AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acharya Box Office: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ‘ಆಚಾರ್ಯ’; ಇದುವರೆಗೆ ಆದ ಕಲೆಕ್ಷನ್ ಎಷ್ಟು?

Chiranjeevi | Ram Charan: ’ಆಚಾರ್ಯ’ ಚಿತ್ರದ ಮೊದಲ ದಿನದ ಗಳಿಕೆ ನಿರೀಕ್ಷಿತ ಮಟ್ಟದಲ್ಲಿ ಇರದಿದ್ದರೂ ಉತ್ತಮವಾಗಿತ್ತು. ಆದರೆ ಜನರು ಚಿತ್ರವನ್ನು ಇಷ್ಟಪಡಲಿಲ್ಲ. ಪರಿಣಾಮವಾಗಿ ಶನಿವಾರದಿಂದಲೇ ಚಿತ್ರಮಂದಿರಗಳು ಖಾಲಿ ಹೊಡೆಯತೊಡಗಿದವು. ವೀಕೆಂಡ್ ಆಗಿದ್ದರೂ ಕೂಡ ಭಾನುವಾರ ಪ್ರೇಕ್ಷಕರ ಸಂಖ್ಯೆ ಮತ್ತಷ್ಟು ತಗ್ಗಿತ್ತು. ಸೋಮವಾರವಂತೂ ಗಳಿಕೆ ಪೂರ್ಣವಾಗಿ ಕುಸಿತಕಂಡಿದೆ.

Acharya Box Office: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ‘ಆಚಾರ್ಯ’; ಇದುವರೆಗೆ ಆದ ಕಲೆಕ್ಷನ್ ಎಷ್ಟು?
ಚಿರಂಜೀವಿ-ರಾಮ್ ಚರಣ್
TV9 Web
| Updated By: shivaprasad.hs|

Updated on: May 03, 2022 | 2:40 PM

Share

‘ಆರ್​ಆರ್​ಆರ್’ ಚಿತ್ರದ ನಂತರ ರಾಮ್ ಚರಣ್ (Ram Charan) ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಟಾಲಿವುಡ್​ನ ಮೆಗಾಸ್ಟಾರ್ ಚಿರಂಜೀವಿ (Chiranjeevi) ಅವರ ಚಿತ್ರಗಳಿಗೆ ಅಭಿಮಾನಿಗಳು ಯಾವಾಗಲೂ ತೀವ್ರ ನಿರೀಕ್ಷೆಯಿಂದ ಕಾದಿರುತ್ತಾರೆ. ಈ ಎಲ್ಲಾ ನಿರೀಕ್ಷೆಗಳನ್ನು ಹೊತ್ತು ‘ಆಚಾರ್ಯ’ ತೆರೆಕಂಡಿತ್ತು. ತಂದೆ-ಮಗನ ಜೋಡಿ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ‘ಆಚಾರ್ಯ’ ತನ್ನ ಮಾಸ್ ಕಂಟೆಂಟ್​ ಇರುವ ಟ್ರೇಲರ್ ಮೂಲಕ ಮೊದಲಿಗೆ ಗಮನ ಸೆಳೆದಿತ್ತು. ಆದರೆ ಚಿತ್ರ ರಿಲೀಸ್ ಆದ ನಂತರ ಬಾಕ್ಸಾಫೀಸ್​ನಲ್ಲಿ (Acharya Box Office Collection) ದಾರುಣವಾಗಿ ಸೋಲು ಕಾಣುತ್ತಿದೆ. ಶುಕ್ರವಾರ ರಿಲೀಸ್ ಆಗಿದ್ದ ಚಿತ್ರದ ಮೊದಲ ದಿನದ ಗಳಿಕೆ ನಿರೀಕ್ಷಿತ ಮಟ್ಟದಲ್ಲಿ ಇರದಿದ್ದರೂ ಉತ್ತಮವಾಗಿತ್ತು. ಆದರೆ ಜನರು ಚಿತ್ರವನ್ನು ಇಷ್ಟಪಡಲಿಲ್ಲ. ಪರಿಣಾಮವಾಗಿ ಶನಿವಾರದಿಂದಲೇ ಚಿತ್ರಮಂದಿರಗಳು ಖಾಲಿ ಹೊಡೆಯತೊಡಗಿದವು. ವೀಕೆಂಡ್ ಆಗಿದ್ದರೂ ಕೂಡ ಭಾನುವಾರ ಪ್ರೇಕ್ಷಕರ ಸಂಖ್ಯೆ ಮತ್ತಷ್ಟು ತಗ್ಗಿತ್ತು. ಸೋಮವಾರವಂತೂ ಗಳಿಕೆ ಪೂರ್ಣವಾಗಿ ಕುಸಿತಕಂಡಿದೆ.

‘ಆಚಾರ್ಯ’ ಬಾಕ್ಸಾಫೀಸ್ ಕಲೆಕ್ಷನ್ ಬಗ್ಗೆ ‘ಆಂಧ್ರ ಬಾಕ್ಸಾಫೀಸ್’ ವರದಿ ಮಾಡಿದ್ದು, ಚಿತ್ರ ದಾರುಣವಾಗಿ ಸೋಲುಂಡಿದೆ ಎಂದು ತಿಳಿಸಿದೆ. ಕಲೆಕ್ಷನ್ ವಿವರ ನೀಡಿರುವ ಅದು, ಜಾಗತಿಕ ಮಟ್ಟದಲ್ಲಿ ಇದುವರೆಗೆ ಒಟ್ಟಾರೆ 73 ಕೋಟಿ ರೂಗಳನ್ನು ಚಿತ್ರವು ಗಳಿಸಿದೆ ಎಂದು ಮಾಹಿತಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಚಿತ್ರದ ಕಲೆಕ್ಷನ್ 55 ಕೋಟಿ ರೂ ಆಸುಪಾಸಿನಲ್ಲಿದೆ.

‘ಆಚಾರ್ಯ’ ಸೋಮವಾರದ ಕಲೆಕ್ಷನ್ ಎಷ್ಟು?

ಭಾರತದಲ್ಲಿ ‘ಆಚಾರ್ಯ’ ಚಿತ್ರವು ಮೊದಲ ದಿನ 37.1 ಕೋಟಿ ರೂ, ಎರಡನೇ ದಿನ 8.7 ಕೋಟಿ ರೂ, ಮೂರನೇ ದಿನ 6.6 ಕೋಟಿ ರೂ ಕಲೆಕ್ಷನ್ ಮಾಡಿತ್ತು. ಆದರೆ ನಾಲ್ಕನೇ ದಿನವಾದ ಸೋಮವಾರ ಚಿತ್ರವು ಬಹಳ ಕಡಿಮೆ ಮೊತ್ತವನ್ನು ಗಳಿಸಿದೆ ಎನ್ನಲಾಗಿದ್ದು, ಆ ಮೊತ್ತವು ನಗಣ್ಯ ಎಂದು ‘ಆಂಧ್ರ ಬಾಕ್ಸಾಫೀಸ್’ ತನ್ನ ವರದಿಯಲ್ಲಿ ಹೇಳಿದೆ. ಚಿತ್ರವು ಒಟ್ಟಾರೆ 140 ಕೋಟಿ ರೂಗಳಷ್ಟು ಮೊತ್ತಕ್ಕೆ ವಿತರಣೆ ಹಕ್ಕುಗಳನ್ನು ಪಡೆದುಕೊಂಡಿತ್ತು. ಆದರೆ ಕಲೆಕ್ಷನ್ 73 ಕೋಟಿ ಆಸುಪಾಸಿನಲ್ಲಿದ್ದು, ಚಿತ್ರವು ಗಳಿಕೆಯಲ್ಲಿ ಸೋತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಕುರಿತ ಟ್ವೀಟ್ ಇಲ್ಲಿದೆ:

ಸೋಮವಾರದ ಕಲೆಕ್ಷನ್ ಕುರಿತ ಟ್ವೀಟ್:

‘ಆಚಾರ್ಯ’ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದು, ಮಣಿ ಶರ್ಮ ಸಂಗೀತ ನೀಡಿದ್ದಾರೆ. ಪೂಜಾ ಹೆಗ್ಡೆ, ಜಿಶು ಸೇನ್​ಗುಪ್ತಾ, ಸೋನು ಸೂದ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿರಂಜೀವಿ ಮುಂದಿನ ಚಿತ್ರಗಳು ಯಾವುವು?

ಚಿರಂಜೀವಿ ತಮ್ಮ ಮುಂದಿನ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಗಾಡ್ ಫಾದರ್’ ಚಿತ್ರದ ಕೆಲಸಗಳು ನಡೆಯುತ್ತಿದ್ದು, ಮಲಯಾಳಂನ ‘ಲೂಸಿಫರ್’ ಚಿತ್ರದ ರಿಮೇಕ್ ಇದಾಗಿದೆ. ಸಲ್ಮಾನ್ ಖಾನ್ ಅತಿಥಿ ಪಾತ್ರದಲ್ಲಿ ಬಣ್ಣಹಚ್ಚುತ್ತಿರುವುದು ವಿಶೇಷ. ತಮಿಳಿನ ‘ವಿಶ್ವಾಸಂ’ ರಿಮೇಕ್​ನಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ.

ಇನ್ನಷ್ಟು ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Acharya Movie Review: ಹಳಿ ತಪ್ಪಿದ ‘ಆಚಾರ್ಯ’ನ ಪಾಠ

Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್