ಚುನಾವಣಾ ಪ್ರಚಾರದ ವೇಳೆ ಸಹೋದರ ಚಿರಂಜೀವಿ ಭೇಟಿ ಮಾಡಿದ ಪವನ್ ಕಲ್ಯಾಣ್; ಮೂಡಿತು ಕುತೂಹಲ

‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ.

ಚುನಾವಣಾ ಪ್ರಚಾರದ ವೇಳೆ ಸಹೋದರ ಚಿರಂಜೀವಿ ಭೇಟಿ ಮಾಡಿದ ಪವನ್ ಕಲ್ಯಾಣ್; ಮೂಡಿತು ಕುತೂಹಲ
ಪವನ್​, ತ್ರಿಶಾ, ಚಿರಂಜೀವಿ
Follow us
|

Updated on: Apr 11, 2024 | 8:49 AM

ಪವನ್ ಕಲ್ಯಾಣ್ (Pawan Kalyan) ಅವರು ಸದ್ಯ ಲೋಕಸಭೆ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಅವರು ಪ್ರಚಾರ ಮಾಡುತ್ತಿದ್ದಾರೆ. ‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈಗ ಈ ಸಿನಿಮಾ ಸೆಟ್​ನಲ್ಲಿ ಪವನ್ ಕಲ್ಯಾಣ್ ಹಾಗೂ ಚಿರಂಜೀವಿಯ ಭೇಟಿ ನಡೆದಿದೆ. ಇದನ್ನು ವಿಡಿಯೋ ಮಾಡಿ ಹಂಚಿಕೊಳ್ಳಲಾಗಿದೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ. ಇದು ಸಹಜ ಭೇಟಿ ಎಂದು ಹೇಳಲಾಗುತ್ತಿದೆ.

2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Trisha: ಚಿರಂಜೀವಿ ನಟನೆಯ ‘ವಿಶ್ವಂಭರ’ ಚಿತ್ರಕ್ಕೆ ನಾಯಕಿ ಆದ ತ್ರಿಷಾ

‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.

ಸಿನಿಮಾದ ಸೆಟ್ ಸಖತ್ ಗಮನ ಸೆಳೆದಿದೆ. ದೊಡ್ಡ ಹನುಮಂತನ ಮೂರ್ತಿ ಹೈಲೈಟ್ ಆಗಿದೆ. ಇದು ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಲಿದೆ ಎನ್ನಲಾಗಿದೆ. ಈ ‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರು ‘ಬಿಂಬಸಾರ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌