AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ 'ಜನ ನಾಯಗನ್' ಸಿನಿಮಾ ಲೀಕ್ ಆಗಿದ್ದು, ಕೆವಿಎನ್ ಪ್ರೊಡಕ್ಷನ್ಸ್ ತೀವ್ರ ತೊಂದರೆಯಲ್ಲಿದೆ. ನಟ ಚಿರಂಜೀವಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಚಿತ್ರರಂಗದ ಭವಿಷ್ಯಕ್ಕೆ ಪೈರಸಿ ಮಾರಕ ಎಂದು ಹೇಳಿರುವ ಅವರು, ಕೆವಿಎನ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಸಿನಿಮಾ ಉಳಿಸಲು ಪೈರಸಿ ನಾಶಪಡಿಸುವಂತೆ ಕರೆ ನೀಡಿದ್ದಾರೆ.

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on: Apr 10, 2026 | 4:34 PM

Share

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು ಆತಂಕ ಹೊರಹಾಕಿದ್ದಾರೆ. ಅಲ್ಲದೆ, ಕೆವಿಎನ್​​ಗೆ ಬೆಂಬಲ ಕೊಟ್ಟಿದ್ದಾರೆ.

ಚಿರಂಜೀವಿ ಅವರು ಚಿತ್ರರಂಗದ ಆಗು ಹೋಗುಗಳ ಬಗ್ಗೆ ಮಾತನಾಡುತ್ತಾರೆ.ಅವರು ಸದಾ ಚಿತ್ರರಂಗದ ಪರವಾಗಿ ನಿಲ್ಲುತ್ತಾ ಬಂದಿದ್ದಾರೆ. ಈಗ ಅವರು ಜನ ನಾಯಗನ್ ಸಿನಿಮಾ ಪರವಾಗಿ ಮಾತನಾಡಿದ್ದಾರೆ. ಈ ರೀತಿಯ ಅನ್ಯಾಯ ಯಾರಿಗೂ ಆಗಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ 

‘ಜನನಾಯಗನ್ ಸೋರಿಕೆ ಆಗಿದ್ದು ತುಂಬಾನೇ ಕಳವಳಕಾರಿ ವಿಷಯ. ಸಿನಿಮಾ ಎಂಬುದು ನಂಬಿಕೆ, ಪ್ರಯತ್ನ ಮತ್ತು ಅನೇಕರ ಕನಸಿನಿಂದ ಮಾಡಲ್ಪಟ್ಟಿದೆ. ಇಂತಹ ಘಟನೆಗಳು ಉದ್ಯಮದಲ್ಲಿರುವ ನಮ್ಮೆಲ್ಲರ ಮೇಲೆ ಪರಿಣಾಮ ಬೀರುತ್ತವೆ. ಸಿನಿಮಾಗೆ ಆದ ಹಾನಿಯನ್ನು ತಡೆಗಟ್ಟುವಲ್ಲಿ ಮತ್ತು ಅಪರಾಧಿಗಳನ್ನು ಶಿಕ್ಷಿಸುವಲ್ಲಿ ನಾವು ಕೆವಿಎನ್ ಪ್ರೊಡಕ್ಷನ್ಸ್ ಜೊತೆಗಿದ್ದೇವೆ. ಸಿನಿಮಾವನ್ನು ಗೌರವಿಸಲು ಮತ್ತು ರಕ್ಷಿಸಲು ನಾವೆಲ್ಲರೂ ನಮ್ಮ ಬೆಂಬಲವನ್ನು ನೀಡೋಣ. ಪೈರಸಿಯನ್ನು ನಾಶ ಮಾಡಿ, ಸಿನಿಮಾ ಉಳಿಸಿ’ ಎಂದು ಕರೆ ಕೊಟ್ಟಿದ್ದಾರೆ.

ಸಿನಿಮಾ ಲೀಕ್ ಪ್ರಕರಣ ಇಡೀ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ವಿಚಾರವಾಗಿ ಚಿತ್ರತಂಡ ಕಾನೂನು ಹೋರಾಟಕ್ಕೆ ಮುಂದಾಗುತ್ತಿದೆ. ಸಿನಿಮಾದ ದೃಶ್ಯಗಳನ್ನ ಶೇರ್ ಮತ್ತು ಡೌನ್ಲೋಡ್ ಮಾಡಿದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ