AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ
ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 4:47 PM

Share

ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಗೆ ಬಂದಾಗ ಎಲ್ಲರನ್ನೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ, ಕೆಲ ವಿಚಾರದಲ್ಲಿ ಕಿಚ್ಚ ಸುದೀಪ್​ ಅವರಿಂದ ಪಾಠ ಹೇಳಿಸಿಕೊಳ್ಳಬೇಕಾಯಿತು. ಇದರಿಂದ ಪಾಠ ಕಲಿತಿದ್ದ ಚಕ್ರವರ್ತಿ ಈಗ ಮತ್ತೆ ಸಿಡಿದೇಳುವ ಸೂಚನೆ ನೀಡಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ. ಈ ವಿಚಾರದ ಬಗ್ಗೆ ಮೂವರೂ ಸೇರಿ ಚರ್ಚೆ ನಡೆಸಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಒಂದಾಗಿದ್ದಾರೆ. ನಮ್ಮನ್ನು ಬೇಕೇಂದೇ ಔಟ್​ ಮಾಡಿದ್ದಾರೆ ಎನ್ನುವ ಅಭಿಪ್ರಾಯವನ್ನು ಚಂದ್ರಚೂಡ್​ ಹೊರ ಹಾಕಿದರು. ಇದನ್ನು, ಪ್ರಶಾಂತ್​ ಕೂಡ ಒಪ್ಪಿಕೊಂಡರು. ಈ ವೇಳೆ ಮಾತನಾಡಿದ ಚಂದ್ರಚೂಡ್​, ನಾನು ಸೋಮವಾರದಿಂದ ಬದಲಾಗುತ್ತೇನೆ. ಹೊರಗೆ ಹೇಗಿದ್ದೆನೋ ಹಾಗೇ ಇರುತ್ತೇನೆ. ಏನಿದ್ದರೂ ಸ್ಟ್ರೇಟ್​ ಫಾರ್ವರ್ಡ್​ ಹಿಟ್​. ಮನೆಯಲ್ಲಿ ಕ್ರಾಂತಿ ಮಾಡುತ್ತೇನೆ ಎಂದು ಶಪಥ ಮಾಡಿದರು.

ಇದಕ್ಕೆ ಚಕ್ರವರ್ತಿ ಚಂದ್ರಚೂಡ್​ ಕೂಡ ಧ್ವನಿಗೂಡಿಸಿದರು. ಹೌದು ನಾನು ಕೂಡ ಹಾಗೇ. ಪಾಪ ಅನ್ನೋದಲ್ಲ ಇನ್ಮುಂದೆ ಇರಲ್ಲ. ಮೊದಲಿನ ಆಟಕ್ಕೆ ಮರಳುತ್ತೇನೆ ಎಂದರು. ಈ ಮೂಲಕ ಇಬ್ಬರೂ ಸೇರಿ ಮತ್ತೆ ಮನೆಯ ಶಾಂತಿ ಕದಡುವ ಸೂಚನೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಗುಂಪುಗಾರಿಕೆ ಮಾಡುತ್ತಾರೆ ಎಂಬುದು ಪ್ರಶಾಂತ್​-ಚಕ್ರವರ್ತಿ ಆರೋಪ. ಏಳನೇ ವಾರ ಈ ಆರೋಪ ಸ್ವಲ್ಪ ಕಡಿಮೆ ಆಗಿತ್ತು. ಈಗ ಮತ್ತೆ ಈ ಆರೋಪವನ್ನು ಇಬ್ಬರೂ ಮುಂದುವರಿಸಿದ್ದಾರೆ.

ಪ್ರಶಾಂತ್​-ಚಕ್ರವರ್ತಿ ಈಗಾಗಲೇ ಶಮಂತ್​ ಅವರನ್ನು ತಮ್ಮ ಪಾರ್ಟಿಗೆ ತೆಗೆದುಕೊಂಡಿದ್ದಾರೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿರುವ ಪ್ರಿಯಾಂಕಾ ಕೂಡ ಚಕ್ರವರ್ತಿ ಗುಂಪಿನ ಕಡೆ ವಾಲಿದ್ದಾರೆ. ಅವರ ನಡೆ ಮನೆಯಲ್ಲಿ ಅನೇಕರಿಗೆ ಬೇಸರ ತರಿಸುತ್ತಿದೆ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ