Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ನಟಿ ಪವಿತ್ರಾ ಜಯರಾಮ್​ ಜೊತೆ ಆಪ್ತವಾಗಿದ್ದ ನಟ ಚಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಗೆಳತಿ ಪವಿತ್ರಾ ಜಯರಾಮ್​ ಸಾವಿನ ನಂತರ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿರುವುದು ದುರಂತ. ಪವಿತ್ರಾ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ತೀವ್ರ ಭಾವುಕವಾಗಿ ಅವರು ಮಾತನಾಡಿದ್ದರು.

Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ
ಚಂದು
Follow us
ಮದನ್​ ಕುಮಾರ್​
|

Updated on:May 17, 2024 | 11:06 PM

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ (Pavithra Jayaram) ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು (Chandu) ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ (Chandu Suicide) ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಇದನ್ನೂ ಓದಿ: ದರ್ಶನ್ ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಸ್ನೇಹಿತೆ ಪವಿತ್ರಾ ಜಯರಾಮ್​ ನಿಧನಕ್ಕೆ ಕಣ್ಣೀರು ಹಾಕಿದ ನಟ ಚಂದು ಗೌಡ

ಜನಪ್ರಿಯ ‘ತ್ರಿನಯನಿ’ ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್​ ಅವರು ಒಟ್ಟಿಗೆ ನಟಿಸುತ್ತಿದ್ದರು. ಪವಿತ್ರಾ ನಿಧನದ ಬಳಿಕ ಈ ಧಾರಾವಾಹಿ ತಂಡದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು. ಈಗ ಚಂದು ಕೂಡ ನಿಧನರಾಗಿರುವುದರಿಂದ ಎಲ್ಲರಿಗೂ ಆಘಾತ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:55 pm, Fri, 17 May 24

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ