AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೈ ಮುಟ್ಟಬೇಡಿ, ಕಾಲು ನೆಟ್ಟಗಿದೆ’; ಐಶ್ವರ್ಯಾ ವಿರುದ್ಧ ರೌದ್ರಾವತಾರ ತಾಳಿದ ಚೈತ್ರಾ ಕುಂದಾಪುರ

ಕ್ಯಾಪ್ಟನ್​ ರೂಮಿಗೆ ಬೇರೆಯವರನ್ನು ಕರೆದುಕೊಂಡು ಹೋಗುವಂತಿಲ್ಲ. ಆದರೆ ಗೇಮ್​ ಬಗ್ಗೆ ತಂತ್ರಗಾರಿಕೆ ಮಾಡಲು ಚೈತ್ರಾ ಅವರನ್ನು ಕ್ಯಾಪ್ಟನ್ ರೂಮಿಗೆ ತ್ರಿವಿಕ್ರಮ್ ಕರೆದುಕೊಂಡು ಹೋಗಿದ್ದಾರೆ. ಇದರಿಂ ಐಶ್ವರ್ಯಾ ಹಾಗೂ ಚೈತ್ರಾ ಮಧ್ಯೆ ಕಿರಿಕ್ ಆಗಿದೆ.

‘ಮೈ ಮುಟ್ಟಬೇಡಿ, ಕಾಲು ನೆಟ್ಟಗಿದೆ’; ಐಶ್ವರ್ಯಾ ವಿರುದ್ಧ ರೌದ್ರಾವತಾರ ತಾಳಿದ ಚೈತ್ರಾ ಕುಂದಾಪುರ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 25, 2024 | 7:02 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಜೋರು ಧ್ವನಿಯಲ್ಲಿ ಮಾತನಾಡುತ್ತಾರೆ. ಕೂಗಾಟ, ಕಿರುಚಾಟ ಮಾಡುತ್ತಾ ಸುದ್ದಿ ಆಗುತ್ತಾರೆ. ಇದು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಅವರ ಕೋಪವನ್ನು ಅನೇಕರು ಸಹಿಸಿಕೊಂಡಿದ್ದಾರೆ. ಅವರ ಅರಚಾಟಕ್ಕೆ ಕೆಲವರು ಬೆಚ್ಚಿ ಬಿದ್ದಿದ್ದೂ ಇದೆ. ಈಗ ದೊಡ್ಮನೆಯಲ್ಲಿ ಚೈತ್ರಾ ಹಾಗೂ ಐಶ್ವರ್ಯಾ ಮಧ್ಯೆ ಕಿತ್ತಾ ನಡೆದಿದೆ.

ಈ ಬಾರಿ ತ್ರಿವಿಕ್ರಂ ಹಾಗೂ ಐಶ್ವರ್ಯಾ ಕ್ಯಾಪ್ಟನ್ ಆಗಿದ್ದಾರೆ. ಈ ರೀತಿ ಜೋಡಿಯೊಂದು ಒಟ್ಟಿಗೆ ಕ್ಯಾಪ್ಟನ್ ಆಗಿರೋದು ಇದೇ ಮೊದಲು. ಇಬ್ಬರಿಗೂ ಕ್ಯಾಪ್ಟನ್ ರೂಂ ಬಳಕೆ ಮಾಡುವ ಅಧಿಕಾರ ಇದೆ. ಕ್ಯಾಪ್ಟನ್ ರೂಂನಲ್ಲಿ ವಿಶೇಷ ಸವಲತ್ತುಗಳು ಇರುತ್ತವೆ. ನಿಯಮಗಳ ಪ್ರಕಾರ ಕ್ಯಾಪ್ಟನ್ ಹೊರತು ಯಾರೂ ಕೂಡ ಈ ರೂಂನ ಬಳಕೆ ಮಾಡಬಾರದು. ಆದರೆ, ಈ ನಿಯಮವನ್ನು ತ್ರಿವಿಕ್ರಂ ಮುರಿದಿದ್ದಾರೆ.

ಚೈತ್ರಾ ಅವರನ್ನು ಕ್ಯಾಪ್ಟನ್​ ರೂಂಗೆ ಕರೆದುಕೊಂಡು ಹೋಗಿದ್ದಾರೆ ತ್ರಿವಿಕ್ರಂ. ಇದನ್ನು ಗಮನಿಸಿದ ಐಶ್ವರ್ಯಾ ಅವರು ಚೈತ್ರಾ ಅವರನ್ನು ಕರೆದುಕೊಂಡು ಬರಲು ಪ್ರಯತ್ನಿಸಿದರು. ‘ಕ್ಯಾಪ್ಟನ್ ಹೊರತುಪಡಿಸಿ ಮತ್ಯಾರೂ ಆ ರೂಂನ ಬಳಕೆ ಮಾಡುವಂತಿಲ್ಲ’ ಎಂದು ಐಶ್ವರ್ಯಾ ಹೇಳಿದರು. ಆದರೆ, ಇದನ್ನು ತ್ರಿವಿಕ್ರಂ ಒಪ್ಪಲಿಲ್ಲ.

ಆ ಬಳಿಕ ಐಶ್ವರ್ಯಾ ಅವರು, ಚೈತ್ರಾನ ಕೈ ಹಿಡಿದು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಚೈತ್ರಾ ಸಿಟ್ಟಾದರು. ‘ಕೈ ಮುಟ್ಟಿ ಮಾತನಾಡಬೇಡಿ. ನನ್ನ ಕಾಲು ಮುಟ್ಟಬೇಡಿ’ ಎಂದು ಕೂಗಾಡಿದರು ಚೈತ್ರಾ. ಆ ಬಳಿಕ ಸುಮ್ಮನಾದರು ಐಶ್ವರ್ಯಾ. ನಂತರ ತ್ರಿವಿಕ್ರಂ ಜೊತೆ ಸಿಟ್ಟು ಮಾಡಿಕೊಂಡರು. ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ

‘ಬಿಗ್ ಬಾಸ್​’ನಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಕಿರಿಕ್​ಗಳು ಆಗುತ್ತಿವೆ. ಈ ಘಟನೆಗಳು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕುತ್ತಿದೆ. ಸ್ವಲ್ಪ ಹಾಸ್ಯದ ಅಂಶವೂ ಇರಬೇಕು ಎಂದು ವೀಕ್ಷಕರು ಅಭಿಪ್ರಾಯ ಪಡುತ್ತಿದ್ದಾರೆ. ಈ ವಾರ ಕಿಚ್ಚ ಸುದೀಪ್ ಅವರು ನಿರೂಪಣೆಗೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಅವರ ತಾಯಿ ನಿಧನ ಹೊಂದಿರುವುದರಿಂದ ಈ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್