AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan – Kavitha: ಕವಿತಾ ಪ್ರೀತಿಗಾಗಿ ಮಧ್ಯರಾತ್ರಿ ಮನೆಗೆ ಹೋಗಿದ್ದ ಚಂದನ್​! ಆಗಲೇ ಮೂಡಿತ್ತು ಅನುಮಾನ

Chandan Gowda - Kavitha Gowda Wedding: ಚಂದನ್​ ಕುಮಾರ್​ ಮತ್ತು ಕವಿತಾ ಗೌಡ ಪ್ರೇಮ್​ ಕಹಾನಿ ಶುರುವಾಗಿದ್ದು ನಿನ್ನೆ-ಮೊನ್ನೆ ಅಲ್ಲ. ಆದರೆ ಎಂದೂ ಕೂಡ ಅವರು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಹಾಗಿದ್ದರೂ ನೆಟ್ಟಿಗರಿಗೆ ಗುಮಾನಿ ಶುರುವಾಗಿತ್ತು.

Chandan - Kavitha: ಕವಿತಾ ಪ್ರೀತಿಗಾಗಿ ಮಧ್ಯರಾತ್ರಿ ಮನೆಗೆ ಹೋಗಿದ್ದ ಚಂದನ್​! ಆಗಲೇ ಮೂಡಿತ್ತು ಅನುಮಾನ
ಚಂದನ್​ ಕುಮಾರ್​ - ಕವಿತಾ ಗೌಡ
ಮದನ್​ ಕುಮಾರ್​
| Updated By: Digi Tech Desk|

Updated on:Mar 31, 2021 | 1:31 PM

Share

ಕಿರುತೆರೆಯ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ನಟ ಚಂದನ್​ ಕುಮಾರ್​ ಮತ್ತು ನಟಿ ಕವಿತಾ ಗೌಡ ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ. ಶೀಘ್ರದಲ್ಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ ಎಂಬುದು ಖಚಿತ ಆಗಿದೆ. ಹಾಗಂತ ಈ ಜೋಡಿಯ ಪ್ರೇಮ್​ ಕಹಾನಿ ಶುರುವಾಗಿದ್ದು ನಿನ್ನೆ-ಮೊನ್ನೆ ಅಲ್ಲ. ಈ ಹಿಂದೆ ಅನೇಕ ಬಾರಿ ಈ ಜೋಡಿಯ ಬಗ್ಗೆ ಅನುಮಾನ ಮೂಡಿತ್ತು.

ಕಿರುತೆರೆ ಪ್ರೇಕ್ಷಕರ ವಲಯದಲ್ಲಿ ಸಖತ್​ ಜನಪ್ರಿಯವಾಗಿದ್ದ ‘ಲಕ್ಷ್ಮೀ ಬಾರಮ್ಮ’ ಸೀರಿಯಲ್​ನಲ್ಲಿ ಚಂದನ್​ ಕುಮಾರ್​ ಮತ್ತು ಕವಿತಾ ಜೋಡಿಯಾಗಿ ನಟಿಸಿದ್ದರು. ಆಗಿನಿಂದಲೇ ಅವರಿಬ್ಬರ ನಡುವೆ ಸ್ನೇಹ ಚಿಗುರಿತ್ತು. ನಂತರದ ದಿನಗಳಲ್ಲಿ ಅವರಿಬ್ಬರ ಆಪ್ತತೆ ಹೆಚ್ಚಾಯಿತು. ಆದರೆ ಎಂದೂ ಕೂಡ ಅವರು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಹಾಗಿದ್ದರೂ ನೆಟ್ಟಿಗರಿಗೆ ಗುಮಾನಿ ಶುರುವಾಗಿತ್ತು.

ಕವಿತಾ ಮತ್ತು ಚಂದನ್​ ಕುಮಾರ್​ ನೇರವಾಗಿ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. ಹಾಗಿದ್ದರೂ ಕೂಡ ಅವರ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅನೇಕ ಸಾಕ್ಷಿಗಳು ಸಿಗಲು ಆರಂಭಿಸಿದವು. ಇಬ್ಬರೂ ಜೊತೆಯಾಗಿ ಸುತ್ತಾಡುತ್ತಿದ್ದರು. ಅದನ್ನು ಅವರು ಮುಚ್ಚಿಡುತ್ತಿರಲಿಲ್ಲ ಕೂಡ. ಆ ಕ್ಷಣದ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದರು. ‘ಒಳ್ಳೆಯ ಜೋಡಿ.. ಬೇಗ ಮದುವೆ ಆಗಿ’ ಎಂದು ನೆಟ್ಟಿಗರು ಕಾಮೆಂಟ್​ ಮಾಡುತ್ತಿದ್ದರೂ ಸಹ, ಈ ಪ್ರೇಮಪಕ್ಷಿಗಳು ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

ಕಳೆದ ವರ್ಷ ಲಾಕ್​ಡೌನ್​ ಸಮಯದಲ್ಲಿ ಕವಿತಾ ಗೌಡ ಜನ್ಮದಿನವನ್ನು (ಜು.26) ಸಿಂಪಲ್​ ಆಗಿ ಅವರ ಮನೆಯಲ್ಲೇ ಆಚರಿಸಲಾಗಿತ್ತು. ಲಾಕ್​ಡೌನ್​ ನಿಯಮಗಳು ಇದ್ದಿದ್ದರಿಂದ ಕೆಲವೇ ಕೆಲವು ಆಪ್ತರು ಮಾತ್ರ ಅದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಚಂದನ್​ ಅವರು ಕವಿತಾಗೆ ಒಂದು ಸರ್ಪ್ರೈಸ್​ ನೀಡಿದ್ದರು. ಬರ್ತ್​ಡೇ ಆಚರಿಸುವ ವೇಳೆ ಕಿಂಚಿತ್ತೂ ಸುಳಿವು ನೀಡದೆ, ಮಧ್ಯರಾತ್ರಿ ಕವಿತಾ ಮನೆಗೆ ಚಂದನ್​ ಎಂಟ್ರಿ ನೀಡಿದ್ದರು! ಅವರ ಪ್ರೀತಿಗೆ ಕರಗಿದ ಕವಿತಾ ಮುಖದಲ್ಲಿ ನಗು ಅರಳಿತ್ತು. ಆ ವಿಡಿಯೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು.

ಲಾಕ್​ಡೌನ್​ ಸಡಿಲಿಕೆ ಆದನಂತರ ಸ್ನೇಹಿತರ ಜೊತೆಗೂಡಿ ಅನೇಕ ಪ್ರವಾಸಿ ಸ್ಥಳಗಳಿಗೆ ಕವಿತಾ-ಚಂದನ್​ ಭೇಟಿ ನೀಡಿದ್ದರು. ಆ ಸಂದರ್ಭದ ಅನೇಕ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಎಲ್ಲ ಫೋಟೋದಲ್ಲಿಯೂ ಕವಿತಾ ಮತ್ತು ಚಂದನ್​ ಆಪ್ತತೆಯನ್ನು ನೆಟ್ಟಿಗರು ಸುಲಭವಾಗಿ ಗುರುತಿಸಬಹುದಾಗಿತ್ತು. ಇತ್ತೀಚೆಗೆ ಚಂದನ್​ ಅವರು ಫುಡ್​ ಬ್ಯುಸಿನೆಸ್​ ಆರಂಭಿಸಿದರು. ಆಗಲೂ ಸಹ ಕವಿತಾ ಅವರು ಚಂದನ್​ ಜೊತೆ ನಿಂತು ಬೆಂಬಲ ನೀಡಿದರು. ಚಂದನ್​ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕವಿತಾ ಅವರ ಹಲವಾರು ಫೋಟೋಗಳು ರಾರಾಜಿಸುತ್ತಿವೆ.

ಇದನ್ನೂ ಓದಿ: ಏಪ್ರಿಲ್​ 1ಕ್ಕೆ ಹಸೆಮಣೆ ಏರಲಿದ್ದಾರೆ ಚಂದನ್​-ಕವಿತಾ ಲವ್​ ಬರ್ಡ್ಸ್​​! ಕಡೆಗೂ ಅಧಿಕೃತವಾಯಿತು ಇಬ್ಬರ ಪ್ರೀತಿ

Published On - 1:20 pm, Wed, 31 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ