AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್​ ಯಶಸ್ವಿಯಾಗಿ ಕಾಲಿಟ್ಟಿದೆ. ಇಸ್ರೋ ಮಾಡಿದ ಸಾಧನೆಗೆ ಭಾರತೀಯರೆಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಕ್ಷಯ್​ ಕುಮಾರ್​, ಯಶ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಇಸ್ರೋ ವಿಜ್ಞಾನಿಗಳ ಸಾಧನೆಗೆ ಹ್ಯಾಟ್ಸ್​ ಆಫ್​ ಎನ್ನುತ್ತಿದ್ದಾರೆ.

ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?
ವಿಕ್ರಮ್​ ಲ್ಯಾಂಡರ್​, ಯಶ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on:Aug 23, 2023 | 7:13 PM

Share

ಇಡೀ ದೇಶವೇ ಹೆಮ್ಮೆಯಿಂದ ಚಂದ್ರನತ್ತ ನೋಡುತ್ತಿದೆ. ಭಾರತದ ‘ಚಂದ್ರಯಾನ 3’ (Chandrayaan 3) ಯೋಜನೆ ಯಶಸ್ವಿ ಆಗಿದೆ. ಚಂದ್ರನ ಅಂಗಳದ ಮೇಲೆ ವಿಕ್ರಮ್​ ಲ್ಯಾಂಡರ್​ ಕಾಲಿಟ್ಟಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿಶ್ವದ ಜನರು ಸಾಕ್ಷಿ ಆಗಿದ್ದಾರೆ. ಎಲ್ಲ ಭಾರತೀಯರ ಪಾಲಿಗೆ ಇದು ಹೆಮ್ಮೆಯ ಕ್ಷಣ. ಇಸ್ರೋ ವಿಜ್ಞಾನಿಗಳ (ISRO Scientist) ಈ ಸಾಧನೆಯನ್ನು ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಗಲ್ಲಿ ಗಲ್ಲಿಗಳಲ್ಲಿ ಜನರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ವೇಳೆ ಯಶ್​ (Yash), ಹೃತಿಕ್​ ರೋಷನ್​, ಅಕ್ಷಯ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ದೇಶಪ್ರೇಮ ವ್ಯಕ್ತಪಡಿಸುವಲ್ಲಿ ಅಕ್ಷಯ್​ ಕುಮಾರ್​ ಅವರು ಯಾವಾಗಲೂ ಮುಂದಿರುತ್ತಾರೆ. ‘ಕೋಟ್ಯಂತರ ಹೃದಯಗಳು ಇಸ್ರೋಗೆ ಧನ್ಯವಾದ ತಿಳಿಸುತ್ತಿವೆ. ನಾವು ಹೆಮ್ಮೆ ಪಡುವಂತೆ ನೀವು ಮಾಡಿದ್ದೀರಿ. ಭಾರತ ಇತಿಹಾಸ ನಿರ್ಮಿಸಿದ ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಕ್ಕೆ ನಾನು ಅದೃಷ್ಟವಂತ. ಭಾರತ ಈಗ ಚಂದ್ರನ ಅಂಗಳದಲ್ಲಿದೆ. ನಾವು ಚಂದ್ರನ ಮೇಲಿದ್ದೇವೆ’ ಎಂದು ಅಕ್ಷಯ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್:

ಅದೇ ರೀತಿ ಹೃತಿಕ್​ ರೋಷನ್​ ಕೂಡ ಹಿರಿಹಿರಿ ಹಿಗ್ಗಿದ್ದಾರೆ. ‘ಇಂದು ನನ್ನ ಹೃದಯ ಇನ್ನೂ ಹೆಚ್ಚಿನ ಹೆಮ್ಮೆಯ ಭಾವದಿಂದ ತುಂಬಿ ಬಂದಿದೆ. ಚಂದ್ರಯಾನ 3 ಯೋಜನೆಯ ಹಿಂದಿರುವ ಎಲ್ಲರಿಗೂ ನನ್ನ ಅಭಿನಂದನೆ ಮತ್ತು ಧನ್ಯವಾದಗಳು’ ಎಂದು ಹೃತಿಕ್​ ರೋಷನ್​ ಅವರು ಟ್ವೀಟ್​ ಮಾಡಿದ್ದಾರೆ.

ಹೃತಿಕ್​ ರೋಷನ್​ ಟ್ವೀಟ್​:

ಇಸ್ರೋ ಸಾಧನೆಗೆ ನಟ ಯಶ್​ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ‘ಪ್ರಯತ್ನಿಸುವವರಿಗೆ ಯಾವುದೂ ಅಸಾಧ್ಯವಿಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಮಾಡಿದ್ದಕ್ಕಾಗಿ ಇಸ್ರೋಗೆ ಅಭಿನಂದನೆಗಳು. ನೀವು ಇತಿಹಾಸ ನಿರ್ಮಿಸಿದ್ದೀರಿ. ಎಲ್ಲ ಭಾರತೀಯರಿಗೂ ಹೆಮ್ಮೆ ತಂದಿದ್ದೀರಿ. ಮುಂದಿನ ಪೀಳಿಗೆಗೆ ಸ್ಫೂರ್ತಿ ಆಗಿದ್ದೀರಿ’ ಎಂದು ರಾಕಿಂಗ್​ ಸ್ಟಾರ್​ ಟ್ವೀಟ್​ ಮಾಡಿದ್ದಾರೆ.

ನಟ ಯಶ್ ಟ್ವೀಟ್​:

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:11 pm, Wed, 23 August 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ