AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಕಿ-ರಶ್ಮಿಕಾ ನಟನೆಯ ಹೊಸ ಸಿನಿಮಾ ಟ್ರೇಲರ್ ರಿಲೀಸ್; ಹೇಗಿದೆ ನೋಡಿ ನಟಿಯ ಲುಕ್

ಬಾಲಿವುಡ್​ನಲ್ಲಿ ವ್ಯಕ್ತಿಗಳ ಜೀವನ ಆಧರಿಸಿದ ಸಿನಿಮಾಗಳು ಒಂದರ ಹಿಂದೆ ಒಂದು ಬರುತ್ತಲೇ ಇರುತ್ತವೆ. ಬಯೋಗ್ರಫಿ ಸಿನಿಮಾಗಳ ಬಳಿಕ ಐತಿಹಾಸಿಕ ಸಿನಿಮಾಗಳ ಟ್ರೆಂಡ್ ಸಹ ನಡೆಯುತ್ತಲೇ ಬಂದಿದೆ. ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’, ಅಜಯ್ ದೇವಗನ್​ರ ‘ತಾನಾಜಿ’, ‘ಪಾಣಿಪತ್’, ‘ಬಾಜಿರಾವ್ ಮಸ್ತಾನಿ’, ‘ಪದ್ಮಾವತ್’ ಇನ್ನೂ ಕೆಲವು ಸಿನಿಮಾಗಳು ಗಮನ ಸೆಳೆದಿವೆ. ಈಗ ‘ಛವ್ವಾ’ ಸಿನಿಮಾ ಮೂಡಿ ಬರುತ್ತಿದೆ.

ವಿಕ್ಕಿ-ರಶ್ಮಿಕಾ ನಟನೆಯ ಹೊಸ ಸಿನಿಮಾ ಟ್ರೇಲರ್ ರಿಲೀಸ್; ಹೇಗಿದೆ ನೋಡಿ ನಟಿಯ ಲುಕ್
ವಿಕ್ಕಿ-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Aug 19, 2024 | 1:02 PM

Share

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಛವ್ವಾ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರ ಡಿಸೆಂಬರ್ 6ರಂದು ರಿಲೀಸ್ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಮೂಲಕ ‘ಪುಷ್ಪ 2’ ಹಾಗೂ ‘ಛವ್ವಾ’ ಸಿನಿಮಾಗಳು ಒಂದೇ ದಿನ ರಿಲೀಸ್ ಆಗಲಿವೆ. ರಶ್ಮಿಕಾ ಮಂದಣ್ಣ ನಟನೆಯ ಎರಡು ದೊಡ್ಡ ಸಿನಿಮಾಗಳು ಒಟ್ಟಿಗೆ ಬಿಡುಗಡೆ ಆಗುತ್ತಿವೆ.

ವಿಕ್ಕಿ ಕೌಶಲ್ ಅವರು ಛತ್ರಪತಿ ಶಿವಾಜಿ ಮಹರಾಜ್ ಅವರ ಮಗ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛತ್ರಪತಿ ಸಾಂಬಾಜಿ ಶಿವರಾಜ್ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈ ಟ್ರೇಲರ್​ನಲ್ಲಿ ಅಬ್ಬರಿಸಿದ್ದಾರೆ. ಅವರ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಅವರು ನೂರಾರು ವೈರಿಗಳ ವಿರುದ್ಧ ಹೋರಾಡುವುದು ಕಂಡು ಬಂದಿದೆ.

‘ಸ್ತ್ರೀ 2’ ಸಿನಿಮಾ ಅಬ್ಬರಿಸುತ್ತಿದೆ. ಈ ಚಿತ್ರದ ಜೊತೆ ‘ಛವ್ವಾ’ ಸಿನಿಮಾದ ಟ್ರೇಲರ್ ಅಟ್ಯಾಚ್ ಆಗಿದೆ. ಅನೇಕರು ರಣವೀರ್ ಸಿಂಗ್ ಮಾಡಿದ ಬಾಜಿರಾವ್ ಮಸ್ತಾನಿ ಹಾಗೂ ವಿಕ್ಕಿ ಕೌಶಲ್ ಮಾಡಿದ ಈ ಪಾತ್ರವನ್ನು ಹೋಲಿಕೆ ಮಾಡುತ್ತಿದ್ದಾರೆ. ವಿಕ್ಕಿ ಕೌಶಲ್ ಅವರು ಚತ್ರಪತಿ ಸಾಂಬಾಜಿ ಮಹರಾಜ್ ಪಾತ್ರವನ್ನು ಚಾಲೆಂಜಿಂಗ್ ಆಗಿ ತೆಗೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಸಾಂಬಾಜಿಯ ಪತ್ನಿ ಯೇಸುಬಾಯಿ ಬೋನ್ಸಲೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಛವ್ವಾ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ. ಅಂದು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಕೂಡ ರಿಲೀಸ್ ಆಗಲಿದೆ. ಎರಡು ಬಿಗ್ ಬಜೆಟ್ ಸಿನಿಮಾಗಳು ಒಂದೇ ದಿನ ರಿಲೀಸ್ ಆಗಲಿದೆ ಎಂಬುದು ವಿಶೇಷ. ‘ಮಿಮಿ’, ‘ಚುಪ್ಪಿ’ ಸಿನಿಮಾ ನಿರ್ದೇಶಕ ಲಕ್ಷ್ಮಣ ಉಟೇಕರ್ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ವಿಕ್ಕಿ ಕೌಶಲ್ ಹಾಗೂ ಲಕ್ಷ್ಮಣ್ ಅವರು ಈ ಮೊದಲು ‘ಜರ ಹಟ್ಕೆ ಜರ ಬಚ್ಕೆ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. 2023ರಲ್ಲಿ ರಿಲೀಸ್ ಆದ ಈ ಸಿನಿಮಾ ಮೆಚ್ಚುಗೆ ಪಡೆಯಲು ವಿಫಲವಾಗಿತ್ತು.

ಇದನ್ನೂ ಓದಿ: ಶಿವಾಜಿ ಕುರಿತ ಹಿಂದಿ ಸಿನಿಮಾದಲ್ಲಿ ದಕ್ಷಿಣ ಸ್ಟಾರ್ ನಟ ಔರಂಗಾಜೇಬ್

ಛತ್ರಪತಿ ಶಿವಾಜಿ ಅವರ ಮಗ ಛತ್ರಪತಿ ಸಾಂಬಾಜಿ ಮಹರಾಜನ ಕಥೆಯನ್ನು ಈ ಚಿತ್ರ ಹೊಂದಿದೆ. ಈ ಚಿತ್ರದಲ್ಲಿ ಅಖಾಯೆ ಖನ್ನಾ, ಅಶುತೋಷ್ ರಾಣಾ, ದಿವ್ಯಾ ದತ್ತ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Mon, 19 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ