AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ಒಂದೊಂದು ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಟಾಸ್ಕ್​ನ ಮೇಲುಸ್ತುವಾರಿ ಹೊತ್ತಿದ್ದಾರೆ ದಿವ್ಯಾ ಉರುಡುಗ. ಪ್ರತಿ ಟಾಸ್ಕ್​ ಗೆದ್ದವರಿಗೆ ಪಾಯಿಂಟ್ಸ್​ ಸಿಗುತ್ತಾ ಹೋಗುತ್ತದೆ.

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ
ದಿವ್ಯಾ ಉರುಡುಗ
TV9 Web
| Edited By: |

Updated on: Jul 07, 2021 | 7:16 AM

Share

ಅರವಿಂದ್ ಕೆ.ಪಿ. ಹಾಗೂ ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದಾರೆ. ಒಬ್ಬರನ್ನೊಬ್ಬರು ಬಿಟ್ಟು ಇರೋಕೆ ಸಾಧ್ಯವಿಲ್ಲ ಎಂಬಷ್ಟು ಬಾಂಧವ್ಯ ಇಬ್ಬರ ನಡುವೆ ಬೆಳೆದಿದೆ. ಆದರೆ, ಇದು ಟಾಸ್ಕ್​ ಮೇಲೂ ಪ್ರಭಾವ ಬೀರುತ್ತಿದೆಯೇ ಎನ್ನುವ ಅನುಮಾನ ಮನೆಯವರಲ್ಲಿ ಮೂಡಿದೆ.

ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ಬಿಗ್​ ಬಾಸ್​ ಮನೆಯಲ್ಲಿ ಒಂದು ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನ ಮೇಲುಸ್ತುವಾರಿ ಕ್ಯಾಪ್ಟನ್​ ದಿವ್ಯಾ ಉರುಡುಗ ಅವರಿಗೆ ನೀಡಲಾಗಿತ್ತು. ಪ್ರತಿ ಟಾಸ್ಕ್​ ಗೆದ್ದವರಿಗೆ ಪಾಯಿಂಟ್ಸ್​ ಸಿಗುತ್ತಾ ಹೋಗುತ್ತದೆ. ಯಾರ ಬಳಿ ಹೆಚ್ಚು ಪಾಯಿಂಟ್ಸ್​ ಇರುತ್ತದೆಯೋ ಅವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹರಾಗುತ್ತಾರೆ.

ಇತ್ತೀಚೆಗಿನ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಟಾಸ್ಕ್​ ಒಂದನ್ನು ನೀಡಲಾಗಿತ್ತು, ಅದುವೇ ಜಲ ಚಕ್ರ. ಈ ಟಾಸ್ಕ್​ನ ಅನುಸಾರ, ಎಲ್ಲರೂ ಗಾರ್ಡನ್​ ಏರಿಯಾದಲ್ಲಿ ವೃತ್ತಾಕಾರದಲ್ಲಿ ಕೂರಬೇಕು. ಮಧ್ಯದಲ್ಲಿ ಹಗ್ಗಕ್ಕೆ ಕಟ್ಟಿದ ನೀರು ತುಂಬಿದ ಬಲೂನ್​ಅನ್ನು ಕ್ಯಾಪ್ಟನ್​ ತೂಗಿ ಬಿಡುತ್ತಾರೆ. ಇದು ಯಾರ ದೇಹಕ್ಕೆ ತಾಗುತ್ತದೆಯೋ ಅವರು ಔಟ್​. ಅಂದಹಾಗೆ, ಇಲ್ಲಿ ಪ್ರತಿ ಸ್ಪರ್ಧಿಯ ಕಣ್ಣಿಗೆ ಪಟ್ಟಿ ಕಟ್ಟಲಾಗುತ್ತದೆ.

ಈ ಆಟದಲ್ಲಿ ಒಬ್ಬೊಬ್ಬೋರಾಗಿ ಔಟ್​ ಆಗುತ್ತಾ ಬಂದರು. ಕೊನೆಯಲ್ಲಿ ಉಳಿದುಕೊಂಡಿದ್ದು ಚಕ್ರವರ್ತಿ ಹಾಗೂ ಅರವಿಂದ್. ಇಬ್ಬರ ನಡುವೆ ಆಟ ನಡೆಯುವಾಗ ಚಕ್ರವರ್ತಿ ಫೌಲ್​ ಎಂದು ದಿವ್ಯಾ ಉರುಡುಗ ಘೋಷಣೆ ಮಾಡಿದರು. ಹೀಗಾಗಿ, ಒಂದು ಕ್ಷಣ ಚಕ್ರವರ್ತಿ ಗಾಬರಿಗೊಳಗಾದರು. ಈ ವೇಳೆ ಆ ಬಾಲ್​ ಆಕಾರದ ವಸ್ತು ಬಂದು ಇವರಿಗೆ ತಾಗಿದೆ. ಈ ಮೂಲಕ ಅರವಿಂದ್ ಗೆದ್ದಿದ್ದಾರೆ.

ದಿವ್ಯಾ ಫೌಲ್​ ಎಂದು ಘೋಷಿಸಿದ್ದಕ್ಕೆ ನಿಂತೆ ಎಂದು ಚಕ್ರವರ್ತಿ ಹೇಳಿದರು. ಆಗ ದಿವ್ಯಾ, ನಾನು ಉದ್ದೇಶಪೂರ್ವಕವಾಗಿ ಇದನ್ನು ಮಾಡಿಲ್ಲ. ನಾನು ನಿಯಮ ಪಾಲಿಸಿದ್ದೇನೆ ಅಷ್ಟೇ ಎಂದು ಹೇಳುವ ಮೂಲಕ ತಮ್ಮ ವಿರುದ್ಧದ ಆರೋಪಕ್ಕೆ ಸ್ಪಷ್ಟನೆ ನೀಡಿದರು. ಅರವಿಂದ್ ಅವರನ್ನು ಗೆಲ್ಲಿಸುವ ಉದ್ದೇಶದಿಂದ ದಿವ್ಯಾ ಈ ರೀತಿ ಮಾಡಿದರು ಎನ್ನುವ ಬಗ್ಗೆ ಚರ್ಚೆ ನಡೆದಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

ಅಂಡಾಣು ಶೇಖರಣೆ ಪ್ರಕ್ರಿಯೆಗೆ ಒಳಗಾದ ನಂತರ ಎದುರಾದ ತೊಂದರೆಗಳನ್ನು ಹೇಳಿಕೊಂಡ ಬಿಗ್​ ಬಾಸ್​ ಸ್ಪರ್ಧಿ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ