AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ಒಂದೊಂದು ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಟಾಸ್ಕ್​ನ ಮೇಲುಸ್ತುವಾರಿ ಹೊತ್ತಿದ್ದಾರೆ ದಿವ್ಯಾ ಉರುಡುಗ. ಪ್ರತಿ ಟಾಸ್ಕ್​ ಗೆದ್ದವರಿಗೆ ಪಾಯಿಂಟ್ಸ್​ ಸಿಗುತ್ತಾ ಹೋಗುತ್ತದೆ.

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ
ದಿವ್ಯಾ ಉರುಡುಗ
TV9 Web
| Updated By: ಮದನ್​ ಕುಮಾರ್​|

Updated on: Jul 07, 2021 | 7:16 AM

Share

ಅರವಿಂದ್ ಕೆ.ಪಿ. ಹಾಗೂ ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದಾರೆ. ಒಬ್ಬರನ್ನೊಬ್ಬರು ಬಿಟ್ಟು ಇರೋಕೆ ಸಾಧ್ಯವಿಲ್ಲ ಎಂಬಷ್ಟು ಬಾಂಧವ್ಯ ಇಬ್ಬರ ನಡುವೆ ಬೆಳೆದಿದೆ. ಆದರೆ, ಇದು ಟಾಸ್ಕ್​ ಮೇಲೂ ಪ್ರಭಾವ ಬೀರುತ್ತಿದೆಯೇ ಎನ್ನುವ ಅನುಮಾನ ಮನೆಯವರಲ್ಲಿ ಮೂಡಿದೆ.

ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ಬಿಗ್​ ಬಾಸ್​ ಮನೆಯಲ್ಲಿ ಒಂದು ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನ ಮೇಲುಸ್ತುವಾರಿ ಕ್ಯಾಪ್ಟನ್​ ದಿವ್ಯಾ ಉರುಡುಗ ಅವರಿಗೆ ನೀಡಲಾಗಿತ್ತು. ಪ್ರತಿ ಟಾಸ್ಕ್​ ಗೆದ್ದವರಿಗೆ ಪಾಯಿಂಟ್ಸ್​ ಸಿಗುತ್ತಾ ಹೋಗುತ್ತದೆ. ಯಾರ ಬಳಿ ಹೆಚ್ಚು ಪಾಯಿಂಟ್ಸ್​ ಇರುತ್ತದೆಯೋ ಅವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹರಾಗುತ್ತಾರೆ.

ಇತ್ತೀಚೆಗಿನ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಟಾಸ್ಕ್​ ಒಂದನ್ನು ನೀಡಲಾಗಿತ್ತು, ಅದುವೇ ಜಲ ಚಕ್ರ. ಈ ಟಾಸ್ಕ್​ನ ಅನುಸಾರ, ಎಲ್ಲರೂ ಗಾರ್ಡನ್​ ಏರಿಯಾದಲ್ಲಿ ವೃತ್ತಾಕಾರದಲ್ಲಿ ಕೂರಬೇಕು. ಮಧ್ಯದಲ್ಲಿ ಹಗ್ಗಕ್ಕೆ ಕಟ್ಟಿದ ನೀರು ತುಂಬಿದ ಬಲೂನ್​ಅನ್ನು ಕ್ಯಾಪ್ಟನ್​ ತೂಗಿ ಬಿಡುತ್ತಾರೆ. ಇದು ಯಾರ ದೇಹಕ್ಕೆ ತಾಗುತ್ತದೆಯೋ ಅವರು ಔಟ್​. ಅಂದಹಾಗೆ, ಇಲ್ಲಿ ಪ್ರತಿ ಸ್ಪರ್ಧಿಯ ಕಣ್ಣಿಗೆ ಪಟ್ಟಿ ಕಟ್ಟಲಾಗುತ್ತದೆ.

ಈ ಆಟದಲ್ಲಿ ಒಬ್ಬೊಬ್ಬೋರಾಗಿ ಔಟ್​ ಆಗುತ್ತಾ ಬಂದರು. ಕೊನೆಯಲ್ಲಿ ಉಳಿದುಕೊಂಡಿದ್ದು ಚಕ್ರವರ್ತಿ ಹಾಗೂ ಅರವಿಂದ್. ಇಬ್ಬರ ನಡುವೆ ಆಟ ನಡೆಯುವಾಗ ಚಕ್ರವರ್ತಿ ಫೌಲ್​ ಎಂದು ದಿವ್ಯಾ ಉರುಡುಗ ಘೋಷಣೆ ಮಾಡಿದರು. ಹೀಗಾಗಿ, ಒಂದು ಕ್ಷಣ ಚಕ್ರವರ್ತಿ ಗಾಬರಿಗೊಳಗಾದರು. ಈ ವೇಳೆ ಆ ಬಾಲ್​ ಆಕಾರದ ವಸ್ತು ಬಂದು ಇವರಿಗೆ ತಾಗಿದೆ. ಈ ಮೂಲಕ ಅರವಿಂದ್ ಗೆದ್ದಿದ್ದಾರೆ.

ದಿವ್ಯಾ ಫೌಲ್​ ಎಂದು ಘೋಷಿಸಿದ್ದಕ್ಕೆ ನಿಂತೆ ಎಂದು ಚಕ್ರವರ್ತಿ ಹೇಳಿದರು. ಆಗ ದಿವ್ಯಾ, ನಾನು ಉದ್ದೇಶಪೂರ್ವಕವಾಗಿ ಇದನ್ನು ಮಾಡಿಲ್ಲ. ನಾನು ನಿಯಮ ಪಾಲಿಸಿದ್ದೇನೆ ಅಷ್ಟೇ ಎಂದು ಹೇಳುವ ಮೂಲಕ ತಮ್ಮ ವಿರುದ್ಧದ ಆರೋಪಕ್ಕೆ ಸ್ಪಷ್ಟನೆ ನೀಡಿದರು. ಅರವಿಂದ್ ಅವರನ್ನು ಗೆಲ್ಲಿಸುವ ಉದ್ದೇಶದಿಂದ ದಿವ್ಯಾ ಈ ರೀತಿ ಮಾಡಿದರು ಎನ್ನುವ ಬಗ್ಗೆ ಚರ್ಚೆ ನಡೆದಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

ಅಂಡಾಣು ಶೇಖರಣೆ ಪ್ರಕ್ರಿಯೆಗೆ ಒಳಗಾದ ನಂತರ ಎದುರಾದ ತೊಂದರೆಗಳನ್ನು ಹೇಳಿಕೊಂಡ ಬಿಗ್​ ಬಾಸ್​ ಸ್ಪರ್ಧಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್