AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟ್ಯಾಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’; ‘ಚಂದ್ರಯಾನ-3’ಗೆ ಶುಭಕೋರಿದ ಸೆಲೆಬ್ರಿಟಿಗಳು

‘ಚಂದ್ರಯಾನ 3ಗಾಗಿ ಶ್ರಮಿಸಿದ ಎಲ್ಲಾ ವಿಜ್ಞಾನಿಗಳಿಗೆ ಆಲ್​ ದಿ ಬೆಸ್ಟ್​. ಕೋಟ್ಯಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’ ಎಂದು ಅಕ್ಷಯ್ ಕುಮಾರ್ ಬರೆದುಕೊಂಡಿದ್ದಾರೆ.

‘ಕೋಟ್ಯಾಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’; ‘ಚಂದ್ರಯಾನ-3’ಗೆ ಶುಭಕೋರಿದ ಸೆಲೆಬ್ರಿಟಿಗಳು
ಅನುಪಮ್ ಖೇರ್- ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jul 14, 2023 | 10:46 AM

Share

ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು (ಜುಲೈ 14) ಮಧ್ಯಾಹ್ನ 2:35ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ರಾಕೆಟ್ ಉಡಾವಣೆ ಆಗಲಿದೆ. ಇದಕ್ಕಾಗಿ ಇಡೀ ದೇಶವೇ ಕಾದಿದೆ. ಈ ಮಿಷನ್ ಯಶಸ್ಸು ಕಾಣಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್ (Akshay Kumar), ಅನುಪಮ್ ಖೇರ್, ರಿತೇಷ್ ದೇಶ್​ಮುಖ್ ಅವರು ಇಸ್ರೋಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಇವರ ಟ್ವೀಟ್​​ಗಳನ್ನು ಅಭಿಮಾನಿಗಳು ರೀಟ್ವೀಟ್​ ಮಾಡಿಕೊಂಡು ಸಂತೋಷ ಪಟ್ಟಿದ್ದಾರೆ.

ಅಕ್ಷಯ್ ಕುಮಾರ್ ಅವರು ‘ಮಿಷನ್ ಮಂಗಳ್’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 2019ರಲ್ಲಿ ರಿಲೀಸ್ ಆಗಿತ್ತು. ನೈಜ ಘಟನೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಕಡಿಮೆ ವೆಚ್ಛದಲ್ಲಿ ಇಸ್ರೋ ನಡೆಸಿದ ಮಂಗಳಯಾನ ಕುರಿತು ಈ ಸಿನಿಮಾ ಇತ್ತು. ಈ ಸಿನಿಮಾ ಹೀರೋ ಅಕ್ಷಯ್ ಕುಮಾರ್ ಅವರು ಈಗ ‘ಚಂದ್ರಯಾನ 3’ಗೆ ಶುಭಾಶಯ ತಿಳಿಸಿದ್ದಾರೆ.

‘ಮತ್ತೊಮ್ಮೆ ಪುಟಿದೇಳುವ ಸಮಯ ಬಂದಿದೆ. ಚಂದ್ರಯಾನ 3ಗಾಗಿ ಶ್ರಮಿಸಿದ ಎಲ್ಲಾ ವಿಜ್ಞಾನಿಗಳಿಗೆ ಆಲ್​ ದಿ ಬೆಸ್ಟ್​. ಕೋಟ್ಯಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’ ಎಂದು ಅಕ್ಷಯ್ ಕುಮಾರ್ ಬರೆದುಕೊಂಡಿದ್ದಾರೆ. ಇಸ್ರೋ ಕ್ಯಾಪ್ ತೊಟ್ಟ ಫೋಟೋ ಹಂಚಿಕೊಂಡಿರುವ ರಿತೇಷ್ ಅವರು, ‘ಚಂದ್ರಯಾನ 3 ಉಡಾವಣೆಗೆ ಕಾದಿದ್ದೇವೆ. ಇಸ್ರೋಗೆ ಒಳ್ಳೆಯದಾಗಲಿ. ಯಶಸ್ಸಿಗಾಗಿ ನಾವು ಪಾರ್ಥಿಸುತ್ತೇವೆ. ಜೈ ಹಿಂದ್’ ಎಂದು ರಿತೇಶ್ ಬರೆದುಕೊಂಡಿದ್ದಾರೆ. ಅನುಪಮ್​ ಖೇರ್ ಅವರು ಕೂಡ ‘ಚಂದ್ರಯಾನ 3’ಗೆ ವಿಶ್ ಮಾಡಿದ್ದಾರೆ. ಈ ಉಡಾವಣೆ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ನಟನೆಯ ‘ಓಎಂಜಿ 2’ಗೆ ಸಂಕಷ್ಟ: ಪ್ರಮಾಣ ಪತ್ರ ನೀಡಲು ನಿರಾಕರಣೆ

ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ದೇಶಪ್ರೇಮ ಸಾರುವ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಅವರ ಅಭಿಮಾನಿ ಬಳಗ ಹೆಚ್ಚಿದೆ. ಅನುಪಮ್ ಖೇರ್ ಅವರು ಹಿಂದಿ ಮಾತ್ರವಲ್ಲದೆ, ಕನ್ನಡ ಮೊದಲಾದ ಭಾಷೆಗಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಿತೇಷ್ ದೇಶ್​ಮುಖ್ ಅವರು ‘ಹೌಸ್​ಫುಲ್ 5’ ಚಿತ್ರದಲ್ಲಿ ಅಕ್ಷಯ್ ಕುಮಾರ್​ಗೆ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!