AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ

ಚೈತ್ರಾ ಕುಂದಾಪುರ ಅವರ ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಶ್ರೀಕಾಂತ್ ಕಶ್ಯಪ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರು ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿಹಿ ಸುದ್ದಿ ತಿಳಿದ ಕೂಡಲೇ ಚೈತ್ರಾ ಕುಂದಾಪುರ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ
Shrikanth Kashyap, Chaithra Kundapura
ಮದನ್​ ಕುಮಾರ್​
|

Updated on: May 08, 2025 | 10:15 PM

Share

ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ (Chaithra Kundapura) ಅವರು ಹಸೆಮಣೆ ಏರಲಿ ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆಗೆ (Chaithra Kundapura Marriage) ತಯಾರಿ ನಡೆದಿದೆ. ಇಷ್ಟು ದಿನಗಳ ಕಾಲ ಚೈತ್ರಾ ಕುಂದಾಪುರ ಅವರು ವರನ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ಹೊಸದೊಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಶ್ರೀಕಾಂತ್ ಕಶ್ಯಪ್ (Shrikanth Kashyap) ಜೊತೆ ಚೈತ್ರಾ ಕುಂದಾಪುರ ಮದುವೆ ನೆರವೇರಲಿದೆ. ಪ್ರೀ-ವೆಡ್ಡಿಂಗ್ ವಿಡಿಯೋವನ್ನು ಚೈತ್ರಾ ಕುಂದಾಪುರ ಅವರ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್ ಮಾಡಿದ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋಗೆ ಬಂದ ಬಳಿಕ ಚೈತ್ರಾ ಕುಂದಾಪುರ ಅವರ ಖ್ಯಾತಿ ಹೆಚ್ಚಿತು. ನಂತರ ಅವರು ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲೂ ಕಾಣಿಸಿಕೊಂಡರು. ಬಿಗ್ ಬಾಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಅವರು ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಈಗ ಚೈತ್ರಾ ಕುಂದಾಪುರ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಇದನ್ನೂ ಓದಿ
Image
‘ನಾನೇನು ಬಿಟ್ಟಿ ಬಿದ್ದಿದೀನಾ?’; ಮತ್ತೆ ರೌದ್ರಾವತಾರ ತೋರಿಸಿದ ಚೈತ್ರಾ
Image
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
Image
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
Image
‘ನನಗೆ ಬಿಗ್ ಬಾಸ್ ಸರಿಯಲ್ಲ, ತಪ್ಪು ನಿರ್ಧಾರ ಮಾಡಿದೆ’: ಚೈತ್ರಾ ಕುಂದಾಪುರ

‘ಇದು ಬಹಿರಂಗಪಡಿಸುವ ಸಮಯ. ಬದುಕಿನ ಸಂಕಷ್ಟದಿಂದ ಸಂಭ್ರಮದವರೆಗೂ ಜೊತೆ ನಿಂತ ಜೀವದೊಂದಿಗೆ ಸಪ್ತಪದಿ ಇಡುವ ಸಮಯ ಬಂದಿದೆ. ನಿಮ್ಮೆಲ್ಲರ ಹಾರೈಕೆ ನಮ್ಮನ್ನು ಕಾಯಲಿ’ ಎಂಬ ಕ್ಯಾಪ್ಷನ್​​ನೊಂದಿಗೆ ಚೈತ್ರಾ ಕುಂದಾಪುರ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಸಂದರ್ಭದಲ್ಲಿ ಮದುವೆ ಬಗ್ಗೆ ಸುದೀಪ್ ಮಾತನಾಡಿದ್ದ ತುಣುಕು ಕೂಡ ಈ ವಿಡಿಯೋದಲ್ಲಿದೆ.

ಬಿಗ್ ಬಾಸ್​​ಗೆ ಬರುವಾಗಲೇ ಚೈತ್ರಾ ಕುಂದಾಪುರ ಅವರ ಮದುವೆ ಮಾತುಕಥೆ ನಡೆದಿತ್ತು. ‘ಈಗಾಗಲೇ ಮದುವೆ ಫಿಕ್ಸ್ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ಹೇಳಿದ್ದರು. ಆದರೆ ಹುಡುಗ ಯಾರು ಎಂಬುದನ್ನು ತಿಳಿಸಿರಲಿಲ್ಲ. ಈಗ ವಿಡಿಯೋ ಮೂಲಕ ಅವರು ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

‘ಯಾವುದಾದರೂ ದೇವಸ್ಥಾನದಲ್ಲಿ ದೇವರಿಗೆ ಅವರನ್ನು ಸಮರ್ಪಣೆ ಮಾಡಿಕೊಂಡ ವ್ಯಕ್ತಿಯನ್ನು ನೀವು ಮದುವೆ ಆಗುವುದು ಉತ್ತಮ. ಯಾಕೆಂದರೆ, ನೀವು ಏನೇ ಮಾಡಿದರೂ ಅವರು ದೇವರೇ ಅಂತ ಕುಳಿತುಕೊಳ್ಳುತ್ತಾರೆ’ ಎಂದು ಸುದೀಪ್ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ