AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​
ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​ಪಾಧರ್​ ಆದ ಮೆಗಾಸ್ಟಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 22, 2021 | 9:47 AM

Share

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದು ಎಲ್ಲ ಕಡೆಗಳಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿದೆ. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ.

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಟೈಟಲ್​ ಲಾಂಚ್​ ಪೋಸ್ಟರ್​ನಲ್ಲಿ ಗಾಡ್​ಫಾದರ್​ ಎಂದು ಭಿನ್ನವಾಗಿ ಬರೆಯಲಾಗಿದೆ. ಟೈಟಲ್​ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಗನ್​ ಹಿಡಿದು ಕ್ಯಾಪ್​ ಹಾಕಿ ನಿಂತಿದ್ದಾರೆ. ಖ್ಯಾತ ನಿರ್ದೇಶಕ ಮೋಹನ್​ ರಾಜಾ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿಲ್ಲ. ಈ ಕಾರಣಕ್ಕೆ ಚಿರಂಜೀವಿ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಮಧ್ಯೆ, ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ.

ಇನ್ನು, ಚಿರಂಜೀವಿ ಬರ್ತ್​ಡೇಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಅಲ್ಲು ಅರ್ಜುನ್​ ಸೇರಿ ಸಾಕಷ್ಟು ನಟ-ನಟಿಯರು ಚಿರಂಜೀವಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ