AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ಜೈಲು ಸೇರಿದ ನಂತರದಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಗಾಟ ನಡೆಸಿದ್ದಾರೆ. ಐದು ಸ್ಪರ್ಧಿಗಳು ನನಗೆ ಕಳಪೆ ಎಂದು ನೀಡಿದ್ದಾರೆ. ಇದನ್ನು ನಾನು ಒಪ್ಪೋದಿಲ್ಲ ಎಂದು ಜೋರು ಧ್ವನಿಯಲ್ಲಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?
ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 17, 2021 | 3:16 PM

Share

ಕನ್ನಡ  ಬಿಗ್​ ಬಾಸ್​ ಸೀಸನ್​ 8ರಲ್ಲಿ ಚಕ್ರವರ್ತಿ ಚಂದ್ರಚೂಡ್​ ನಡೆ ಯಾರಿಗೂ ಇಷ್ಟವಾಗುತ್ತಿಲ್ಲ. ಎರಡನೇ ಇನ್ನಿಂಗ್ಸ್​ನಲ್ಲಿ ಅವರು ನಡೆದುಕೊಳ್ಳುತ್ತಿರುವ ರೀತಿ ಚಕ್ರವರ್ತಿ ಆಪ್ತರು ಎನಿಸಿಕೊಂಡಿರುವ ಪ್ರಶಾಂತ್​ ಸಂಬರಗಿ ಹಾಗೂ ಶಮಂತ್​ ಬ್ರೋ ಗೌಡಗೆ ಬೇಸರ ತರಿಸಿದೆ. ಹೀಗಾಗಿ, ಮನೆಯ ಎಲ್ಲಾ ಸದಸ್ಯರು ಅವರಿಂದ ದೂರವಾಗುತ್ತಿದ್ದಾರೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಕಪ್ಪು ಬಾವುಟ ಹಾರಿದೆ.

ಈ ವಾರದ ಟಾಸ್ಕ್ ನಡೆಯುವಾಗ ದಿವ್ಯಾ ಉರುಡುಗ ತೀವ್ರವಾಗಿ ಗಾಯಗೊಂಡಿದ್ದರು. ಓಡಿ ಬರುತ್ತಿದ್ದ ಅವರನ್ನು ಬೇರೆಡೆ ಕಳುಹಿಸುವ ಪ್ರಯತ್ನದಲ್ಲಿ ಚಕ್ರವರ್ತಿ ಚಂದ್ರಚೂಡ್ ತಪ್ಪೊಂದನ್ನು ಮಾಡಿದ್ದರು. ದಿವ್ಯಾ ಅವರನ್ನು ತಡೆಯೋಕೆ ಹೋಗಿದ್ದು ತಪ್ಪಾಗಿತ್ತು. ದಿವ್ಯಾ ಉರುಡುಗ ಕೈ ಗಾಜಿಗೆ ತಾಕಿ ರಕ್ತ ಬಂದಿತ್ತು. ಈ ವಿಚಾರದ ಬಗ್ಗೆ ಮನೆಯ ಸದಸ್ಯರಿಗೆ ಬೇಸರ ಇದೆ. ಇದನ್ನು, ಕಳಪೆ ಪಟ್ಟ ನೀಡುವ ಸಂದರ್ಭದಲ್ಲಿ ಸ್ಪರ್ಧಿಗಳು ಹೊರ ಹಾಕಿದ್ದಾರೆ. ಆದರೆ, ಇದನ್ನು ಅರಗಿಸಿಕೊಳ್ಳೋಕೆ ಚಕ್ರವರ್ತಿಗೆ ಸಾಧ್ಯವಾಗಲೇ ಇಲ್ಲ.

ಜೈಲು ಸೇರಿದ ನಂತರದಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಗಾಟ ನಡೆಸಿದ್ದಾರೆ. ಐದು ಸ್ಪರ್ಧಿಗಳು ನನಗೆ ಕಳಪೆ ಎಂದು ನೀಡಿದ್ದಾರೆ. ಇದನ್ನು ನಾನು ಒಪ್ಪೋದಿಲ್ಲ ಎಂದು ಜೋರು ಧ್ವನಿಯಲ್ಲಿ ಮಾತನಾಡಿದ್ದಾರೆ. ದೊಡ್ಡಾಗಿ ಹಾಡಿದ್ದಾರೆ. ಇದು ಎಲ್ಲಾ ಸ್ಪರ್ಧಿಗಳಿಗೆ ಕಿರಿಕಿರಿ ಉಂಟು ಮಾಡಿದೆ.

ಬಿಗ್​ ಬಾಸ್ ಮನೆಯಲ್ಲಿ ಸಿಕ್ಕ ಕಪ್ಪು ಬಣ್ಣದ ಕವರ್​ ಅನ್ನು ಜೈಲಿನ ಕಂಬಿಗೆ ಕಟ್ಟಿದ್ದಾರೆ. ‘ಮನೆಯ ಸ್ಪರ್ಧಿಗಳ ವಿರುದ್ಧ ನಾನು ಪ್ರತಿಭಟನೆ ಮಾಡುತ್ತಿದ್ದೇನೆ. ಇದುವೇ ಪ್ರತಿಭಟನೆಯ ಬಾವುಟ. ನಿಜವಾದ ಕಳಪೆ, ದಲ್ಲಾಳಿಗಳ ವಿರುದ್ಧ ನನ್ನ ಪ್ರತಿಭಟನೆ. ಕಪ್ಪು ಬಾವುಟ ನನ್ನ ಹೋರಾಟದ ಪ್ರತೀಕ’ ಎಂದಿದ್ದಾರೆ ಚಕ್ರವರ್ತಿ.

ಪ್ರತಿ ಬಾರಿ ಕಳಪೆ ನೀಡಿದಾಗಲೂ ಆ ಸ್ಪರ್ಧಿ ಅದನ್ನು ಒಪ್ಪಿಕೊಂಡು ಜೈಲಿಗೆ ಹೋಗಿದ್ದಾರೆ. ‘ದಿವ್ಯಾ ಕೈಗೆ ಗಾಯ ಆಗೋಕೆ ನಾನೇ ಕಾರಣ. ಹೀಗಾಗಿ, ನಾನೇ ಜೈಲಿಗೆ ಹೋಗುತ್ತೇನೆ’ ಎಂದು ಚಕ್ರವರ್ತಿ ಅವರೇ ಬಾಯ್ಬಿಟ್ಟು ಹೇಳಿದ್ದರು. ಈಗ ಕಳಪೆ ಎನ್ನುವ ಪಟ್ಟ ನೀಡಿದ ನಂತರದಲ್ಲಿ ಅವರು ಈ ರೀತಿ ಆಡುತ್ತಿದ್ದಾರೆ. ಹೀಗಾಗಿ, ಚಕ್ರವರ್ತಿ ಪರ ಯಾರೂ ನಿಲ್ಲುತ್ತಿಲ್ಲ. ಬಿಗ್ ಬಾಸ್ ಮನೆಯಲ್ಲಿ ಅವರು ಏಕಾಂಗಿ ಆಗಿರೋದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​

ಕನ್ನಡ ಬಿಗ್​ ಬಾಸ್​ನ ಈ ವಾರದ ಎಲಿಮಿನೇಷನ್​ನಲ್ಲಿ ಪ್ರಮುಖ ಕ್ಯಾಂಡಿಡೇಟ್​ ಔಟ್​?

ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ