AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಮೊದಲಿನಿಂದಲೂ ಪರಿಚಯವಿತ್ತು. ಹೀಗಾಗಿ, ಇಬ್ಬರೂ ಬಹುಬೇಗ ಆಪ್ತರಾಗಿಬಿಟ್ಟರು.

ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 8:50 PM

Share

ಬಿಗ್​ ಬಾಸ್​ ಮನೆಯಲ್ಲಿ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ಒಗ್ಗಟ್ಟು ಬಂದಿದೆ. ಚಕ್ರವರ್ತಿ ಚಂದ್ರಚೂಡ್​ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟ ನಂತರವಂತೂ ಈ ಒಗ್ಗಟ್ಟು ಮತ್ತಷ್ಟು ಬಲಗೊಂಡಿದೆ. ವೀಕೆಂಡ್​ನಲ್ಲಿ ಈ ಬಗ್ಗೆ ಕಿಚ್ಚ ಸುದೀಪ್​ ಕೂಡ ಹೇಳಿಕೊಂಡಿದ್ದರು. ಈಗ ಒಡೆದು ಆಳೋಕೆ ಮನೆಯಲ್ಲಿ ಪ್ಲ್ಯಾನ್​ ಒಂದು ಸಿದ್ಧವಾಗಿದೆ. ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರೇ ಈ ಪ್ಲ್ಯಾನ್​ನ ಕಿಂಗ್​ಪಿನ್​ಗಳು. ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಮೊದಲಿನಿಂದಲೂ ಪರಿಚಯವಿತ್ತು. ಹೀಗಾಗಿ, ಇಬ್ಬರೂ ಬಹುಬೇಗ ಆಪ್ತರಾಗಿಬಿಟ್ಟರು. ಅಷ್ಟೇ ಅಲ್ಲ ಮನೆಯನ್ನು ಒಡೆದು ಆಳೋಕೆ ಇಬ್ಬರೂ ಮಾತುಕತೆ ನಡೆಸಿದ್ದರು. ಈಗ ಇದು ಜಾರಿಗೆ ಬಂದಂತೆ ಕಾಣುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳುವುದು ಹೇಗೆ? ಯಾರ ವೀಕ್​ನೆಸ್​ ಏನು? ಏನು ಮಾಡಿದರೆ ಯಾರು ನಮ್ಮ ಟೀಂಗೆ ಬರುತ್ತಾರೆ ಎನ್ನುವ ಬಗ್ಗೆ ಪ್ರಶಾಂತ್​-ಚಕ್ರವರ್ತಿ ಮಾತುಕತೆ ನಡೆಸಿದ್ದಾರೆ.

ಮಂಜು ಬಗ್ಗೆ ಚಂದ್ರಚೂಡ್ ಮೊದಲಿನಿಂದಲೂ ಅಸಮಾಧಾನ ಹೊಂದಿದ್ದಾರೆ. ಇತ್ತೀಚೆಗೆ ಇಬ್ಬರ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಹೀಗಾಗಿ, ಮಂಜು ಬುದ್ಧಿ ತುಂಬಾನೇ ಕ್ರೂರವಾಗಿದೆ ಎನ್ನುವ ಅಭಿಪ್ರಾಯವನ್ನು ಚಂದ್ರಚೂಡ್​ ವ್ಯಕ್ತಪಡಿಸಿದ್ದಾರೆ. ರಾಜೀವ್​ ವಾಟರ್​​ ಬಾಯ್​​, ಶಕ್ತಿ ಯಾರಿಗೆ ಹೆಚ್ಚಿದೆಯೋ ಅವರ ಕಡೆ ವಾಲುವ ಗುಣ ಅರವಿಂದ್​​ನದ್ದು ಎಂದಿದ್ದಾರೆ ಅವರು.

ರಘು, ಶಮಂತ್​, ವಿಶ್ವ ಅಂತರ್​ಪಿಶಾಚಿಗಳು ಎಂದು ಚಂದ್ರಚೂಡ್​ ಕರೆದಿದ್ದಾರೆ. ಈ ಮೂವರು ಯಾವುದೇ ಟೀಂಗೆ ಸೇರಿದವರಲ್ಲ, ಎಲ್ಲರ ಜತೆಯೂ ಬರೆಯುತ್ತಾರೆ. ಹೀಗಾಗಿ, ಅವರು ಈ ಅಭಿಪ್ರಾಯ ಹೊರ ಹಾಕಿದ್ದಾರೆ. ನಾವಿಬ್ಬರೂ ರಾಜ ಕೂತ ಹಾಗೆ ಕೂತು, ಇದನ್ನು ಕೆಡಿಸಲೇಬೇಕು. ಅವರ ಟೀಂ ನಿಂದ ಒಂದು ವಿಕೆಟ್​ ಆಚೆ ಹೋದರೆ ಸಾಕು ಎಂದಿದ್ದಾರೆ ಚಂದ್ರಚೂಡ್​. ಈ ಮೂಲಕ ಮನೆಯಲ್ಲಿ ಒಡೆದು ಆಳೋಕೆ ಪ್ಲ್ಯಾನ್​ ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

 ‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ