AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಿರಿಕ್ ಮಾಡಿಕೊಂಡ ಚೈತ್ರಾ-ರಜತ್; ವೇದಿಕೆ ಮೇಲೆ ಮಾತಿನ ಚಕಮಕಿ

ಚೈತ್ರಾ ಕುಂದಾಪುರ ಮತ್ತು ರಜತ್ ಅವರ ಬಿಗ್ ಬಾಸ್ ಮನೆಯ ಕಿರಿಕ್‌ಗಳು ಈಗ ‘ಬಾಯ್ಸ್ vs ಗರ್ಲ್ಸ್’ ವೇದಿಕೆಯಲ್ಲಿ ಮುಂದುವರಿದಿದೆ. ಅವರ ಹಾಸ್ಯಮಯ ಜಗಳ ಮತ್ತು ನೃತ್ಯ ಪ್ರೇಕ್ಷಕರನ್ನು ರಂಜಿಸಿದೆ. ಚೈತ್ರಾ ಅವರ ಬಿಗ್ ಬಾಸ್ ನಂತರದ ಚಿತ್ರಣ ಬದಲಾಗಿದೆ. ಈ ಶೋ ಮೂಲಕ ಅವರು ಮತ್ತೆ ಗಮನ ಸೆಳೆದಿದ್ದಾರೆ. ಅನುಪಮಾ ಗೌಡ ಅವರು ರಜತ್ ಮತ್ತು ಚೈತ್ರಾ ಜೋಡಿ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ.

ಮತ್ತೆ ಕಿರಿಕ್ ಮಾಡಿಕೊಂಡ ಚೈತ್ರಾ-ರಜತ್; ವೇದಿಕೆ ಮೇಲೆ ಮಾತಿನ ಚಕಮಕಿ
ರಜತ್-ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Feb 13, 2025 | 12:02 PM

Share

ಚೈತ್ರಾ ಕುಂದಾಪುರ ಹಾಗೂ ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟೂ ದಿನ ಕಿರಿಕ್​ಗಳನ್ನು ಮಾಡಿಕೊಂಡಿದ್ದರು. ಇವರ ಕಿರಿಕ್ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಕೊನೆಯ ದಿನಗಳಲ್ಲಿ ಇದು ಸಹಜ ಸ್ಥಿತಿಗೆ ಬಂದಿತ್ತು. ಇಬ್ಬರೂ ಈಗ ‘ಬಾಯ್ಸ್ vs ಗರ್ಲ್ಸ್’ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಚೈತ್ರಾ ಕುಂದಾಪುರ ಹಾಗೂ ರಜತ್ ಕಿರಿಕ್ ಮಾಡಿಕೊಂಡಿದ್ದಾರೆ. ಹಾಗಂತ ಇದು ಗಂಭೀರ ಕಿರಿಕ್ ಆಗಿರಲಿಲ್ಲ.

ಚೈತ್ರಾ ಕುಂದಾಪುರ ಅವರಿಗೆ ಹೊರಗೆ ಬೇರೆಯದೇ ರೀತಿಯ ಇಮೇಜ್ ಇತ್ತು. ಆದರೆ, ಬಿಗ್ ಬಾಸ್​ಗೆ ಹೋಗಿ ಬಂದ ಬಳಿಕ ಅವರನ್ನು ನೋಡುವ ದೃಷ್ಟಿ ಬದಲಾಗಿದೆ. ಅವರಿಗೆ ಪಾಸಿಟಿವ್ ಇಮೇಜ್ ಸಿಕ್ಕಿದೆ. ಅವರು ದೊಡ್ಮನೆಯಲ್ಲಿ ಇರುವಷ್ಟು ದಿನ್ ರಜತ್ ಜೊತೆ ಕಿರಿಕ್ ಮಾಡಿಕೊಂಡಿದ್ದರು. ಈಗ ಅದು ಫನ್ ಆಗಿ ಬದಲಾಗಿದೆ. ಇಬ್ಬರೂ ಕೋಳಿ ಜಗಳ ಮಾಡಿಕೊಳ್ಳುತ್ತಿದ್ದಾರೆ.

‘ಬಾಯ್ಸ್ vs ಗರ್ಲ್ಸ್​’ ವೇದಿಕೆ ಮೇಲೆ ರಜತ್ ಹಾಗೂ ಚೈತ್ರಾ ಸಾಂಗ್ ಒಂದಕ್ಕೆ ಹೆಜ್ಜೆ ಹಾಕಿದ್ದಾರೆ. ಆ ಬಳಿಕ ವೇದಿಕೆ ಮೇಲೆ ಚರ್ಚೆ ನಡೆಯಿತು. ‘ರಜತ್ ಅವರಿಗೆ ತುಂಬಾ ಹಿಂದೆಯೇ ಮದುವೆ ಆಗಿದೆ. ಇಲ್ಲದಿದ್ದರೆ ನೀವೇನಾದರೂ ಜೋಡಿ ಆಗಿದ್ದರೆ ತುಂಬಾನೇ ಸಮಸ್ಯೆ ಆಗುತ್ತಿತ್ತು’ ಎಂದರು ಅನುಪಮಾ ಗೌಡ. ‘ಇದು ಸಾಧ್ಯವೇ ಇಲ್ಲ. ನಾನು ಅಷ್ಟೆಲ್ಲ ಗತಿ ಗೆಟ್ಟಿರಲಿಲ್ಲ’ ಎಂದರು ಚೈತ್ರಾ.

ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಸದ್ಯ ಇಬ್ಬರ ಕೋಳಿ ಜಗಳ ನೋಡಿ ಎಲ್ಲರೂ ನಕ್ಕಿದ್ದಾರೆ. ಚೈತ್ರಾ ಕುಂದಾಪುರ ಅವರು ಈ ವಿಶೇಷ ಎಪಿಸೋಡ್​ಗಾಗಿ ಡ್ಯಾನ್ಸ್ ಕಲಿತು ಮಾಡಿದ್ದಾರೆ. ಅವರ ಡ್ಯಾನ್ಸ್ ಅನೇಕರಿಗೆ ಇಷ್ಟ ಆಗಿದೆ.

ಇದನ್ನೂ ಓದಿ: ‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಗ್ ಬಾಸ್​​ನಲ್ಲಿ ರಜತ್ ಹಾಗೂ ಚೈತ್ರಾ ಗಮನ ಸೆಳೆದರು. ಈಗ ಹೊಸ ರಿಯಾಲಿಟಿ ಶೋ ಮೂಲಕ ಇವರ ಧೂಳೆಬ್ಬಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ