AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

‘ಹನುಮಾನ್​’ ಚಿತ್ರತಂಡದವರು ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋವನ್ನು ಅನುರಾಗ್​ ಠಾಕೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿರುವ ಅವರು ಇಡೀ ತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ.

‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​
ತೇಜ ಸಜ್ಜಾ, ಅನುರಾಗ್​ ಠಾಕೂರ್​, ಹನುಮಾನ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 18, 2024 | 1:10 PM

Share

ಎಲ್ಲ ವರ್ಗದ ಜನರನ್ನು ಹನುಮಾನ್​’ ಸಿನಿಮಾ (Hanuman Movie) ಆಕರ್ಷಿಸುತ್ತಿದೆ. ಈಗ ದೇಶದೆಲ್ಲೆಡೆ ರಾಮ ಮಂದಿರದ ಚರ್ಚೆ ನಡೆಯುತ್ತಿದೆ. ರಾಮ, ಆಂಜನೇಯರ ಪೂಜೆ ಎಲ್ಲೆಲ್ಲೂ ನಡೆಯುತ್ತಿದೆ. ಅದೇ ಸಂದರ್ಭಕ್ಕೆ ಸರಿಯಾಗಿ ತೆಲುಗಿನ ತೇಜ ಸಜ್ಜಾ (Teja Sajja) ಅಭಿನಯದ ‘ಹನುಮಾನ್​’ ಸಿನಿಮಾ ಬಿಡುಗಡೆ ಆಗಿರುವುದು ವಿಶೇಷ. ಇದರಿಂದ ಚಿತ್ರತಂಡಕ್ಕೆ ಅನುಕೂಲ ಆಗಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಕೂಡ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಶಿವರಾಜ್​ಕುಮಾರ್​, ನಂದಮೂರಿ ಬಾಲಕೃಷ್ಣ ಅವರ ಬಳಿಕ ಕೇಂದ್ರ ಸಚಿವ ಅನುರಾಗ್​ ಠಾಕೂರ್​ (Anurag Thakur) ಸಹ ‘ಹನುಮಾನ್​’ ಸಿನಿಮಾದ ಬಗ್ಗೆ ಟ್ವೀಟ್​ ಮಾಡಿದ್ದಾರೆ.

‘ಹನುಮಾನ್​’ ಚಿತ್ರತಂಡದವರು ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋವನ್ನು ಅನುರಾಗ್​ ಠಾಕೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿರುವ ಅವರು ಇಡೀ ತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ‘ಹನುಮಾನ್​’ ಸಿನಿಮಾವನ್ನು ಮಾಸ್ಟರ್​ ಪೀಸ್​ ಎಂದು ಅನುರಾಗ್​ ಠಾಕೂರ್​ ಹೊಗಳಿದ್ದಾರೆ.

‘ನಮ್ಮ ಸನಾತನ ಧರ್ಮದ ಕುರಿತಾಗಿ ಇರುವ ಹನುಮಾನ್​ ಸಿನಿಮಾ ಒಂದು ಮಾಸ್ಟರ್​ಪೀಸ್​. ಸಿನಿಮಾದ ಗ್ರಾಫಿಕ್ಸ್​ ತುಂಬ ಚೆನ್ನಾಗಿದೆ. ಚಿತ್ರತಂಡದ ಶ್ರಮ ಎದ್ದು ಕಾಣುತ್ತಿದೆ. ಈ ತಂಡಕ್ಕೆ ನಾನು ಮೆಚ್ಚುಗೆ ಸೂಚಿಸುತ್ತೇನೆ. ನಿರ್ದೇಶಕ ಪ್ರಶಾಂತ್​ ವರ್ಮಾ, ನಟ ತೇಜ ಸಜ್ಜಾ, ನಿರ್ಮಾಪಕ ನಿರಂಜನ್​ ರೆಡ್ಡಿ ಹಾಗೂ ತಂಡದವರು ಅತ್ಯುತ್ತಮ ಸಿನಿಮಾ ಮಾಡಿದ್ದಾರೆ’ ಎಂದು ಅನುರಾಗ್​ ಠಾಕೂರ್​ ಪೋಸ್ಟ್​ ಮಾಡಿದ್ದಾರೆ. ಇದರ ಜೊತೆ #HanuManEverywhere ಎಂಬ ಹ್ಯಾಶ್​ಟ್ಯಾಗ್​ ಬಳಸಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾ ನೋಡಿ ಭೇಷ್​ ಎಂದ ಬಾಲಯ್ಯ; ಹೆಚ್ಚಿತು ಚಿತ್ರತಂಡದ ಬಲ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಹನುಮಾನ್​’ ಸಿನಿಮಾ ಬಿಡುಗಡೆ ಆಯಿತು. ಆಂಜನೇಯನಿಂದ ಸೂಪರ್​ ಪವರ್​ ಪಡೆಯುವ ಯುವಕನ ಕಥೆ ಈ ಸಿನಿಮಾದಲ್ಲಿ ಇದೆ. ಆ ಪಾತ್ರಕ್ಕೆ ತೇಜ ಸಜ್ಜಾ ಅವರು ಬಣ್ಣ ಹಚ್ಚಿದ್ದಾರೆ. ರಾಜ್​ ದೀಪಕ್​ ಶೆಟ್ಟಿ, ಅಮೃತಾ ಐಯ್ಯರ್​, ವರಲಕ್ಷ್ಮೀ ಶರತ್​ ಕುಮಾರ್​, ವಿನಯ್ ರೈ ಮುಂತಾದವರು ‘ಹನುಮಾನ್​’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್