AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​
ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​ಪಾಧರ್​ ಆದ ಮೆಗಾಸ್ಟಾರ್​
TV9 Web
| Edited By: |

Updated on: Aug 22, 2021 | 9:47 AM

Share

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದು ಎಲ್ಲ ಕಡೆಗಳಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿದೆ. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ.

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಟೈಟಲ್​ ಲಾಂಚ್​ ಪೋಸ್ಟರ್​ನಲ್ಲಿ ಗಾಡ್​ಫಾದರ್​ ಎಂದು ಭಿನ್ನವಾಗಿ ಬರೆಯಲಾಗಿದೆ. ಟೈಟಲ್​ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಗನ್​ ಹಿಡಿದು ಕ್ಯಾಪ್​ ಹಾಕಿ ನಿಂತಿದ್ದಾರೆ. ಖ್ಯಾತ ನಿರ್ದೇಶಕ ಮೋಹನ್​ ರಾಜಾ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿಲ್ಲ. ಈ ಕಾರಣಕ್ಕೆ ಚಿರಂಜೀವಿ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಮಧ್ಯೆ, ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ.

ಇನ್ನು, ಚಿರಂಜೀವಿ ಬರ್ತ್​ಡೇಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಅಲ್ಲು ಅರ್ಜುನ್​ ಸೇರಿ ಸಾಕಷ್ಟು ನಟ-ನಟಿಯರು ಚಿರಂಜೀವಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್