಸ್ ನಡುವಿನ ಪಂದ್ಯದಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲಾಗಿದೆ. ಈ ಮೂಲಕ ಕಪ್ ಮಿಸ್ ಆಗಿದೆ. ಈ ನೋವಿನಲ್ಲೂ ಕಿಚ್ಚ ಸುದೀಪ್ ಅವರು ಮೊದಲ ಬಾರಿ ಕಪ್ ಗೆದ್ದ ಆರ್​ಸಿಬಿ ಮಹಿಳಾ ತಂಡಕ್ಕೆ ಶುಭಾಶಯ ಹೇಳಿದ್ದಾರೆ. ಬೆಂಗಾಲ್ ಟೈಗರ್ಸ್ ತಂಡದ ಕ್ಯಾಪ್ಟನ್ ಜಿಶ್ಶು ಸೇನ್​ಗುಪ್ತಾಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ.

ಫೆಬ್ರವರಿ 23ರಿಂದ ಪ್ರತಿ ವೀಕೆಂಡ್​​ ಸಿಸಿಎಲ್​ ಪಂದ್ಯಗಳು ನಡೆದವು. ಕರ್ನಾಟಕ ಬುಲ್ಡೋಜರ್ಸ್ ತಂಡ ಉತ್ತಮವಾಗಿ ಪ್ರದರ್ಶನ ನೀಡಿತು. ಕ್ವಾಟರ್​ ಫೈನಲ್​ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆದ್ದಿದ್ದ ಕರ್ನಾಟಕದ ತಂಡ ಫಿನಾಲೆಯಲ್ಲಿ ಅದೇ ತಂಡದ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಬೆಂಗಾಲ್ ಟೈಗರ್ಸ್ ಸಿಸಿಎಲ್​ ಕಪ್​ನ ಮನೆಗೆ ಕೊಂಡೊಯ್ದಿದೆ.

ಸಿಸಿಎಲ್​ನಲ್ಲಿ ಹೊಸ ಫಾರ್ಮ್ಯಾಟ್ ಬಳಕೆ ಮಾಡಲಾಗಿದೆ. 10 ಓವರ್​ಗಳ ನಾಲ್ಕು ಇನ್ನಿಂಗ್ಸ್ ಇರುತ್ತದೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದವರು 10 ಓವರ್ ಆಡಬೇಕು. ನಂತರ ಎದುರಾಳಿ ತಂಡದವರು 10 ಓವರ್ ಆಡಬೇಕು. ಆ ಬಳಿಕ ಎರಡನೇ ಇನ್ನಿಂಗ್ಸ್ ಕೂಡ ಹೀಗೆಯೇ ಇರುತ್ತದೆ. ಮೊದಲು ಬ್ಯಾಟ್ ಮಾಡಿದ ಬೆಂಗಾಲ್​ ಟೈಗರ್ಸ್ 118 ರನ್​ಗಳನ್ನು ಪೇರಿಸಿತ್ತು. ಏಳು ವಿಕೆಟ್ ನಷ್ಟಕ್ಕೆ ಕರ್ನಾಟಕ ಬುಲ್ಡೋಜರ್ಸ್ 86 ರನ್​ಗಳನ್ನು ಕಲೆ ಹಾಕಿತು.

ಇದನ್ನೂ ಓದಿ: CCL 2023: ಕರ್ನಾಟಕ ಬುಲ್ಡೋಝರ್ಸ್ ಮುಂದೆ ಮಂಡಿಯೂರಿದ ಬೆಂಗಾಲ್ ಟೈಗರ್ಸ್

32 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಬೆಂಗಾಲ್​ ಟೈಗರ್ಸ್ 4 ವಿಕೆಟ್ ನಷ್ಟಕ್ಕೆ 105 ರನ್​ ಕಲೆ ಹಾಕಿತು. ಈ ಮೂಲಕ 138 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಕರ್ನಾಟಕ ತಂಡ 10 ಒವರ್​ನಲ್ಲಿ 125 ರನ್​ ಕಲೆ ಹಾಕಿತು. ಈ ಮೂಲಕ ಬೆಂಗಾಲ್ ಟೈಗರ್ಸ್ ತಂಡ 12 ರನ್​ಗಳ ಗೆಲುವು ಕಂಡಿತು. ಒಳ್ಳೆಯ ಫೈಟ್​ ಕೊಟ್ಟು ಸೋತೆವು ಎನ್ನುವ ಖುಷಿ ಸುದೀಪ್ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ