AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಮೊದಲಿನಿಂದಲೂ ಪರಿಚಯವಿತ್ತು. ಹೀಗಾಗಿ, ಇಬ್ಬರೂ ಬಹುಬೇಗ ಆಪ್ತರಾಗಿಬಿಟ್ಟರು.

ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 8:50 PM

Share

ಬಿಗ್​ ಬಾಸ್​ ಮನೆಯಲ್ಲಿ ಗೊತ್ತಿದ್ದೋ ಗೊತ್ತಿಲ್ಲದೆಯೋ ಒಂದು ಒಗ್ಗಟ್ಟು ಬಂದಿದೆ. ಚಕ್ರವರ್ತಿ ಚಂದ್ರಚೂಡ್​ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟ ನಂತರವಂತೂ ಈ ಒಗ್ಗಟ್ಟು ಮತ್ತಷ್ಟು ಬಲಗೊಂಡಿದೆ. ವೀಕೆಂಡ್​ನಲ್ಲಿ ಈ ಬಗ್ಗೆ ಕಿಚ್ಚ ಸುದೀಪ್​ ಕೂಡ ಹೇಳಿಕೊಂಡಿದ್ದರು. ಈಗ ಒಡೆದು ಆಳೋಕೆ ಮನೆಯಲ್ಲಿ ಪ್ಲ್ಯಾನ್​ ಒಂದು ಸಿದ್ಧವಾಗಿದೆ. ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರೇ ಈ ಪ್ಲ್ಯಾನ್​ನ ಕಿಂಗ್​ಪಿನ್​ಗಳು. ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಮೊದಲಿನಿಂದಲೂ ಪರಿಚಯವಿತ್ತು. ಹೀಗಾಗಿ, ಇಬ್ಬರೂ ಬಹುಬೇಗ ಆಪ್ತರಾಗಿಬಿಟ್ಟರು. ಅಷ್ಟೇ ಅಲ್ಲ ಮನೆಯನ್ನು ಒಡೆದು ಆಳೋಕೆ ಇಬ್ಬರೂ ಮಾತುಕತೆ ನಡೆಸಿದ್ದರು. ಈಗ ಇದು ಜಾರಿಗೆ ಬಂದಂತೆ ಕಾಣುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳುವುದು ಹೇಗೆ? ಯಾರ ವೀಕ್​ನೆಸ್​ ಏನು? ಏನು ಮಾಡಿದರೆ ಯಾರು ನಮ್ಮ ಟೀಂಗೆ ಬರುತ್ತಾರೆ ಎನ್ನುವ ಬಗ್ಗೆ ಪ್ರಶಾಂತ್​-ಚಕ್ರವರ್ತಿ ಮಾತುಕತೆ ನಡೆಸಿದ್ದಾರೆ.

ಮಂಜು ಬಗ್ಗೆ ಚಂದ್ರಚೂಡ್ ಮೊದಲಿನಿಂದಲೂ ಅಸಮಾಧಾನ ಹೊಂದಿದ್ದಾರೆ. ಇತ್ತೀಚೆಗೆ ಇಬ್ಬರ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಹೀಗಾಗಿ, ಮಂಜು ಬುದ್ಧಿ ತುಂಬಾನೇ ಕ್ರೂರವಾಗಿದೆ ಎನ್ನುವ ಅಭಿಪ್ರಾಯವನ್ನು ಚಂದ್ರಚೂಡ್​ ವ್ಯಕ್ತಪಡಿಸಿದ್ದಾರೆ. ರಾಜೀವ್​ ವಾಟರ್​​ ಬಾಯ್​​, ಶಕ್ತಿ ಯಾರಿಗೆ ಹೆಚ್ಚಿದೆಯೋ ಅವರ ಕಡೆ ವಾಲುವ ಗುಣ ಅರವಿಂದ್​​ನದ್ದು ಎಂದಿದ್ದಾರೆ ಅವರು.

ರಘು, ಶಮಂತ್​, ವಿಶ್ವ ಅಂತರ್​ಪಿಶಾಚಿಗಳು ಎಂದು ಚಂದ್ರಚೂಡ್​ ಕರೆದಿದ್ದಾರೆ. ಈ ಮೂವರು ಯಾವುದೇ ಟೀಂಗೆ ಸೇರಿದವರಲ್ಲ, ಎಲ್ಲರ ಜತೆಯೂ ಬರೆಯುತ್ತಾರೆ. ಹೀಗಾಗಿ, ಅವರು ಈ ಅಭಿಪ್ರಾಯ ಹೊರ ಹಾಕಿದ್ದಾರೆ. ನಾವಿಬ್ಬರೂ ರಾಜ ಕೂತ ಹಾಗೆ ಕೂತು, ಇದನ್ನು ಕೆಡಿಸಲೇಬೇಕು. ಅವರ ಟೀಂ ನಿಂದ ಒಂದು ವಿಕೆಟ್​ ಆಚೆ ಹೋದರೆ ಸಾಕು ಎಂದಿದ್ದಾರೆ ಚಂದ್ರಚೂಡ್​. ಈ ಮೂಲಕ ಮನೆಯಲ್ಲಿ ಒಡೆದು ಆಳೋಕೆ ಪ್ಲ್ಯಾನ್​ ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

 ‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ