AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛಿಛೋರೆ ಸಿನಿಮಾ ನಟಿ ಅಭಿಲಾಷಾ ಪಾಟಿಲ್​ ಕೊರೊನಾ ವೈರಸ್​ಗೆ ಬಲಿ

Abhilasha Patil Death: ಕೆಲವೇ ದಿನಗಳ ಹಿಂದೆ ಅಭಿಲಾಷಾ ಅವರು ಬನಾರಸ್​​ನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಅಲ್ಲಿಂದ ಹಿಂದಿರುಗಿ ಬಂದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕೊವಿಡ್​ ಪಾಸಿಟಿವ್​ ಎಂಬುದು ತಿಳಿದುಬಂದಿತ್ತು.

ಛಿಛೋರೆ ಸಿನಿಮಾ ನಟಿ ಅಭಿಲಾಷಾ ಪಾಟಿಲ್​ ಕೊರೊನಾ ವೈರಸ್​ಗೆ ಬಲಿ
ಅಭಿಲಾಷಾ ಪಾಟಿಲ್
ಮದನ್​ ಕುಮಾರ್​
|

Updated on: May 07, 2021 | 8:17 AM

Share

ಕೊರೊನಾ ವೈರಸ್​ ಮಹಾಮಾರಿಯ ಮರಣ ಮೃದಂಗ ಮುಂದುವರಿದಿದೆ. ಸಿನಿಮಾ ಕೆಲಸಗಳ ಸಲುವಾಗಿ ಸದಾ ಕಾಲ ಹೊರಗಡೆ ಇರುವ ಸೆಲೆಬ್ರಿಟಿಗಳಿಗೆ ಕೊವಿಡ್​ ಕಾಟ ಕೊಡುತ್ತಿದೆ. ಮರಾಠಿ ಚಿತ್ರರಂಗದ ಖ್ಯಾತ ನಟಿ ಅಭಿಲಾಷಾ ಪಾಟಿಲ್ ಅವರು ಕೊರೊನಾದಿಂದ ಮೃತರಾಗಿದ್ದಾರೆ ಪತಿ ಮತ್ತು ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಸುಶಾಂತ್​ ಸಿಂಗ್​ ರಜಪೂತ್​ ನಟನೆಯ ಛಿಛೋರೆ ಚಿತ್ರದಲ್ಲಿ ಅಭಿಲಾಷಾ ಅಭಿನಯಿಸಿದ್ದರು. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅಭಿಲಾಷಾ ಅವರು ಬನಾರಸ್​​ನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಅಲ್ಲಿಂದ ಹಿಂದಿರುಗಿ ಬಂದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕೊವಿಡ್​ ಪಾಸಿಟಿವ್​ ಎಂಬುದು ತಿಳಿದುಬಂತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರು ಮೇ 4ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಿಧನರಾದರು ಎಂದು ಅವರ ಸ್ನೇಹಿತ ಕುಶಾಲ್​ ತಿಳಿಸಿದ್ದಾರೆ.

ಅಭಿಲಾಷಾ ಅವರ ನಿಧನದ ಸುದ್ದಿ ಕೇಳಿ ಚಿತ್ರರಂಗದ ಅನೇಕರಿಗೆ ನೋವುಂಟಾಗಿದೆ. ಅಭಿಲಾಷಾ ನಟಿಸಿದ್ದ ಪರ್ವಾಸ್​ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಶಶಾಂಕ್​ ಉದಪುರಕರ್​ ಅವರು ಕಂಬನಿ ಮಿಡಿದ್ದಾರೆ. ‘ಅಭಿಲಾಷಾ ಅವರು ತುಂಬ ಪರಿಶ್ರಮ ಪಡುವಂತಹ ಕಲಾವಿದೆ ಆಗಿದ್ದರು. ಎನರ್ಜಿಟಿಕ್​ ಆಗಿದ್ದರು. ನೋವು ತೋಡಿಕೊಳ್ಳಲು ಪದಗಳೇ ಸಿಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶಶಾಂಕ್​ ಹೇಳಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ತಮಿಳು ನಟ ಪಾಂಡು ಅವರು ಮೇ 6ರಂದು ನಿಧನರಾದರು. ಕಾಲಿವುಡ್​ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​, ಪೋಸ್ಟರ್​ ಡಿಸೈನರ್​ ಮಸ್ತಾನ್​, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ:

 ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Renuka Sharma Death: ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು