AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಚಕತೆ ಪಡೆದುಕೊಂಡ ಸಿಸಿಎಲ್ ಫೈನಲ್; ಗೆದ್ದವರು ಯಾರು?

ಪಂಜಾಬ್ ದೇ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್‌ನಲ್ಲಿ ಸೋತಿತು. ಈ ಟೂರ್ನಮೆಂಟ್‌ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.

ರೋಚಕತೆ ಪಡೆದುಕೊಂಡ ಸಿಸಿಎಲ್ ಫೈನಲ್; ಗೆದ್ದವರು ಯಾರು?
ಸಿಸಿಎಲ್
ರಾಜೇಶ್ ದುಗ್ಗುಮನೆ
|

Updated on: Mar 03, 2025 | 7:32 AM

Share

ಕಳೆದ ಕೆಲ ವಾರಗಳಿಂದ ಹಲವು ಹಂತಗಳಲ್ಲಿ ಸಾಗುತ್ತಿದ್ದ ಸಿಸಿಎಲ್​ನ ಫಿನಾಲೆ ಭಾನುವಾರ (ಮಾರ್ಚ್ 3) ನಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿ ಆದವು. ಈ ವೇಳೆ ಚೆನ್ನೈ ತಂಡ ಸೋತಿದ್ದು, ಪಂಜಾಬ್ ತಂಡ ಗೆಲುವಿನ ನಗೆ ಬೀರಿದೆ. ಈ ಮೂಲಕ ಮೊದಲ ಬಾರಿಗೆ ಕಪ್​ಗೆ ಮುತ್ತಿಟ್ಟಿದೆ. ಕರ್ನಾಟಕ ಬುಲ್ಡೋಜರ್ ತಂಡ ಸೆಮಿ ಫೈನಲ್ ಹಂತದಲ್ಲೇ ಸೋಲನ್ನು ಕಂಡಿತ್ತು.

ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಚೆನ್ನೈ 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟ್ ಮಾಡಿದ ಪಂಜಾಬ್ 1 ವಿಕೆಟ್ ಕಳೆದುಕೊಂಡು 103 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ 14 ರನ್​ಗಳ ಮುನ್ನಡೆ ಸಾಧಿಸಿತು. ನಂತರ ಬ್ಯಾಟ್ ಬೀಸಿದ ಚೆನ್ನೈ 85 ರನ್ ಗಳಿಸಲಷ್ಟೇ ಶಕ್ಯವಾಯಿತು.

ಪಂಜಾಬ್ ತಂಡ 14 ರನ್​ಗಳ ಮುನ್ನಡೆ ಸಾಧಿಸಿದ್ದರಿಂದ 72 ರನ್​ಗಳನ್ನು  ಬಾರಿಸಿದರೆ ಪಂಜಾಬ್​ಗೆ ಗೆಲುವು ಸಿಗುತ್ತಿತ್ತು. ಇದನ್ನು ಕೇವಲ 8 ಓವರ್​​ಗಳಲ್ಲಿ ಚಚ್ಚಿ ಪಂಜಾಬ್ ಗೆಲುವಿನ ನಗೆ ಬೀರಿತು. ಈ ಮೂಲಕ 8 ವಿಕೆಟ್​ಗಳ ಗೆಲುವು ಕಂಡಿತು. ಮೊದಲ ಬಾರಿಗೆ ಕಪ್​ ಗೆದ್ದ ಖುಷಿಯನ್ನು ಪಂಜಾಬ್ ತಂಡ ಆಚರಿಸಿಕೊಂಡಿತು. ಚೆನ್ನೈ ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿತು.

ಇದನ್ನೂ ಓದಿ: CCL 2025: 38 ಎಸೆತಗಳಲ್ಲಿ 80 ರನ್; ಮೊದಲ ಪಂದ್ಯದಲ್ಲೇ ಸುನಾಮಿ ಎಬ್ಬಿಸಿದ ಡಾರ್ಲಿಂಗ್ ಕೃಷ್ಣ

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಪರ ಅದ್ಭುತ ಪ್ರದರ್ಶನ ನೀಡಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ