AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ
ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 18, 2021 | 4:47 PM

Share

ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಗೆ ಬಂದಾಗ ಎಲ್ಲರನ್ನೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ, ಕೆಲ ವಿಚಾರದಲ್ಲಿ ಕಿಚ್ಚ ಸುದೀಪ್​ ಅವರಿಂದ ಪಾಠ ಹೇಳಿಸಿಕೊಳ್ಳಬೇಕಾಯಿತು. ಇದರಿಂದ ಪಾಠ ಕಲಿತಿದ್ದ ಚಕ್ರವರ್ತಿ ಈಗ ಮತ್ತೆ ಸಿಡಿದೇಳುವ ಸೂಚನೆ ನೀಡಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ. ಈ ವಿಚಾರದ ಬಗ್ಗೆ ಮೂವರೂ ಸೇರಿ ಚರ್ಚೆ ನಡೆಸಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಒಂದಾಗಿದ್ದಾರೆ. ನಮ್ಮನ್ನು ಬೇಕೇಂದೇ ಔಟ್​ ಮಾಡಿದ್ದಾರೆ ಎನ್ನುವ ಅಭಿಪ್ರಾಯವನ್ನು ಚಂದ್ರಚೂಡ್​ ಹೊರ ಹಾಕಿದರು. ಇದನ್ನು, ಪ್ರಶಾಂತ್​ ಕೂಡ ಒಪ್ಪಿಕೊಂಡರು. ಈ ವೇಳೆ ಮಾತನಾಡಿದ ಚಂದ್ರಚೂಡ್​, ನಾನು ಸೋಮವಾರದಿಂದ ಬದಲಾಗುತ್ತೇನೆ. ಹೊರಗೆ ಹೇಗಿದ್ದೆನೋ ಹಾಗೇ ಇರುತ್ತೇನೆ. ಏನಿದ್ದರೂ ಸ್ಟ್ರೇಟ್​ ಫಾರ್ವರ್ಡ್​ ಹಿಟ್​. ಮನೆಯಲ್ಲಿ ಕ್ರಾಂತಿ ಮಾಡುತ್ತೇನೆ ಎಂದು ಶಪಥ ಮಾಡಿದರು.

ಇದಕ್ಕೆ ಚಕ್ರವರ್ತಿ ಚಂದ್ರಚೂಡ್​ ಕೂಡ ಧ್ವನಿಗೂಡಿಸಿದರು. ಹೌದು ನಾನು ಕೂಡ ಹಾಗೇ. ಪಾಪ ಅನ್ನೋದಲ್ಲ ಇನ್ಮುಂದೆ ಇರಲ್ಲ. ಮೊದಲಿನ ಆಟಕ್ಕೆ ಮರಳುತ್ತೇನೆ ಎಂದರು. ಈ ಮೂಲಕ ಇಬ್ಬರೂ ಸೇರಿ ಮತ್ತೆ ಮನೆಯ ಶಾಂತಿ ಕದಡುವ ಸೂಚನೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಗುಂಪುಗಾರಿಕೆ ಮಾಡುತ್ತಾರೆ ಎಂಬುದು ಪ್ರಶಾಂತ್​-ಚಕ್ರವರ್ತಿ ಆರೋಪ. ಏಳನೇ ವಾರ ಈ ಆರೋಪ ಸ್ವಲ್ಪ ಕಡಿಮೆ ಆಗಿತ್ತು. ಈಗ ಮತ್ತೆ ಈ ಆರೋಪವನ್ನು ಇಬ್ಬರೂ ಮುಂದುವರಿಸಿದ್ದಾರೆ.

ಪ್ರಶಾಂತ್​-ಚಕ್ರವರ್ತಿ ಈಗಾಗಲೇ ಶಮಂತ್​ ಅವರನ್ನು ತಮ್ಮ ಪಾರ್ಟಿಗೆ ತೆಗೆದುಕೊಂಡಿದ್ದಾರೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿರುವ ಪ್ರಿಯಾಂಕಾ ಕೂಡ ಚಕ್ರವರ್ತಿ ಗುಂಪಿನ ಕಡೆ ವಾಲಿದ್ದಾರೆ. ಅವರ ನಡೆ ಮನೆಯಲ್ಲಿ ಅನೇಕರಿಗೆ ಬೇಸರ ತರಿಸುತ್ತಿದೆ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​