AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ

ಮೊದಲ ಇನ್ನಿಂಗ್ಸ್​ನಲ್ಲಿ ಮದುವೆ ವಿಚಾರ ಮಾತನಾಡಿದ್ದಕ್ಕೆ ವೈಷ್ಣವಿ ತಾಯಿ ಸಿಟ್ಟಾಗಿದ್ದರು. ಈ ಕಾರಣಕ್ಕೆ ವೈಷ್ಣವಿ ಮದುವೆ ವಿಚಾರದಲ್ಲಿ ಸುಮ್ಮನಿದ್ದಾರೆ. ಆ ಬಗ್ಗೆ ಅವರು ಹೆಚ್ಚು ಮಾತನಾಡುತ್ತಿಲ್ಲ.

ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ
ಚಕ್ರವರ್ತಿ ಚಂದ್ರಚೂಡ್​, ವೈಷ್ಣವಿ
TV9 Web
| Edited By: |

Updated on: Jul 06, 2021 | 3:20 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನಲ್ಲಿ ವೈಷ್ಣವಿ ನಿತ್ಯ ಒಮ್ಮೆಯಾದರೂ ಮದುವೆ ವಿಚಾರ ಮಾತನಾಡುತ್ತಿದ್ದರು. ಅವರು ಹೈಲೈಟ್​ ಆಗೋಕೆ ಇದು ಕೂಡ ಪ್ರಮುಖ ಕಾರಣವಾಗಿತ್ತು. ಪರಿಣಾಮ ಅವರಿಗೆ ಸಾಕಷ್ಟು ಮದುವೆ ಪ್ರಪೋಸಲ್​ಗಳು ಬಂದವು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಅವರು ಮದುವೆ ಬಗ್ಗೆ ಮಾತನಾಡಿದ್ದು ತುಂಬಾನೇ ಕಡಿಮೆ. ಆದರೆ, ಈಗ ಅವರ ಬಾಯಿಂದ ಮತ್ತೆ ಮದುವೆ ವಿಚಾರ ಬಂದಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಮದುವೆ ವಿಚಾರ ಮಾತನಾಡಿದ್ದಕ್ಕೆ ವೈಷ್ಣವಿ ತಾಯಿ ಸಿಟ್ಟಾಗಿದ್ದರು. ಕುಟುಂಬದವರಿಗೆ ಜವಾಬ್ದಾರಿ ಇಲ್ಲ ಎಂದು ಜನರು ಭಾವಿಸುತ್ತಾರೆ ಎಂಬುದಾಗಿ ವೈಷ್ಣವಿ ತಾಯಿ ಹೇಳಿದ್ದರು. ಈ ಕಾರಣಕ್ಕೆ ವೈಷ್ಣವಿ ಮದುವೆ ವಿಚಾರದಲ್ಲಿ ಸುಮ್ಮನಿದ್ದಾರೆ. ಆ ಬಗ್ಗೆ ಅವರು ಹೆಚ್ಚು ಮಾತನಾಡುತ್ತಿಲ್ಲ.

ಈಗ ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಮದುವೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಚಕ್ರವರ್ತಿ ಚಂದ್ರಚೂಡ್​ ಅವರು ವೈಷ್ಣವಿ ಮದುವೆ ವಿಚಾರ ತೆಗೆದಿದ್ದಾರೆ. ‘ನಿಮ್ಮಲ್ಲೊಂದು ದೈವಿಕ ಶಕ್ತಿ ಇದೆ. ಯಾಕೆ ಕೌಂಟುಬಿಕ ಜಂಜಾಟಕ್ಕೆ ಬೀಳುತ್ತಿದ್ದೀರೋ ಗೊತ್ತಿಲ್ಲ. ಈಗಲೂ ದೊಡ್ಡವನಾಗಿ ಹೇಳ್ತಾ ಇದೀನಿ. ಮದುವೆ ಆಗಬೇಡಿ’ ಎಂದು ವೈಷ್ಣವಿಗೆ ಚಕ್ರವರ್ತಿ ಕಿವಿಮಾತು ಹೇಳಿದರು.

‘ಜೀವನ ಅಂದಮೇಲೆ ಎಲ್ಲವನ್ನೂ ನೋಡಬೇಕು. ನಾನು ಸಾಯುವಾಗ ಜೀವನದಲ್ಲಿ ಯಾವುದನ್ನೂ ಮಿಸ್ ಮಾಡಿಕೊಂಡೆ ಎಂದು ನನಗೆ ಅನ್ನಿಸಬಾರದು. ಹೀಗಾಗಿ ಮದುವೆ ಆಗಬೇಕು’ ಎಂದು ವೈಷ್ಣವಿ ತಮ್ಮ ವಾದ ಮುಂದಿಟ್ಟರು.

ವೈಷ್ಣವಿ ಮದುವೆ ಆದಮೇಲೆ ಹುಡುಗನಿಗೆ ಮೋಸ ಮಾಡುವುದಿಲ್ಲ ಎಂದಿದ್ದಾರೆ. ‘ನಾನು ವಿವಾಹ ಅಂತ ಆದ್ಮೇಲೆ ಚೀಟ್​ ಮಾಡುವುದಿಲ್ಲ. ಅವನ ಜೀವನ ಚೆನ್ನಾಗಿರಬೇಕು’ ಎಂದು ವೈಷ್ಣವಿ ತಮ್ಮ ಮನದಾಳದ ಮಾತನ್ನು ಹೇಳಿದರು. ಹಾಗಾದರೆ ಮನೆಯಲ್ಲಿ ಗಂಡು ನೋಡ್ತಾ ಇದಾರಾ ಎನ್ನುವ ಪ್ರಶ್ನೆಯನ್ನು ಚಕ್ರವರ್ತಿ ಕೇಳಿದರು. ‘ಯಾಕೆ ಸರ್​ ನನ್ನ ಬಾಯಿಂದ ಏನೇನೋ ಬರ್ಸ್ತೀರಾ? ನಾನು ಇನ್ನು ಆ ಬಗ್ಗೆ ಮಾತನಾಡುವುದಿಲ್ಲ’ ಎಂದು ವೈಷ್ಣವಿ ಶಪಥ ಮಾಡಿದರು.

ಇದನ್ನೂ ಓದಿ:

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

‘ಅಗ್ನಿಸಾಕ್ಷಿ’ ಶೂಟಿಂಗ್ ವೇಳೆ ವೈಷ್ಣವಿ ಕೈಯಲ್ಲಿ ಯಾವಾಗಲೂ ಇರ್ತಿತ್ತು ರೇಷ್ಮೆ ಸೀರೆ; ಸುದೀಪ್ ಬಿಚ್ಚಿಟ್ಟ ಅಚ್ಚರಿಯ ವಿಚಾರ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ