AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​
ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​ಪಾಧರ್​ ಆದ ಮೆಗಾಸ್ಟಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 22, 2021 | 9:47 AM

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದು ಎಲ್ಲ ಕಡೆಗಳಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿದೆ. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ.

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಟೈಟಲ್​ ಲಾಂಚ್​ ಪೋಸ್ಟರ್​ನಲ್ಲಿ ಗಾಡ್​ಫಾದರ್​ ಎಂದು ಭಿನ್ನವಾಗಿ ಬರೆಯಲಾಗಿದೆ. ಟೈಟಲ್​ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಗನ್​ ಹಿಡಿದು ಕ್ಯಾಪ್​ ಹಾಕಿ ನಿಂತಿದ್ದಾರೆ. ಖ್ಯಾತ ನಿರ್ದೇಶಕ ಮೋಹನ್​ ರಾಜಾ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿಲ್ಲ. ಈ ಕಾರಣಕ್ಕೆ ಚಿರಂಜೀವಿ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಮಧ್ಯೆ, ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ.

ಇನ್ನು, ಚಿರಂಜೀವಿ ಬರ್ತ್​ಡೇಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಅಲ್ಲು ಅರ್ಜುನ್​ ಸೇರಿ ಸಾಕಷ್ಟು ನಟ-ನಟಿಯರು ಚಿರಂಜೀವಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ