AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನ ಬಾಲ ದಿವ್ಯಾ ಎಂದರೆ ನಾನೇ ಹೊಡೀತಿನಿ; ಸಂಬರಗಿಗೆ ಚಂದ್ರಚೂಡ್​ ಕೊಟ್ರು ಖಡಕ್​ ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಎಂಬ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​​ನಲ್ಲಿ ತಮ್ಮಿಷ್ಟದವರ ಬಗ್ಗೆ ಹೇಳಿಕೊಳ್ಳಬೇಕು.

ಮಂಜುನ ಬಾಲ ದಿವ್ಯಾ ಎಂದರೆ ನಾನೇ ಹೊಡೀತಿನಿ; ಸಂಬರಗಿಗೆ ಚಂದ್ರಚೂಡ್​ ಕೊಟ್ರು ಖಡಕ್​ ಎಚ್ಚರಿಕೆ
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 13, 2021 | 7:12 AM

Share

ಬಿಗ್​ ಬಾಸ್ ಮನೆಯಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ತುಂಬಾನೇ ಕ್ಲೋಸ್​ ಆಗಿರುತ್ತಾರೆ. ಇದನ್ನು ನೋಡಿ ಪ್ರಶಾಂತ್​ ಸಂಬರಗಿ ತುಂಬಾನೇ ಉರಿದುಕೊಂಡಿದ್ದರು. ಅಷ್ಟೇ ಅಲ್ಲ, ಮಂಜು ಬಾಲ ದಿವ್ಯಾ ಎಂದು ಹೇಳುತ್ತಲೇ ಬಂದಿದ್ದರು. ಇದಕ್ಕೆ ದಿವ್ಯಾ ಸಾಕಷ್ಟು ಬಾರಿ ಬೇಸರ ಹೊರ ಹಾಕಿದ್ದರು. ಅಚ್ಚರಿ ಎಂದರೆ, ಈ ವಿಚಾರದಲ್ಲಿ ಪ್ರಶಾಂತ್​ ಸಂಬರಗಿಗೆ ಚಕ್ರವರ್ತಿ ಚಂದ್ರಚೂಡ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​​ನಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಹತ್ತಿರವಾದವರ ಬಗ್ಗೆ ಹೇಳಿಕೊಳ್ಳಬೇಕು. ಆಗ, ವೇದಿಕೆ ಮೇಲೆ ಬಂದು ಮಾತನಾಡಿದ ಮಂಜು, ನಂಗೆ ಫ್ರೆಂಡ್ಸ್​ ಅಂದ್ರೆ ತುಂಬಾ ಗೌರವ, ಪ್ರೀತಿ. ನನಗೆ ಇಬ್ಬರು ಮೂವರು ಬೆಸ್ಟ್​ ಫ್ರೆಂಡ್​ ಇದಾರೆ. ಆ ಜಾಗಕ್ಕೆ ದಿವ್ಯಾ ಆ್ಯಡ್​ ಆಗಿದ್ದಾಳೆ. ನಾನು ಅವಳ ಜತೆ ಮಕ್ಕಳ ತರ ಆಟ ಆಡ್ತೀನಿ. ನನಗೆ ತಮ್ಮ ಇದಾನೆ. ಆದರೆ, ಅಷ್ಟು ಕನೆಕ್ಟ್​ ಆಗಿಲ್ಲ. ಜಗಳವೇ ಆಗ್ಲಿ ಅಥವಾ ಏನೇ ಆಗಲಿ ನಾನು ಫ್ರೆಂಡ್ಸ್​ ಅನ್ನು ಬಿಟ್ಟುಕೊಡಲ್ಲ. ಈ ಸ್ಥಾನಕ್ಕೆ ಬಂದಿದ್ದಕ್ಕೆ ಕಾರಣ ಫ್ರೆಂಡ್ಸ್ ಎಂದು ಮಾತು ಆರಂಭಿಸಿದರು.

ದಿವ್ಯಾ ಸುರೇಶ್ ಮಂಜುನ ಬಾಲ ಎಂದಾಗ ತುಂಬಾ ಬೇಜಾರ್​ ಆಗ್ತಾ ಇತ್ತು. ಇಲ್ಲಿ ಒಂದು ಮಾತು ಸ್ಪಷ್ಟಪಡಿಸುತ್ತೇನೆ. ನಾನು ಅವಳ ಬಾಲ. ಅವಳು ಎಲ್ಲಿದ್ದಾಳೆ ಎಂದು ನಾನೇ ಹುಡುಕಿಕೊಂಡು ಹೋಗ್ತೇನೆ. ಅವಳಿಗೆ ಯಾರಾದರೂ ಏನಾದರೂ ಹೇಳಿದ್ರೆ ಬೇಸರ ಆಗುತ್ತೆ ಎಂದರು ಮಂಜು.

ಮಂಜು ವೇದಿಕೆ ಇಳಿದು ಬರುತ್ತಿದ್ದಂತೆ, ಮಂಜು ಬಾಲ ದಿವ್ಯಾ ಎಂದು ಯಾರಾದರೂ ಹೇಳಿದರೆ ನಾನೇ ಹೊಡೆಯುತ್ತೇನೆ ಎಂದು ಚಂದ್ರಚೂಡ್​ ಎಚ್ಚರಿಕೆ ನೀಡಿದರು. ನಂತರ, ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ಹೀಗಾಗಿ, ನಿನ್ನ ಬಗ್ಗೆ ತಪ್ಪಾಗಿ ತಿಳಿದುಕೊಂಡೆ ಎಂದು ದಿವ್ಯಾ ಸುರೇಶ್​ಗೆ ಹೇಳಿದರು. ಈ ಮೂಲಕ ಅವರು ಪ್ರಶಾಂತ್​ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದಾರೆ.

ಇದನ್ನೂ ಓದಿ: ವೈಜಯಂತಿಗೆ ಈ ಭಯ ತುಂಬಾನೇ ಕಾಡಿತ್ತಂತೆ; ಚಂದ್ರಚೂಡ್​ ಬಿಚ್ಚಿಟ್ರು ರಹಸ್ಯ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​