Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ
ಶಾರುಖ್ ಖಾನ್Image Credit source: Prabhat Khabar
Follow us
ನಯನಾ ರಾಜೀವ್
|

Updated on: Nov 12, 2024 | 10:18 AM

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲವಾದ ನಂತರ ಅವರನ್ನು ಬಂಧಿಸಲಾಯಿತು. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್​ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿತ್ತು, ಇದಾದ ಬಳಿಕ ಶಾರುಖ್​ಗೆ ವೈಪ್ಲಸ್ ಭದ್ರತೆ ಕಲ್ಪಿಸಲಾಗತ್ತು. ಕಳೆದ ವಾರ, ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ನಂತರ ರಾಜಸ್ಥಾನದ 32 ವರ್ಷದ ವ್ಯಕ್ತಿಯನ್ನು ಕರ್ನಾಟಕದಲ್ಲಿ ಬಂಧಿಸಲಾಯಿತು.

ಮತ್ತಷ್ಟು ಓದಿ: Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ

ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದ ಬೆದರಿಕೆಯನ್ನು ಸ್ವೀಕರಿಸಿದ ಒಂದು ದಿನದ ಬಳಿಕ ದೇವಸ್ಥಾನದಲ್ಲಿ ಸಲ್ಮಾನ್ ಖಾನ್ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತಲೂ ಭೀಕರ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್​ಸ್ಟರ್​ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್‌ಗೆ ಬೆದರಿಕೆಯ ದೂರು ದಾಖಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?