AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀ ಟೂ ಆರೋಪಿ ಜೊತೆ ವೇದಿಕೆ ಹಂಚಿಕೊಂಡ ಕಮಲ್ ಹಾಸನ್; ಗಾಯಕಿಯ ಅಸಮಾಧಾನ

2018ರಲ್ಲಿ ಗೀತರಚನಕಾರ ವೈರಮುತ್ತು ವಿರುದ್ಧ ಚಿನ್ಮಯಿ ಅವರು ಲೈಂಗಿಕ ಕಿರಕುಳ ಆರೋಪ ಹೊರಿಸಿದ್ದರು. ಆ ಬಳಿಕ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಅವರನ್ನು ಐದು ವರ್ಷಗಳ ಕಾಲ ಇಂಡಸ್ಟ್ರಿಯಿಂದ ಬ್ಯಾನ್ ಮಾಡಲಾಯಿತು.

ಮೀ ಟೂ ಆರೋಪಿ ಜೊತೆ ವೇದಿಕೆ ಹಂಚಿಕೊಂಡ ಕಮಲ್ ಹಾಸನ್; ಗಾಯಕಿಯ ಅಸಮಾಧಾನ
ಕಮಲ್ ಹಾಸನ್-ಚಿನ್ಮಯಿ
ರಾಜೇಶ್ ದುಗ್ಗುಮನೆ
|

Updated on: Jan 02, 2024 | 11:48 AM

Share

ಗಾಯಕಿ ಚಿನ್ಮಯಿ ಶ್ರೀಪಾದ್ (Chinmayi Sripad) ಅವರು ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಈಗ ಅವರು ಕಮಲ್ ಹಾಸನ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮೀ ಟೂ ಆರೋಪಿ ವೈರಮುತ್ತು ಜೊತೆ ಕಮಲ್ ಹಾಸನ್ ವೇದಿಕೆ ಹಂಚಿಕೊಂಡಿದ್ದಾರೆ. ಇದನ್ನು ಚಿನ್ಮಯಿ ಶ್ರೀಪಾದ್ ಅವರು ಖಂಡಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ.

ಗೀತರಚನಕಾರ ವೈರಮುತ್ತು ಅವರು ಬರೆದ ‘ಮಹಾ ಕಿವಿತೈ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇತ್ತಿಚೆಗೆ ನಡೆದಿದೆ. ಈ ಕಾರ್ಯಕ್ರಮಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ, ಕಮಲ್ ಹಾಸನ್ ಮೊದಲಾದವರು ಭಾಗಿ ಆಗಿದ್ದರು. ಇದನ್ನು ಚಿನ್ಮಯಿ ಅವರು ಖಂಡಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡಿದವರ ಬೆಂಬಲಕ್ಕೆ ದೊಡ್ಡ ದೊಡ್ಡ ವ್ಯಕ್ತಿಗಳು ಇದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದ ಕುರಿತು ಸನ್ ನ್ಯೂಸ್ ಟ್ವೀಟ್ ಮಾಡಿತ್ತು. ಇದನ್ನು ಚಿನ್ಮಯಿ ಅವರು ರೀಟ್ವೀಟ್ ಮಾಡಿಕೊಂಡಿದ್ದಾರೆ. ‘ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ತಮಿಳುನಾಡಿನ ಕೆಲವು ಶಕ್ತಿಶಾಲಿ ವ್ಯಕ್ತಿಗಳು ಆಧಾರವಾಗಿದ್ದಾರೆ’ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ವಿನ್ನರ್​ಗೆ ಸಿಗೋದು 50 ಲಕ್ಷ ಅಲ್ಲ, 25 ಲಕ್ಷ ರೂಪಾಯಿ; ಶಿಕ್ಷೆ ಕೊಟ್ಟ ಬಿಗ್ ಬಾಸ್

2018ರಲ್ಲಿ ಗೀತರಚನಕಾರ ವೈರಮುತ್ತು ವಿರುದ್ಧ ಚಿನ್ಮಯಿ ಅವರು ಲೈಂಗಿಕ ಕಿರಕುಳ ಆರೋಪ ಹೊರಿಸಿದ್ದರು. ಆ ಬಳಿಕ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಅವರನ್ನು ಐದು ವರ್ಷಗಳ ಕಾಲ ಇಂಡಸ್ಟ್ರಿಯಿಂದ ಬ್ಯಾನ್ ಮಾಡಲಾಯಿತು. ಇದನ್ನು ಅವರು ಟೀಕಿಸುತ್ತಲೇ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!