AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ.

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​
ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​ಪಾಧರ್​ ಆದ ಮೆಗಾಸ್ಟಾರ್​
TV9 Web
| Edited By: |

Updated on: Aug 22, 2021 | 9:47 AM

Share

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದು ಎಲ್ಲ ಕಡೆಗಳಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿದೆ. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ.

ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಟೈಟಲ್​ ಲಾಂಚ್​ ಪೋಸ್ಟರ್​ನಲ್ಲಿ ಗಾಡ್​ಫಾದರ್​ ಎಂದು ಭಿನ್ನವಾಗಿ ಬರೆಯಲಾಗಿದೆ. ಟೈಟಲ್​ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಗನ್​ ಹಿಡಿದು ಕ್ಯಾಪ್​ ಹಾಕಿ ನಿಂತಿದ್ದಾರೆ. ಖ್ಯಾತ ನಿರ್ದೇಶಕ ಮೋಹನ್​ ರಾಜಾ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿಲ್ಲ. ಈ ಕಾರಣಕ್ಕೆ ಚಿರಂಜೀವಿ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಮಧ್ಯೆ, ಅಭಿಮಾನಿಗಳ ಬಳಿ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ.

ಇನ್ನು, ಚಿರಂಜೀವಿ ಬರ್ತ್​ಡೇಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಅಲ್ಲು ಅರ್ಜುನ್​ ಸೇರಿ ಸಾಕಷ್ಟು ನಟ-ನಟಿಯರು ಚಿರಂಜೀವಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?