AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್​ ಯಶಸ್ವಿಯಾಗಿ ಕಾಲಿಟ್ಟಿದೆ. ಇಸ್ರೋ ಮಾಡಿದ ಸಾಧನೆಗೆ ಭಾರತೀಯರೆಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಕ್ಷಯ್​ ಕುಮಾರ್​, ಯಶ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಇಸ್ರೋ ವಿಜ್ಞಾನಿಗಳ ಸಾಧನೆಗೆ ಹ್ಯಾಟ್ಸ್​ ಆಫ್​ ಎನ್ನುತ್ತಿದ್ದಾರೆ.

ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?
ವಿಕ್ರಮ್​ ಲ್ಯಾಂಡರ್​, ಯಶ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on:Aug 23, 2023 | 7:13 PM

Share

ಇಡೀ ದೇಶವೇ ಹೆಮ್ಮೆಯಿಂದ ಚಂದ್ರನತ್ತ ನೋಡುತ್ತಿದೆ. ಭಾರತದ ‘ಚಂದ್ರಯಾನ 3’ (Chandrayaan 3) ಯೋಜನೆ ಯಶಸ್ವಿ ಆಗಿದೆ. ಚಂದ್ರನ ಅಂಗಳದ ಮೇಲೆ ವಿಕ್ರಮ್​ ಲ್ಯಾಂಡರ್​ ಕಾಲಿಟ್ಟಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿಶ್ವದ ಜನರು ಸಾಕ್ಷಿ ಆಗಿದ್ದಾರೆ. ಎಲ್ಲ ಭಾರತೀಯರ ಪಾಲಿಗೆ ಇದು ಹೆಮ್ಮೆಯ ಕ್ಷಣ. ಇಸ್ರೋ ವಿಜ್ಞಾನಿಗಳ (ISRO Scientist) ಈ ಸಾಧನೆಯನ್ನು ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಗಲ್ಲಿ ಗಲ್ಲಿಗಳಲ್ಲಿ ಜನರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ವೇಳೆ ಯಶ್​ (Yash), ಹೃತಿಕ್​ ರೋಷನ್​, ಅಕ್ಷಯ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ದೇಶಪ್ರೇಮ ವ್ಯಕ್ತಪಡಿಸುವಲ್ಲಿ ಅಕ್ಷಯ್​ ಕುಮಾರ್​ ಅವರು ಯಾವಾಗಲೂ ಮುಂದಿರುತ್ತಾರೆ. ‘ಕೋಟ್ಯಂತರ ಹೃದಯಗಳು ಇಸ್ರೋಗೆ ಧನ್ಯವಾದ ತಿಳಿಸುತ್ತಿವೆ. ನಾವು ಹೆಮ್ಮೆ ಪಡುವಂತೆ ನೀವು ಮಾಡಿದ್ದೀರಿ. ಭಾರತ ಇತಿಹಾಸ ನಿರ್ಮಿಸಿದ ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಕ್ಕೆ ನಾನು ಅದೃಷ್ಟವಂತ. ಭಾರತ ಈಗ ಚಂದ್ರನ ಅಂಗಳದಲ್ಲಿದೆ. ನಾವು ಚಂದ್ರನ ಮೇಲಿದ್ದೇವೆ’ ಎಂದು ಅಕ್ಷಯ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್:

ಅದೇ ರೀತಿ ಹೃತಿಕ್​ ರೋಷನ್​ ಕೂಡ ಹಿರಿಹಿರಿ ಹಿಗ್ಗಿದ್ದಾರೆ. ‘ಇಂದು ನನ್ನ ಹೃದಯ ಇನ್ನೂ ಹೆಚ್ಚಿನ ಹೆಮ್ಮೆಯ ಭಾವದಿಂದ ತುಂಬಿ ಬಂದಿದೆ. ಚಂದ್ರಯಾನ 3 ಯೋಜನೆಯ ಹಿಂದಿರುವ ಎಲ್ಲರಿಗೂ ನನ್ನ ಅಭಿನಂದನೆ ಮತ್ತು ಧನ್ಯವಾದಗಳು’ ಎಂದು ಹೃತಿಕ್​ ರೋಷನ್​ ಅವರು ಟ್ವೀಟ್​ ಮಾಡಿದ್ದಾರೆ.

ಹೃತಿಕ್​ ರೋಷನ್​ ಟ್ವೀಟ್​:

ಇಸ್ರೋ ಸಾಧನೆಗೆ ನಟ ಯಶ್​ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ‘ಪ್ರಯತ್ನಿಸುವವರಿಗೆ ಯಾವುದೂ ಅಸಾಧ್ಯವಿಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಮಾಡಿದ್ದಕ್ಕಾಗಿ ಇಸ್ರೋಗೆ ಅಭಿನಂದನೆಗಳು. ನೀವು ಇತಿಹಾಸ ನಿರ್ಮಿಸಿದ್ದೀರಿ. ಎಲ್ಲ ಭಾರತೀಯರಿಗೂ ಹೆಮ್ಮೆ ತಂದಿದ್ದೀರಿ. ಮುಂದಿನ ಪೀಳಿಗೆಗೆ ಸ್ಫೂರ್ತಿ ಆಗಿದ್ದೀರಿ’ ಎಂದು ರಾಕಿಂಗ್​ ಸ್ಟಾರ್​ ಟ್ವೀಟ್​ ಮಾಡಿದ್ದಾರೆ.

ನಟ ಯಶ್ ಟ್ವೀಟ್​:

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:11 pm, Wed, 23 August 23

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ