AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ.

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ
ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 4:47 PM

Share

ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಗೆ ಬಂದಾಗ ಎಲ್ಲರನ್ನೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ, ಕೆಲ ವಿಚಾರದಲ್ಲಿ ಕಿಚ್ಚ ಸುದೀಪ್​ ಅವರಿಂದ ಪಾಠ ಹೇಳಿಸಿಕೊಳ್ಳಬೇಕಾಯಿತು. ಇದರಿಂದ ಪಾಠ ಕಲಿತಿದ್ದ ಚಕ್ರವರ್ತಿ ಈಗ ಮತ್ತೆ ಸಿಡಿದೇಳುವ ಸೂಚನೆ ನೀಡಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಪಾಸ್​ ಪಡೆಯೋಕೆ ಮನೆಯವರು ಗುಂಪು ಕಟ್ಟಿಕೊಂಡಿದ್ದರು ಎಂಬುದು ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಊಹೆ. ಈ ವಿಚಾರದ ಬಗ್ಗೆ ಮೂವರೂ ಸೇರಿ ಚರ್ಚೆ ನಡೆಸಿದ್ದಾರೆ.

ಗೋಲ್ಡನ್​ ಪಾಸ್​ ಪಡೆಯೋಕೆ ಒಂದಾಗಿದ್ದಾರೆ. ನಮ್ಮನ್ನು ಬೇಕೇಂದೇ ಔಟ್​ ಮಾಡಿದ್ದಾರೆ ಎನ್ನುವ ಅಭಿಪ್ರಾಯವನ್ನು ಚಂದ್ರಚೂಡ್​ ಹೊರ ಹಾಕಿದರು. ಇದನ್ನು, ಪ್ರಶಾಂತ್​ ಕೂಡ ಒಪ್ಪಿಕೊಂಡರು. ಈ ವೇಳೆ ಮಾತನಾಡಿದ ಚಂದ್ರಚೂಡ್​, ನಾನು ಸೋಮವಾರದಿಂದ ಬದಲಾಗುತ್ತೇನೆ. ಹೊರಗೆ ಹೇಗಿದ್ದೆನೋ ಹಾಗೇ ಇರುತ್ತೇನೆ. ಏನಿದ್ದರೂ ಸ್ಟ್ರೇಟ್​ ಫಾರ್ವರ್ಡ್​ ಹಿಟ್​. ಮನೆಯಲ್ಲಿ ಕ್ರಾಂತಿ ಮಾಡುತ್ತೇನೆ ಎಂದು ಶಪಥ ಮಾಡಿದರು.

ಇದಕ್ಕೆ ಚಕ್ರವರ್ತಿ ಚಂದ್ರಚೂಡ್​ ಕೂಡ ಧ್ವನಿಗೂಡಿಸಿದರು. ಹೌದು ನಾನು ಕೂಡ ಹಾಗೇ. ಪಾಪ ಅನ್ನೋದಲ್ಲ ಇನ್ಮುಂದೆ ಇರಲ್ಲ. ಮೊದಲಿನ ಆಟಕ್ಕೆ ಮರಳುತ್ತೇನೆ ಎಂದರು. ಈ ಮೂಲಕ ಇಬ್ಬರೂ ಸೇರಿ ಮತ್ತೆ ಮನೆಯ ಶಾಂತಿ ಕದಡುವ ಸೂಚನೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಗುಂಪುಗಾರಿಕೆ ಮಾಡುತ್ತಾರೆ ಎಂಬುದು ಪ್ರಶಾಂತ್​-ಚಕ್ರವರ್ತಿ ಆರೋಪ. ಏಳನೇ ವಾರ ಈ ಆರೋಪ ಸ್ವಲ್ಪ ಕಡಿಮೆ ಆಗಿತ್ತು. ಈಗ ಮತ್ತೆ ಈ ಆರೋಪವನ್ನು ಇಬ್ಬರೂ ಮುಂದುವರಿಸಿದ್ದಾರೆ.

ಪ್ರಶಾಂತ್​-ಚಕ್ರವರ್ತಿ ಈಗಾಗಲೇ ಶಮಂತ್​ ಅವರನ್ನು ತಮ್ಮ ಪಾರ್ಟಿಗೆ ತೆಗೆದುಕೊಂಡಿದ್ದಾರೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿರುವ ಪ್ರಿಯಾಂಕಾ ಕೂಡ ಚಕ್ರವರ್ತಿ ಗುಂಪಿನ ಕಡೆ ವಾಲಿದ್ದಾರೆ. ಅವರ ನಡೆ ಮನೆಯಲ್ಲಿ ಅನೇಕರಿಗೆ ಬೇಸರ ತರಿಸುತ್ತಿದೆ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ