AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಪ್ರಿಯಾಂಕಾ-ಚಕ್ರವರ್ತಿ ಜಗಳದಲ್ಲಿ ಅತ್ತಿದ್ದು ಶಮಂತ್​ ಬ್ರೋ ಗೌಡ

BBK 8: ಶಮಂತ್​ಗೆ ಪ್ರಿಯಾಂಕಾ ಊಟ ಮಾಡಿಸಿದ್ದನ್ನು ಚಕ್ರವರ್ತಿ ವಿರೋಧಿಸಿದ್ದರು. ಅಲ್ಲದೆ ಎಲ್ಲರ ಎದುರಲ್ಲಿ ಈ ವಿಚಾರ ಇಟ್ಟುಕೊಂಡು ಹಂಗಿಸಿದ್ದರು. ಇದು ಪ್ರಿಯಾಂಕಾಗೆ ತೀವ್ರ ಬೇಸರ ಉಂಟು ಮಾಡಿದೆ.

Bigg Boss Kannada: ಪ್ರಿಯಾಂಕಾ-ಚಕ್ರವರ್ತಿ ಜಗಳದಲ್ಲಿ ಅತ್ತಿದ್ದು ಶಮಂತ್​ ಬ್ರೋ ಗೌಡ
ಬಿಗ್​ಬಾಸ್​ ಸ್ಪರ್ಧಿ ಶಮಂತ್​
TV9 Web
| Edited By: |

Updated on: Jul 05, 2021 | 9:40 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಪ್ರಿಯಾಂಕಾ ತಿಮ್ಮೇಶ್​ ಅವರು ಶಮಂತ್​ ಬ್ರೋ ಗೌಡಗೆ ಊಟ ಮಾಡಿಸಿದ್ದರು. ಈ ಬೆಳವಣಿಗೆ ನಡೆದ ನಂತರ ಚಕ್ರವರ್ತಿ ಚಂದ್ರಚೂಡ್​ ತುಂಬಾನೇ ಹೊಟ್ಟೆಕಿಚ್ಚು ಪಟ್ಟುಕೊಂಡಂತೆ ಕಂಡುಬಂತು. ಚಕ್ರವರ್ತಿ ​ ನಡೆದುಕೊಂಡ ರೀತಿಗೆ ಪ್ರಿಯಾಂಕಾ ತಿಮ್ಮೇಶ್​ ತುಂಬಾನೇ ಬೇಸರಗೊಂಡಿದ್ದಾರೆ. ಇನ್ನು, ಇವರಿಬ್ಬರ ಜಗಳದಲ್ಲಿ ಶಮಂತ್​ ಬ್ರೋ ಗೌಡ ಅತ್ತಿದ್ದಾರೆ!

ಶಮಂತ್​ಗೆ ಪ್ರಿಯಾಂಕಾ ಊಟ ಮಾಡಿಸಿದ್ದನ್ನು ಚಕ್ರವರ್ತಿ ವಿರೋಧಿಸಿದ್ದರು. ಅಲ್ಲದೆ ಎಲ್ಲರ ಎದುರಲ್ಲಿ ಈ ವಿಚಾರ ಇಟ್ಟುಕೊಂಡು ಹಂಗಿಸಿದ್ದರು. ಇದು ಪ್ರಿಯಾಂಕಾಗೆ ತೀವ್ರ ಬೇಸರ ಉಂಟು ಮಾಡಿದೆ. ಈ ವಿಚಾರವನ್ನು ಸುದೀಪ್​ ಎದುರು ಹೇಳಿಕೊಂಡಿದ್ದರು. ನಂತರ ಮನೆಯಲ್ಲಿ ಈ ವಿಚಾರದ ಬಗ್ಗೆ ಪ್ರಿಯಾಂಕಾ ಹಾಗೂ ಚಕ್ರವರ್ತಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಸಿದ್ದಾರೆ.

‘ನಾನು ಏನಾದರೂ ಮಾಡುತ್ತೇನೆ. ನನ್ನ ಇಷ್ಟದಂತೆ ನಡೆದುಕೊಳ್ಳುತ್ತೇನೆ. ನನಗೆ ಹೇಗೆ ನಡೆದುಕೊಳ್ಳಬೇಕು ಎಂದು ಅವರು ಹೇಳೋದು ಬೇಡ. ಮನೆಯ ಹೊರಗೆ ನನಗೆ ಆ್ಯಟಿಟ್ಯೂಡ್ ಎಂದು ಚಕ್ರವರ್ತಿ ಬಿಂಬಿಸಿದ್ದಾರೆ. ಮನೆಯಲ್ಲಿ ಬಂದು ಈಗ ಈ ರೀತಿ ಮಾತನಾಡುತ್ತಿದ್ದಾರೆ’ ಎಂದು ಪ್ರಿಯಾಂಕಾ ಕಣ್ಣೀರು ಹಾಕಿದ್ದಾರೆ.

‘ನನ್ನ ಬಗ್ಗೆ ನಿಮಗೆ ಮಾತನಾಡೋಕೆ ಹಕ್ಕು ಕೊಟ್ಟವರು ಯಾರು? ಈ ರೀತಿ ಮಾತನಾಡಿದರೆ ಜನರು ನನ್ನ ಬಗ್ಗೆ ಏನಂದುಕೊಳ್ಳುತ್ತಾರೆ ಅನ್ನೋದನ್ನು ಯೋಚಿಸಿದ್ದೀರಾ ಎಂದು ಚಕ್ರವರ್ತಿ ಪ್ರಶ್ನಿಸಿದರು. ‘ನಾನು ಶಮಂತ್​ಗೆ ಊಟವನ್ನಾದರೂ ಮಾಡಿಸ್ತೀನಿ ಮತ್ತಿನ್ನೇನಾದರೂ ಮಾಡಿಸ್ತೀನಿ. ಅದನ್ನು ಕೇಳೋಕೆ ನೀವ್ಯಾರು? ಸುಮ್ಮನೆ ನನ್ನ ತಂಟೆಗೆ ಬರಬೇಡಿ’ ಎಂದು ಪ್ರಿಯಾಂಕಾ ಸಿಟ್ಟಾದರು.

ನಂತರ ಹೊರಗೆ ಬಂದು ಪ್ರಶಾಂತ್​, ಶಮಂತ್​ ಕೂತು ಮಾತನಾಡುತ್ತಿದ್ದರು. ಆಗ ಚಕ್ರವರ್ತಿ ಅಲ್ಲಿಗೆ ಬಂದು, ‘ಆ ಯಮ್ಮ ಯಾಕಷ್ಟು ಡ್ರಾಮಾ ಮಾಡ್ತಾರೋ ಗೊತ್ತಿಲ್ಲ’ ಎನ್ನುವ ಮಾತನ್ನು ಹೇಳಿದರು. ಈ ಜಗಳದ ನಡುವೆ ಸಿಲುಕಿದ್ದ ಶಮಂತ್​​ ಅಳೋಕೆ ಆರಂಭಿಸದರು. ಈ ವೇಳೆ ಚಕ್ರವರ್ತಿಯನ್ನು ಪ್ರಶಾಂತ್​ ಸಮಾಧಾನ ಪಡಿಸೋಕೆ ಪ್ರಯತ್ನಿಸಿದರು.

ಇದನ್ನೂ ಓದಿ: ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಬಿಗ್ ಬಾಸ್ ಮನೆಯಿಂದ ನಿಧಿ ಸುಬ್ಬಯ್ಯ ಎಲಿಮಿನೇಟ್ ಆಗೋಕೆ ಆ ಒಂದು ಮಾತು ಕಾರಣವಾಯ್ತು

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ