AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ನಟಿ ಪವಿತ್ರಾ ಜಯರಾಮ್​ ಜೊತೆ ಆಪ್ತವಾಗಿದ್ದ ನಟ ಚಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಗೆಳತಿ ಪವಿತ್ರಾ ಜಯರಾಮ್​ ಸಾವಿನ ನಂತರ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿರುವುದು ದುರಂತ. ಪವಿತ್ರಾ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ತೀವ್ರ ಭಾವುಕವಾಗಿ ಅವರು ಮಾತನಾಡಿದ್ದರು.

Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ
ಚಂದು
ಮದನ್​ ಕುಮಾರ್​
|

Updated on:May 17, 2024 | 11:06 PM

Share

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ (Pavithra Jayaram) ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು (Chandu) ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ (Chandu Suicide) ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಇದನ್ನೂ ಓದಿ: ದರ್ಶನ್ ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಸ್ನೇಹಿತೆ ಪವಿತ್ರಾ ಜಯರಾಮ್​ ನಿಧನಕ್ಕೆ ಕಣ್ಣೀರು ಹಾಕಿದ ನಟ ಚಂದು ಗೌಡ

ಜನಪ್ರಿಯ ‘ತ್ರಿನಯನಿ’ ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್​ ಅವರು ಒಟ್ಟಿಗೆ ನಟಿಸುತ್ತಿದ್ದರು. ಪವಿತ್ರಾ ನಿಧನದ ಬಳಿಕ ಈ ಧಾರಾವಾಹಿ ತಂಡದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು. ಈಗ ಚಂದು ಕೂಡ ನಿಧನರಾಗಿರುವುದರಿಂದ ಎಲ್ಲರಿಗೂ ಆಘಾತ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:55 pm, Fri, 17 May 24

ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ