AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹೆಜ್ಜೆ ಇಡಲು ಸಿದ್ಧರಾದ ಶೈಲಜಾ ನಾಗ್‌-ಬಿ. ಸುರೇಶ್‌ ಮಗಳು ಚಂದನಾ ನಾಗ್‌

ಶೈಲಜಾ ನಾಗ್ ಮತ್ತು ಬಿ. ಸುರೇಶ್ ಅವರ ಪುತ್ರಿ ಚಂದನಾ ನಾಗ್ ಏಪ್ರಿಲ್ 20 ರಂದು ತಮ್ಮ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ. ನಟಿ, ಬರಹಗಾರ್ತಿ, ನಿರ್ದೇಶಕಿ ಹಾಗೂ ನಾಟಕ ಕಲಾವಿದೆ ಆಗಿ ಗುರುತಿಸಿಕೊಂಡಿರುವ ಚಂದನಾ ಅವರು ಸ್ನೇಹಾ ಕಪ್ಪಣ್ಣ ಅವರ ಮಾರ್ಗದರ್ಶನದಲ್ಲಿ ಈ ಕಲೆಯನ್ನು ಅಭ್ಯಾಸ ಮಾಡಿದ್ದಾರೆ.

ಹೊಸ ಹೆಜ್ಜೆ ಇಡಲು ಸಿದ್ಧರಾದ ಶೈಲಜಾ ನಾಗ್‌-ಬಿ. ಸುರೇಶ್‌ ಮಗಳು ಚಂದನಾ ನಾಗ್‌
ಚಂದನಾ
ರಾಜೇಶ್ ದುಗ್ಗುಮನೆ
|

Updated on: Apr 17, 2025 | 9:59 AM

Share

ಬಿ. ಸುರೇಶ್ (B Suresh) ಹಾಗೂ ನಿರ್ಮಾಪಕಿ ಶೈಲಜಾ ನಾಗ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಣ್ಣದ ಲೋಕದ ವಿವಿಧ ವಿಭಾಗಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಈ ಕಲಾ ಕುಟುಂಬದ ಕುಡಿ ಅಂದರೆ ಶೈಲಜಾ ಹಾಗೂ ಸುರೇಶ್ ಪುತ್ರಿ ಚಂದನಾ ಎಸ್. ನಾಗ್ ಈಗ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ. ಸ್ನೇಹಾ ಕಪ್ಪಣ್ಣ ಅವರ ಭ್ರಮರಿ ನಾಟ್ಯಶಾಲೆಯಲ್ಲಿ ಕಲಿಯುತ್ತಿರುವ ಚಂದನಾ ಅವರಿಗೆ ಆಪ್ತರು ಶುಭಕೋರುತ್ತಿದ್ದಾರೆ. ಏಪ್ರಿಲ್‌ 20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ಎಡಿಎ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.

ನಟಿಯಾಗಿ, ಬರಹಗಾರ್ತಿಯಾಗಿ, ನೃತ್ಯಗಾರ್ತಿಯಾಗಿ, ನಿರ್ದೇಶಕಿಯಾಗಿಯೂ ಚಂದನಾ ಗುರುತಿಸಿಕೊಂಡಿದ್ದಾರೆ. ಹುಟ್ಟಿದ್ದು ಕಲಾ ಕುಟುಂಬದಲ್ಲಾದ್ದರಿಂದ ಅವರಿಗೆ ಇದರ ಆಳ-ಅಗಲ ತಿಳಿದಿದೆ. ಬೆಂಗಳೂರಿನ ಸೆಂಟ್‌ ಜೋಸೆಫ್‌ ಕಾಲೇಜಿನಲ್ಲಿ ವಿಷ್ಯುವಲ್‌ ಕಮ್ಯೂನಿಕೇಷನ್‌ ವಿಷಯದಲ್ಲಿ ಪದವಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಸತತ ಸೋಲು, ಸಂಭಾವನೆಯಲ್ಲಿ ಇಳಿಕೆ; ಆದರೂ ನೂರಾರು ಕೋಟಿ ಒಡೆಯ ವಿಕ್ರಮ್
Image
ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  
Image
ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ
Image
ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್
View this post on Instagram

A post shared by Chandana Nag (@chandananag)

ನಾಟಕ ರಂಗದಲ್ಲಿ ಸಾಧನೆ

ನಾಟಕ ರಂಗದಲ್ಲಿ ಚಂದನಾ ಅವರು ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಸಂಚಯ, ಸಮುದಾಯ ಮತ್ತು ಬೆಂಗಳೂರು ಪ್ಲೇಯರ್ಸ್‌ ಸೇರಿದಂತೆ ಹಲವು ರಂಗತಂಡಗಳಲ್ಲಿ ಚಂದನಾ ಸಕ್ರಿಯರಾಗಿದ್ದಾರೆ. 2024ರಲ್ಲಿ ನಡೆದ ‘ನಾಟಕ ಬೆಂಗಳೂರು ಫೆಸ್ಟಿವಲ್’ನಲ್ಲಿ ಇವರು ಬರೆದ ‘ಕುಟ್ಸುಗಿ’ ನಾಟಕ ‘ಅತ್ಯತ್ತುಮ ಮೂಲ ನಾಟಕ ಕೃತಿ’ ಅವಾರ್ಡ್ ಪಡೆಯಿತು.

ಇದನ್ನೂ ಓದಿ: ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ

‘ಅನ್‌ವಾಂಟೆಡ್‌ ಕಿಡ್’, ‘ಸದ್ಗತಿ’, ‘ಪಂಜರದ ಗಿಳಿ’ ರೀತಿಯ ಕಿರುಚಿತ್ರಗಳಲ್ಲಿ ಚಂದನಾ ನಟಿಸಿದ್ದಾರೆ. ಈ ಕಿರುಚಿತ್ರವು ಅನೇಕ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು, ಅವಾರ್ಡ್ ಗೆದ್ದಿದೆ ಎಂಬುದು ವಿಶೇಷ. 2021ರಲ್ಲಿ ನಡೆದ ‘ಪ್ರಗುಣಿ ಶಾರ್ಟ್‌ ಫಿಲಂ ಫೆಸ್ಟಿವಲ್‌’ನಲ್ಲಿ ಅವರಿಗೆ ಅತ್ಯುತ್ತಮ ನಟಿ ಅವಾರ್ಡ್ ದೊರೆತಿದೆ. ದರ್ಶನ್ ನಟನೆಯ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳ ನಿರ್ದೇಶನ ತಂಡದಲ್ಲಿ ಅವರು ಸಹಾಯಕ ನಿರ್ದೇಶಕಿ ಆಗಿದ್ದರು.

View this post on Instagram

A post shared by Chandana Nag (@chandananag)

ಭರತನಾಟ್ಯ ಕಲಿಕೆ

ಗುರು ಭಾನುಮತಿ ಅವರ ಬಳಿ ಸುಮಾರು 10 ವರ್ಷಗಳ ಕಾಲ ಚಂದನಾ ಅವರು ಭರತನಾಟ್ಯ ಕಲಿತಿದ್ದಾರೆ. ಈಗ ಗುರು ಸ್ನೇಹಾ ಕಪ್ಪಣ್ಣ ಅವರ ಬಳಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಏಪ್ರಿಲ್ 20ರಂದು ನಡೆಯುವ ಕಾರ್ಯಕ್ರಮಕ್ಕೆ ನೂಪುರ ಸ್ಕೂಲ್‌ ಆಫ್‌ ಭರತನಾಟ್ಯಂನ ನಿರ್ದೇಶಕಿ ಡಾ. ಲಲಿತಾ ಶ್ರೀನಿವಾಸನ್‌, ಪದ್ಮಶ್ರೀ ಪ್ರತಿಭಾ ಪ್ರಹ್ಲಾದ್‌, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಶುಭಾ ಧನಂಜಯ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ