AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ರವರ್ತಿ ತೆಗೆದುಕೊಂಡ ಆ ಒಂದು ನಿರ್ಧಾರ ಅವರ ಬಿಗ್​ ಬಾಸ್​ ಜರ್ನಿಯನ್ನೇ ಬದಲಾಯಿಸಿತು

ಪ್ರಶಾಂತ್ ಸಂಬರಗಿಗೆ ಮೋಸವಾಗಿದೆ. ಇದಕ್ಕಾಗಿ ತಾವು ಕ್ಯಾಪ್ಟನ್ಸಿ ಟಾಸ್ಕ್ ಆಡುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು ಚಕ್ರವರ್ತಿ.

ಚಕ್ರವರ್ತಿ ತೆಗೆದುಕೊಂಡ ಆ ಒಂದು ನಿರ್ಧಾರ ಅವರ ಬಿಗ್​ ಬಾಸ್​ ಜರ್ನಿಯನ್ನೇ ಬದಲಾಯಿಸಿತು
ಚಕ್ರವರ್ತಿ ಹಾಗೂ ಪ್ರಶಾಂ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: May 02, 2021 | 3:26 PM

Share

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ತೆಗೆದುಕೊಳ್ಳುವ ಒಂದು ನಿರ್ಧಾರ ಅವರ ಬದುಕನ್ನು ಮಾತ್ರ ಅಲ್ಲ ಉಳಿದು ಸ್ಪರ್ಧಿಗಳ ಬದುಕನ್ನೂ ಬದಲಾಯಿಸಿ ಬಿಡುತ್ತದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ವೈಜಯಂತಿ  ಅಡಿಗ ಅವರು ಶಮಂತ್ ಬ್ರೋ ಗೌಡ ಅವರನ್ನು ಉಳಿಸಿ ತಾವು ಮನೆಯಿಂದ ಹೊರ ಹೋಗಿದ್ದರು. ಈ ಮೂಲಕ ಶಮಂತ್ ಬದುಕು ಬದಲಾಗಿತ್ತು. ಈಗ ಚಕ್ರವರ್ತಿ ತೆಗೆದುಕೊಂಡು ಒಂದು ನಿರ್ಧಾರದಿಂದ ಬಿಗ್ ಬಾಸ್ ಮನೆಯಲ್ಲಿ ಅವರ ಅದೃಷ್ಟವೇ ಬದಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಮಂಜು ಪಾವಗಡ, ಅರವಿಂದ್ ಕೆ.ಪಿ. ಹಾಗೂ ಚಕ್ರವರ್ತಿ ಚಂದ್ರಚೂಡ್ ಆಯ್ಕೆ ಆಗಿದ್ದರು. ಆದರೆ, ಈ ಆಟದಲ್ಲಿ ಪ್ರಶಾಂತ್ ಸಂಬರಗಿಗೆ ಮೋಸವಾಗಿದೆ. ಇದಕ್ಕಾಗಿ ತಾವು ಕ್ಯಾಪ್ಟನ್ಸಿ ಟಾಸ್ಕ್ ಆಡುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು ಚಕ್ರವರ್ತಿ. ಕೊನೆಯ ಕ್ಷಣದವರೆಗೂ ಆಟದಿಂದ ಹಿಂದೆ ಸರಿಯುವ ಆಲೋಚನೆಯಲ್ಲಿದ್ದ ಚಕ್ರವರ್ತಿ ಕೊನೆಯ ಕ್ಷಣದಲ್ಲಿ ಮನಸ್ಸು ಬದಲಾಯಿಸಿ ಅದೃಷ್ಟ ಪರೀಕ್ಷೆ ಮುಂದಾಗಿದ್ದರು.

ಈ ವಾರ ಟಾಸ್ಕ್ ಭಿನ್ನವಾಗಿತ್ತು. ವೋಟಿಂಗ್ ರೀತಿಯಲ್ಲಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಮೂರು ಕ್ಯಾಪ್ಟನ್ಸಿ ಅಭ್ಯರ್ಥಿಗೆ ತಲಾ ಮೂರು ಮೂರು ಮತಗಳು ಬಿದ್ದು ಟೈ ಆಗಿತ್ತು. ಕೊನೆಗೆ ಡಿಸ್ಕಶನ್ ಮೂಲಕ ಕ್ಯಾಪ್ಟನ್ಸಿ ಅಭ್ಯರ್ಥಿ ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶಿಸಿದರು.

ಮಂಜು, ಅರವಿಂದ್ ಹಾಗೂ ಚಕ್ರವರ್ತಿ ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬಂದರು. ಚಕ್ರವರ್ತಿ ಅವರನ್ನು ಕ್ಯಾಪ್ಟನ್ ಮಾಡಲು ನಿರ್ಧರಿಸಲಾಯಿತು. ಈ ಮೂಲಕ 10ನೇ ವಾರಕ್ಕೆ ಅವರು ಕ್ಯಾಪ್ಟನ್ ಆದರು. ಈ ವಾರದ ಎಲಿಮಿನೇಷ್​ನಿಂದ ಅವರು ಬಚಾವ್ ಆದಲ್ಲಿ ಮುಂದಿನ ವಾರದ ನಾಮಿನೇಷನ್​ಗೆ ಅವರ ಹೆಸರು ತೆಗೆದುಕೊಳ್ಳುವಂತಿಲ್ಲ.

ಈ ಮೂಲಕ ಅವರು ಎರಡು ವಾರ ಮನೆಯಲ್ಲಿ ಉಳಿದುಕೊಳ್ಳಬಹುದು. ಈ ಮೂಲಕ ತಮ್ಮ ಸಾಮರ್ಥ್ಯವನ್ನು ಅವರು ಹೊರ ಜಗತ್ತಿಗೆ ತೋರಿಸೋಕೆ ಅವಕಾಶ ಸಿಗಲಿದೆ. ಹೀಗಾಗಿ, ಅವರು ಕೊನೇ ಕ್ಷಣದಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಆಡೋಕೆ ತೆಗೆದುಕೊಂಡ ನಿರ್ಧಾರ ಅವರ ಬಿಗ್ ಬಾಸ್ ಜರ್ನಿಯಲ್ಲಿ ಸಾಕಷ್ಟು ಬದಲಾವಣೆ ತರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?