AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chakravarti Chandrachud: ತಮ್ಮ ಸಿನಿಮಾಕ್ಕೆ ತೊಂದರೆ ಕೊಡುತ್ತಿರುವವರಿಗೆ ಚಕ್ರವರ್ತಿ ಚಂದ್ರಚೂಡ್ ಎಚ್ಚರಿಕೆ

Chakravarti Chandrachud: ತಮ್ಮ ಸಿನಿಮಾಕ್ಕೆ ತೊಂದರೆ ಕೊಡುತ್ತಿರುವವರಿಗೆ ಚಕ್ರವರ್ತಿ ಚಂದ್ರಚೂಡ್ ಎಚ್ಚರಿಕೆ ನೀಡಿದ್ದಾರೆ.

Chakravarti Chandrachud: ತಮ್ಮ ಸಿನಿಮಾಕ್ಕೆ ತೊಂದರೆ ಕೊಡುತ್ತಿರುವವರಿಗೆ ಚಕ್ರವರ್ತಿ ಚಂದ್ರಚೂಡ್ ಎಚ್ಚರಿಕೆ
ಚಕ್ರವರ್ತಿ ಚಂದ್ರಚೂಡ್
Follow us
ಮಂಜುನಾಥ ಸಿ.
|

Updated on:Feb 26, 2023 | 11:19 AM

ಮಾಜಿ ಬಿಗ್​ಬಾಸ್ (Bigg Boss) ಸ್ಪರ್ಧಿ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarty Chandrachud) ಅವರ ಹೊಸ ಸಿನಿಮಾವೊಂದನ್ನು ನಿರ್ದೇಶಿಸಿಸಲು ಮುಂದಾಗಿರುವ ಬಗ್ಗೆ ಕೆಲ ತಿಂಗಳ ಹಿಂದೆ ವರದಿಯಾಗಿತ್ತು. ಆದರೆ ಆ ಸಿನಿಮಾಕ್ಕೆ ಕೆಲವು ಅಡೆ-ತಡೆಗಳು ಎದುರಾಗಿದ್ದು, ವ್ಯಕ್ತಿಯೊಬ್ಬರು ತಮ್ಮ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡುವ ಜೊತೆಗೆ, ಸಿನಿಮಾ ನಿರ್ಮಾಣವಾಗದಂತೆ ಅಡ್ಡಗಾಲು ಹಾಕಲು ಯತ್ನಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಉದ್ದನೆಯ ಪೋಸ್ಟ್​ ಒಂದನ್ನು ಹಂಚಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್, ”ನಾಲ್ಕು ತಿಂಗಳ ಹಿಂದೆ “ಪಾದರಾಯ “ಎಂಬ ಶೀರ್ಷಿಕೆ ಅಡಿ ಒಂದು ಸಿನಿಮಾ ಘೋಷಣೆಯಾಯ್ತು. ನಾಯಕಿಯಾಗಿ ತೆಲುಗಿನ ಗಾಯಕಿ ಮಂಗ್ಲಿ ನಾಯಕ ನಟರಾಗಿ ನಿರ್ದೇಶಕ ನಟ ಶ್ರೀ ನಾಗಶೇಖರ್ ಕಥೆ ಚಿತ್ರಕಥೆ ಸಂಭಾಷಣೆ ನಿರ್ದೇಶನ ಚಕ್ರವರ್ತಿ ಡಿಜೆ ಎಂಬ ನಾನು ಎಂದು ನಿಕ್ಕಿಯಾಗಿತ್ತು. ಇವಿಷ್ಟೂ ಘೋಷಣೆಯ ಹಂತದಲ್ಲೇ ಉಳಿದವು. ಯಾರೊಬ್ಬರಿಗೂ ಈ ಸಿನಿಮಾ ಕುರಿತಂತೆ ಯಾವುದೇ ಒಪ್ಪಂದಗಳಾಗಲಿ. ಹಣಕಾಸಿನ ಮುಂಗಡವಾಗಲಿ ಆಗಿರುವುದಿಲ್ಲ. ನಾಗಶೇಖರ್ ಹಾಗೂ ಜಾಕ್ ಮಂಜು ನಿರ್ಮಾಪಕರು ಎನ್ನಲಾಗಿತ್ತು. ಆದರೆ ಜಾಕ್ ಮಂಜು ಅವರು ಕೆಲವು ಕಾರಣಗಳಿಂದ ಸಿನಿಮಾದಿಂದ ಹೊಗುಳಿದರು. ಆದರೆ ಆರ್ ಚಂದ್ರು ಅವರು ತಾವು ಸಿನಿಮಾ ನಿರ್ಮಾಣ ಮಾಡುವುದಾಗಿ ಮೌಖಿಕವಾಗಿ ಹೇಳಿದ್ದರು” ಎಂದು ಹಿಂದೆ ನಡೆದ ಘಟನೆಗಳ ಮಾಹಿತಿ ನೀಡಿದ್ದಾರೆ.

ಮುಂದುವರೆದು, ”ಈ ನಡುವೆ ಸಿನಿಮಾಗೆ ಸಂಬಂಧವಿಲ್ಲದ ವ್ಯಕ್ತಿಯೊಬ್ಬರು ನಾಗಶೇಖರ್ ಅವರಿಗೆ ಅವರ ವ್ಯಯಕ್ತಿಕವಾಗಿ ಎರಡೂ ಲಕ್ಷದ ನಲವತ್ತು ಸಾವಿರ ರುಪಾಯಿ ಹಣ ಕೊಟ್ಟಿರುವ ದಾಖಲಾತಿ ಹಿಡಿದುಕೊಂಡು ನಾನೇ ಇದರ ನಿರ್ಮಾಪಕ – ಆರ್ ಚಂದ್ರು ಅವರಿಂದ ನಾಗಶೇಖರ್ ಗೆ ಐದುಕೋಟಿ ರುಪಾಯಿ ಹಣದ ಒಪ್ಪಂದ ಈ ಸಿನಿಮಾ ಕಥೆಯ ಮೇಲಾಗಿದೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಅಲ್ಲದೇ ನಾಗಶೇಖರ್ ಅವರು ಆಡಿಯೋ ರೈಟ್ಸ್ ಮಾರಾಟ ಮಾಡಿದ್ದಾರೆ ಯಾರೂ ಈ ಸಿನಿಮಾ ಮಾಡಬೇಡಿ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.ಓರ್ವ ನಿರ್ದೇಶಕನ ಗಮನಕ್ಕೇ ಬಾರದೇ ಆಡಿಯೋ ರೈಟ್ಸ್ ಮಾರಾಟ ಐದು ಕೋಟಿ ಒಪ್ಪಂದ ಅಥವ ಯಾವುದೇ ಹಣದ ವ್ಯವಹಾರ ಮಾಡುವುದು ಅಕ್ಷಮ್ಯ ಅಪರಾಧ.ಈ ಕುರಿತು ವಿಚಾರಿಸಲಾಗಿ ಈ ಬಗೆಯ ಪ್ರಯತ್ನಗಳು ನಡೆಯಿತು ಆದರೆ ಸಫಲವಾಗಿಲ್ಲವೆಂದು ತಿಳಿದು ಬಂತು” ಎಂದು ತಮ್ಮ ಸಿನಿಮಾಕ್ಕೆ ಅನ್ಯಾಯ ಮಾಡುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

”ಈ ಕಥೆಯನ್ನೂ ನಾನು ಚಿತ್ರಕಥೆಯ ಸಹಿತ 2019 ರಲ್ಲೇ the cinematograph act 1952 ಪ್ರಕಾರ ನೊಂದಾಯಿಸಿ ಸಮಸ್ತ ದಾಖಲಾತಿ ಮಾಡಿಟ್ಟಿದ್ದೆ.(ನನ್ನ ಪುಣ್ಯ ) ಈ ಕಥೆ ಅಂಜನಾದ್ರಿ ಸುತ್ತಮುತ್ತಲಿನ ಭಾಗದ ಚಪ್ಪಲಿ ಕಳ್ಳ ಮತ್ತವನ ಹೆಂಡತಿಯ ಕಥೆಯಾಗಿರುತ್ತದೆ. ಈ ಕತೆ ರಚಿಸಲು ಬಹಳ ಶ್ರಮವಹಿಸಿದ್ದೇನೆ. ನನ್ನ ಹಣ ಬೆವರು ಹಸಿವು ಕಟ್ಟಿ ಕನಸುಗಣ್ಣುಗಳಿಂದ ಬರೆದಿಟ್ಟುಕೊಂಡಿದ್ದೇನೆ.ಹೊಟ್ಟೆಗೆ ಸಿನಿಮಾ ಸೆಟ್ ನ ಇಡ್ಲಿಯೋ ಅನ್ನವನ್ನೊ ತಿಂದಿರುವ ಯಾವೊಬ್ಬ ವ್ಯಕ್ತಿಯೂ ಕಂಡವರ ಕಣ್ಣಿಂದ ಉದುರಿದ ಕನಸುಗಳನ್ನು ಕಣ್ಣೀರಾಗಿಸುವುದಿಲ್ಲ. ಈ ಕಥೆ ಮತ್ತು ಸಿನಿಮಾ ದ ಹಕ್ಕು ಸಂಪೂರ್ಣ ಡಿ ಜೆ ಚಕ್ರವರ್ತಿ (ಚಂದ್ರಚೂಡ್ ) ಎಂಬ ನನ್ನದೇ ಆಗಿರುತ್ತದೆ. ಯಾರಾದರೂ ಈ ವಿಷಯದಲ್ಲಿ ಯಾರಿಗೇ ಹಣಕೊಟ್ಟಿದ್ದರೂ ನಾನು ಹೊಣೆಯಲ್ಲ” ಎಂದು ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟಪಡಿಸಿದ್ದಾರೆ.

”ನಾನು ಮುಂದಿನ ದಿನಗಳಲ್ಲಿ ‘ಪಾದರಾಯ’ ಎಂದು ನಾಮಕರಣ ಮಾಡಿದ ಈ ಚಿತ್ರವನ್ನು ನಾನೇ ನಟಿಸಿ ನಿರ್ದೇಶಿಸಲಿದ್ದೇನೆ. ಅಥವಾ ನನ್ನ ವಿವೇಚನೆಗೆ ತಕ್ಕಂತಹ ತಂಡದೊಂದಿಗೆ ಮಾಡಬಹುದು.ಈ ಕುರಿತಾಗಿ ದೂರವಾಣಿ ಸಂಭಾಷಣೆಯ ಮುಖಾಂತರ ಶ್ರೀ ಆರ್ ಚಂದ್ರು ರವರಲ್ಲಿ ಚರ್ಚಿಸಲಾಗಿ ನಾನು ನಾಗಶೇಖರ್ ರವರಿಗೆ ಯಾವುದೇ ಮಾತುಕೊಟ್ಟಿಲ್ಲ ಐದು ಕೋಟಿ ಕೊಟ್ಟು ಸಿನಿಮಾ ಮಾಡುತ್ತೇನೆಂದು ಯಾವುದೇ ರೀತಿಯಲ್ಲಿ ಮುಂದಾಗಿಲ್ಲವೆಂದು ಸ್ಪಷ್ಟನೆ ಕೊಟ್ಟಿರುತ್ತಾರೆ. ಕೆಲವು ದುಷ್ಕರ್ಮಿಗಳು ನನ್ನ ಸಿನಿಮಾಕ್ಕೆ ತೊಂದರೆ ಕೊಡುವ ಯತ್ನ ಮಾಡುತ್ತಿದ್ದಾರೆ. ಇಂಥಹಾ ಪ್ರಯತ್ನಗಳು ಮುಂದುವರೆದರೆ ಅಂಥಹವರ ವಿರುದ್ಧ ಉಗ್ರ ಕಾನೂನು ಕ್ರಮ ಜರುಗಿಸಲು ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ” ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Sun, 26 February 23

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ