AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

Bigg Boss Kannada: ಎರಡು ವಾರಗಳ ಹಿಂದಿನ ಮಾತು. ಬಿಗ್​ ಬಾಸ್​ನಲ್ಲಿ ಚಕ್ರವರ್ತಿ ಚಂದ್ರಚೂಡ್​ ವಿಚಿತ್ರವಾಗಿ ವರ್ತಿಸಿದ್ದರು. ಅವರು ಅಶ್ಲೀಲ ಪದ ಬಳಕೆ ಮಾಡಿದ್ದರಿಂದ ಬೀಪ್​ ಸೌಂಡ್​ ಹಾಕಲಾಗಿತ್ತು. ಇದಕ್ಕೆ ಕಿಚ್ಚ ಸುದೀಪ್​ ಅಸಮಾಧಾನ ಹೊರ ಹಾಕಿದ್ದರು.

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?
TV9 Web
| Edited By: |

Updated on:Jul 19, 2021 | 11:26 AM

Share

ಬಿಗ್​​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಎಷ್ಟೇ ಹೇಳಿದರೂ ತಮ್ಮ ತಪ್ಪನ್ನು ತಿದ್ದಿಕೊಳ್ಳುವಂತೆ ಕಾಣುತ್ತಿಲ್ಲ. ಪದೇಪದೇ ಬಿಗ್​ ಬಾಸ್ ಚೌಕಟ್ಟನ್ನು ಮೀರಿ ನಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್​ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಅವರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಈ ಬಾರಿ ಬಿಗ್​ ಬಾಸ್​ ನಿಯಮವನ್ನು ಮತ್ತೆ ಮೀರಿದ್ದಾರೆ. ಅಷ್ಟೇ ಅಲ್ಲ ವೀಕ್ಷಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

ಎರಡು ವಾರಗಳ ಹಿಂದಿನ ಮಾತು. ಬಿಗ್​ ಬಾಸ್​ನಲ್ಲಿ ಚಕ್ರವರ್ತಿ ಚಂದ್ರಚೂಡ್​ ವಿಚಿತ್ರವಾಗಿ ವರ್ತಿಸಿದ್ದರು. ಅವರು ಅಶ್ಲೀಲ ಪದ ಬಳಕೆ ಮಾಡಿದ್ದರಿಂದ ಬೀಪ್​ ಸೌಂಡ್​ ಹಾಕಲಾಗಿತ್ತು. ಇದಕ್ಕೆ ಕಿಚ್ಚ ಸುದೀಪ್​ ಅಸಮಾಧಾನ ಹೊರ ಹಾಕಿದ್ದರು. ಚಕ್ರವರ್ತಿ ಅವರೇ ನಿಮಗೆ ಇರುವ ಜ್ಞಾನಕ್ಕೆ ಇದು ಸಲ್ಲುವುದಿಲ್ಲ ಎಂದಿದ್ದರು. ಅದಾದ ನಂತರದಲ್ಲಿ ನಾನು ತಪ್ಪನ್ನು ತಿದ್ದಿಕೊಳ್ಳುತ್ತೇನೆ ಎಂದಿದ್ದರು ಚಕ್ರವರ್ತಿ. ಇದಾದ ಒಂದೇ ವಾರದಲ್ಲಿ ಅವರು ಮತ್ತೆ ಅದೇ ತಪ್ಪನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ಬ್ರೇಕ್​ ಪಡೆದ ನಂತರ ಪ್ರಿಯಾಂಕಾ ಹಾಗೂ ಚಕ್ರವರ್ತಿ ನಡುವೆ ಒಂದು ಗೆಳೆತನ ಬೆಳೆದಿತ್ತು. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಅದು ದಿಕ್ಕು ಬದಲಿಸಿಕೊಂಡಿತ್ತು. ಪ್ರಿಯಾಂಕಾ-ಶಮಂತ್​ ಅನ್ಯೋನ್ಯವಾಗಿದ್ದಾರೆ ಎನ್ನುವುದೇ ಚಕ್ರವರ್ತಿ ಬೇಸರಕ್ಕೆ ಕಾರಣವಾಗಿತ್ತು. ಈ ಘಟನೆ ನಂತರದಲ್ಲಿ ಇಬ್ಬರೂ ಒಬ್ಬರ ಮುಖ ಒಬ್ಬರು ನೋಡುತ್ತಿರಲಿಲ್ಲ.

ಜುಲೈ 18ರ ಎಪಿಸೋಡ್​ನಲ್ಲಿ ಪ್ರಿಯಾಂಕಾ ಎಲಿಮಿನೇಟ್​ ಆಗಿದ್ದಾರೆ. ನಾಮಿನೇಷನ್​ ಲಿಸ್ಟ್​ನಲ್ಲಿದ್ದ ವೈಷ್ಣವಿ ಗೌಡ, ಶುಭಾ ಪೂಂಜಾ, ಪ್ರಶಾಂತ್ ಸಂಬರಗಿ, ಪ್ರಿಯಾಂಕಾ ತಿಮ್ಮೇಶ್ ಪೈಕಿ ಕೊನೆಯಲ್ಲಿ ಔಟ್​ ಆಗಿದ್ದು ಪ್ರಿಯಾಂಕಾ. ದೊಡ್ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅವರಿಗೆ ಬಿಗ್​ ಬಾಸ್ ವಿಶೇಷ ಅಧಿಕಾರ ಒಂದನ್ನು ನೀಡಿದ್ದರು. ಅದರನ್ವಯ ಒಬ್ಬರನ್ನು ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್​ ಮಾಡಬೇಕು. ಆಗ ಪ್ರಿಯಾಂಕಾ ತೆಗೆದುಕೊಂಡ ಹೆಸರು ಚಕ್ರವರ್ತಿ ಚಂದ್ರಚೂಡ್​ ಅವರದ್ದು. ಇದು ಚಕ್ರವರ್ತಿ ಚಂದ್ರಚೂಡ್​ಗೆ ಅಸಮಾಧಾನ ತರಿಸಿದೆ. ಹೀಗಾಗಿ, ಪ್ರಿಯಾಂಕಾಗೆ ಅವರು ಅಶ್ಲೀಲ ಸನ್ನೆ ತೋರಿಸಿದ್ದಾರೆ.

ಸುದೀಪ್​ ಅವರು ಪದೇಪದೇ ಹೇಳಿದರೂ ಚಕ್ರವರ್ತಿ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಇದಕ್ಕೆ ಬಿಗ್ ಬಾಸ್​ ಯಾವುದೇ ಶಿಕ್ಷೆ ನೀಡದೇ ಇರಬಹುದು. ಆದರೆ, ಈ ವಾರದ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಕ್ಲಾಸ್​ ತೆಗೆದುಕೊಳ್ಳೋದು ಪಕ್ಕಾ. ಇನ್ನು, ಚಕ್ರವರ್ತಿ ಈ ನಡೆ ಅನೇಕರಿಗೆ ಅಸಮಾಧಾನ ತರಿಸಿದೆ. ನೇರವಾಗಿ ನಾಮಿನೇಟ್​ ಆಗಿರುವ ಚಕ್ರವರ್ತಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಕಳಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಹೀಗಾಗಿ ಈ ಬಾರಿ ಅವರಿಗೆ ಕಡಿಮೆ ವೋಟ್​ ಬಿದ್ದು ಹೊರನಡೆದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ಚಕ್ರವರ್ತಿ ಕಡೆಯಿಂದ ಮತ್ತೆ ರಿಪೀಟ್ ಆಯಿತು ತಪ್ಪು; ಕಿಚ್ಚನ ಬುದ್ಧಿವಾದಕ್ಕೆ ಬದಲಾಗಲಿಲ್ಲ ಚಂದ್ರಚೂಡ್

ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

Published On - 9:19 am, Mon, 19 July 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ