AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​
ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​ಪಾಧರ್​ ಆದ ಮೆಗಾಸ್ಟಾರ್​
TV9 Web
| Edited By: |

Updated on: Aug 22, 2021 | 9:47 AM

Share

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದು ಎಲ್ಲ ಕಡೆಗಳಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿದೆ. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ.

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಟೈಟಲ್​ ಲಾಂಚ್​ ಪೋಸ್ಟರ್​ನಲ್ಲಿ ಗಾಡ್​ಫಾದರ್​ ಎಂದು ಭಿನ್ನವಾಗಿ ಬರೆಯಲಾಗಿದೆ. ಟೈಟಲ್​ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಗನ್​ ಹಿಡಿದು ಕ್ಯಾಪ್​ ಹಾಕಿ ನಿಂತಿದ್ದಾರೆ. ಖ್ಯಾತ ನಿರ್ದೇಶಕ ಮೋಹನ್​ ರಾಜಾ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿಲ್ಲ. ಈ ಕಾರಣಕ್ಕೆ ಚಿರಂಜೀವಿ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಮಧ್ಯೆ, ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ.

ಇನ್ನು, ಚಿರಂಜೀವಿ ಬರ್ತ್​ಡೇಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಅಲ್ಲು ಅರ್ಜುನ್​ ಸೇರಿ ಸಾಕಷ್ಟು ನಟ-ನಟಿಯರು ಚಿರಂಜೀವಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!