AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನ ಬಾಲ ದಿವ್ಯಾ ಎಂದರೆ ನಾನೇ ಹೊಡೀತಿನಿ; ಸಂಬರಗಿಗೆ ಚಂದ್ರಚೂಡ್​ ಕೊಟ್ರು ಖಡಕ್​ ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಎಂಬ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​​ನಲ್ಲಿ ತಮ್ಮಿಷ್ಟದವರ ಬಗ್ಗೆ ಹೇಳಿಕೊಳ್ಳಬೇಕು.

ಮಂಜುನ ಬಾಲ ದಿವ್ಯಾ ಎಂದರೆ ನಾನೇ ಹೊಡೀತಿನಿ; ಸಂಬರಗಿಗೆ ಚಂದ್ರಚೂಡ್​ ಕೊಟ್ರು ಖಡಕ್​ ಎಚ್ಚರಿಕೆ
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 13, 2021 | 7:12 AM

Share

ಬಿಗ್​ ಬಾಸ್ ಮನೆಯಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ತುಂಬಾನೇ ಕ್ಲೋಸ್​ ಆಗಿರುತ್ತಾರೆ. ಇದನ್ನು ನೋಡಿ ಪ್ರಶಾಂತ್​ ಸಂಬರಗಿ ತುಂಬಾನೇ ಉರಿದುಕೊಂಡಿದ್ದರು. ಅಷ್ಟೇ ಅಲ್ಲ, ಮಂಜು ಬಾಲ ದಿವ್ಯಾ ಎಂದು ಹೇಳುತ್ತಲೇ ಬಂದಿದ್ದರು. ಇದಕ್ಕೆ ದಿವ್ಯಾ ಸಾಕಷ್ಟು ಬಾರಿ ಬೇಸರ ಹೊರ ಹಾಕಿದ್ದರು. ಅಚ್ಚರಿ ಎಂದರೆ, ಈ ವಿಚಾರದಲ್ಲಿ ಪ್ರಶಾಂತ್​ ಸಂಬರಗಿಗೆ ಚಕ್ರವರ್ತಿ ಚಂದ್ರಚೂಡ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​​ನಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಹತ್ತಿರವಾದವರ ಬಗ್ಗೆ ಹೇಳಿಕೊಳ್ಳಬೇಕು. ಆಗ, ವೇದಿಕೆ ಮೇಲೆ ಬಂದು ಮಾತನಾಡಿದ ಮಂಜು, ನಂಗೆ ಫ್ರೆಂಡ್ಸ್​ ಅಂದ್ರೆ ತುಂಬಾ ಗೌರವ, ಪ್ರೀತಿ. ನನಗೆ ಇಬ್ಬರು ಮೂವರು ಬೆಸ್ಟ್​ ಫ್ರೆಂಡ್​ ಇದಾರೆ. ಆ ಜಾಗಕ್ಕೆ ದಿವ್ಯಾ ಆ್ಯಡ್​ ಆಗಿದ್ದಾಳೆ. ನಾನು ಅವಳ ಜತೆ ಮಕ್ಕಳ ತರ ಆಟ ಆಡ್ತೀನಿ. ನನಗೆ ತಮ್ಮ ಇದಾನೆ. ಆದರೆ, ಅಷ್ಟು ಕನೆಕ್ಟ್​ ಆಗಿಲ್ಲ. ಜಗಳವೇ ಆಗ್ಲಿ ಅಥವಾ ಏನೇ ಆಗಲಿ ನಾನು ಫ್ರೆಂಡ್ಸ್​ ಅನ್ನು ಬಿಟ್ಟುಕೊಡಲ್ಲ. ಈ ಸ್ಥಾನಕ್ಕೆ ಬಂದಿದ್ದಕ್ಕೆ ಕಾರಣ ಫ್ರೆಂಡ್ಸ್ ಎಂದು ಮಾತು ಆರಂಭಿಸಿದರು.

ದಿವ್ಯಾ ಸುರೇಶ್ ಮಂಜುನ ಬಾಲ ಎಂದಾಗ ತುಂಬಾ ಬೇಜಾರ್​ ಆಗ್ತಾ ಇತ್ತು. ಇಲ್ಲಿ ಒಂದು ಮಾತು ಸ್ಪಷ್ಟಪಡಿಸುತ್ತೇನೆ. ನಾನು ಅವಳ ಬಾಲ. ಅವಳು ಎಲ್ಲಿದ್ದಾಳೆ ಎಂದು ನಾನೇ ಹುಡುಕಿಕೊಂಡು ಹೋಗ್ತೇನೆ. ಅವಳಿಗೆ ಯಾರಾದರೂ ಏನಾದರೂ ಹೇಳಿದ್ರೆ ಬೇಸರ ಆಗುತ್ತೆ ಎಂದರು ಮಂಜು.

ಮಂಜು ವೇದಿಕೆ ಇಳಿದು ಬರುತ್ತಿದ್ದಂತೆ, ಮಂಜು ಬಾಲ ದಿವ್ಯಾ ಎಂದು ಯಾರಾದರೂ ಹೇಳಿದರೆ ನಾನೇ ಹೊಡೆಯುತ್ತೇನೆ ಎಂದು ಚಂದ್ರಚೂಡ್​ ಎಚ್ಚರಿಕೆ ನೀಡಿದರು. ನಂತರ, ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ಹೀಗಾಗಿ, ನಿನ್ನ ಬಗ್ಗೆ ತಪ್ಪಾಗಿ ತಿಳಿದುಕೊಂಡೆ ಎಂದು ದಿವ್ಯಾ ಸುರೇಶ್​ಗೆ ಹೇಳಿದರು. ಈ ಮೂಲಕ ಅವರು ಪ್ರಶಾಂತ್​ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದಾರೆ.

ಇದನ್ನೂ ಓದಿ: ವೈಜಯಂತಿಗೆ ಈ ಭಯ ತುಂಬಾನೇ ಕಾಡಿತ್ತಂತೆ; ಚಂದ್ರಚೂಡ್​ ಬಿಚ್ಚಿಟ್ರು ರಹಸ್ಯ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್